Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಜಿ.ಪಂ. ಸಾಮಾನ್ಯ ಸಭೆಯಲ್ಲಿ...

ಮಂಡ್ಯ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಗಳಗಳನೆ ಅತ್ತ ಸದಸ್ಯೆ: ಹಾಸ್ಟೆಲ್ ವಾರ್ಡನ್ ವಿರುದ್ಧ ಕೊಲೆ ಬೆದರಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ6 Sept 2018 9:49 PM IST
share
ಮಂಡ್ಯ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಗಳಗಳನೆ ಅತ್ತ ಸದಸ್ಯೆ: ಹಾಸ್ಟೆಲ್ ವಾರ್ಡನ್ ವಿರುದ್ಧ ಕೊಲೆ ಬೆದರಿಕೆ ಆರೋಪ

ಮಂಡ್ಯ, ಸೆ.6: ಹಾಸ್ಟೆಲ್ ವಾರ್ಡನ್ ಪುಡಿ ರೌಡಿಗಳಿಂದ ತನಗೆ ಬೆದರಿಕೆ ಹಾಕಿಸಿದ್ದಾರೆಂದು ಆರೋಪಿಸಿ ಜಿಲ್ಲಾ ಪಂಚಾಯತ್ ಸದಸ್ಯೆ ಸಾಮಾನ್ಯ ಸಭೆಯಲ್ಲಿ ಗಳಗಳನೆ ಅತ್ತ ಪ್ರಸಂಗ ಗುರುವಾರ ನಡೆಯಿತು.

ಅಧ್ಯಕ್ಷೆ ನಾಗರತ್ನ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆ ವೇಳೆ ನಾಗಮಂಗಲ ತಾಲೂಕು ಮಾಯಿಗೋನಹಳ್ಳಿ ಕ್ಷೇತ್ರದ ಸದಸ್ಯೆ ಸುನಂದಮ್ಮ ಕಣ್ಣೀರು ಹಾಕಿಕೊಂಡೇ ತಮ್ಮ ಅಳಲು ತೋಡಿಕೊಂಡರು.

ತಾಲೂಕಿನ ಹಾಸ್ಟೆಲ್‍ಗಳ ನಿರ್ವಹಣೆ ಸರಿಯಿಲ್ಲ. ತನ್ನ ಕ್ಷೇತ್ರದ ವ್ಯಾಪ್ತಿಯ ಶಿಕಾರಿಪುರ ಹಾಸ್ಟೆಲ್ ನಿರ್ವಹಣೆ ಬಗ್ಗೆ ಹಲವು ದೂರು ನೀಡಿದರೂ ಕ್ರಮವಹಿಸಿಲ್ಲ. ಸದರಿ ಹಾಸ್ಟೆಲ್ ವಾರ್ಡನ್ ಪಾರ್ವತಿ ಲೋಕೇಶ್ ನನ್ನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಕೆಲವು ಪುಡಿ ರೌಡಿಗಳಿಂದ ಬೆದರಿಕೆ ಹಾಕಿಸುತ್ತಿದ್ದಾರೆ. ಈ ಸಂಬಂದ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮವಹಿಸಿಲ್ಲ. ಚುನಾಯಿತ ಜನಪ್ರತಿನಿಧಿಯಾದ ನನಗೇ ಈ ರೀತಿಯಾದರೆ ಬೇರೆಯವರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ವಾರ್ಡನ್ ಪಾರ್ವತಿ ಲೋಕೇಶ್ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಸ್ಪಷ್ಟನೆ ನೀಡಲು ಮುಂದಾದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಲತಿ ಅವರನ್ನು ಇತರ ಸದಸ್ಯರು ತರಾಟೆಗೆ ತೆಗೆದುಕೊಂಡರು. ಅಂತಿಮವಾಗಿ ಸದರಿ ವಾರ್ಡನ್ ಪಾರ್ವತಿ ಅವರನ್ನು ಸಭೆಗೆ ಕರೆಸಲು ಹಾಗೂ ಬೇರೆ ಹಾಸ್ಟೆಲ್‍ಗೆ ನಿಯೋಜಿಸಲು ಮತ್ತು ಹಾಸ್ಟೆಲ್‍ಗಳಿಗೆ ಸ್ಥಾಯಿ ಸಮಿತಿ ಸದಸ್ಯರು ದಿಢೀರ್ ಭೇಟಿ ಪರಿಸ್ಥಿತಿ ಅವಲೋಕಿಸಲು ಸಭೆ ನಿರ್ಣಯ ಕೈಗೊಂಡಿತು.

ಜಿಲ್ಲೆಯ ವಿದ್ಯಾರ್ಥಿನಿಲಯಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜತೆಗೆ ಅಧಿಕಾರಿಗಳು ಸ್ವಚ್ಛತೆ ಹೆಚ್ಚು ನೀಡಬೇಕು. 
ವಿದ್ಯಾರ್ಥಿನಿಲಯಗಳ ಕಾಮಗಾರಿಗಳು ಗುಣಮಟ್ಟದಲ್ಲಿ ಇರಬೇಕು. ಹಾಸ್ಟೆಲ್‍ಗಳಲ್ಲಿ ಬಯೋಮೆಟ್ರಿಕ್ ಅಳವಡಿಸಬೇಕು. ವಿದ್ಯಾರ್ಥಿಗಳ ತಿಂಡಿ ಹಾಗೂ ಊಟದ ಮೆನು ಚಾರ್ಟ್ ಪ್ರದರ್ಶಿಸಬೇಕು. ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧ್ಯಕ್ಷೆ ನಾಗರತ್ನ ಸ್ವಾಮಿ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪೂರ್ಣಗೊಂಡಿರದ ಬಗ್ಗೆ ಅಶೋಕ್, ಬಿ.ಎಲ್.ದೇವರಾಜು, ತ್ಯಾಗರಾಜು ಸೇರಿದಂತೆ ಹಲವು ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ  19 ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಯಲ್ಲಿದ್ದು ಅಗತ್ಯ ಕ್ರಮವಹಿಸುವುದಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಕೃಷ್ಣ ತಿಳಿಸಿದರು.

ಭೂಸೇನಾ ನಿಗಮಕ್ಕೆ ವಹಿಸಿರುವ ಹಲವಾರು ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಸರಕಾರ ಅನುದಾನ ನೀಡಿದ್ದರೂ ಕಾಮಗಾರಿ ಆರಂಭಿಸಿಲ್ಲ. ಸಂಬಂಧಿಸಿದ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸದಸ್ಯರು ಆಗ್ರಹಿಸಿದರು.

ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಚ್.ಜಿ.ಮಂಜು, ಶಿವಪ್ರಕಾಶ್, ರವಿ, ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X