Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಿಂದ ಅಪಹರಿಸಲ್ಪಟ್ಟ ವಿಗ್ರಹಗಳನ್ನು...

ಭಾರತದಿಂದ ಅಪಹರಿಸಲ್ಪಟ್ಟ ವಿಗ್ರಹಗಳನ್ನು ಮರಳಿಸಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ6 Sept 2018 10:03 PM IST
share

ವಾಶಿಂಗ್ಟನ್,ಸೆ.6: ಭಾರತದಿಂದ ಅಪಹರಿಸಲ್ಪಟ್ಟು, ಅಮೆರಿಕದ ಎರಡು ಮ್ಯೂಸಿಯಂಗಳಲ್ಲಿ ಪ್ರದರ್ಶನಕ್ಕಿರಿಸಲಾಗಿದ್ದ ಲಕ್ಷಾಂತರ ಡಾಲರ್ ಮೌಲ್ಯದ ಎರಡು ಪುರಾತನ ವಿಗ್ರಹಗಳನ್ನು ವಾಶಿಂಗ್ಟನ್ ಭಾರತಕ್ಕೆ ಬುಧವಾರ ಹಸ್ತಾಂತರಿಸಿದೆ.

ಚೋಳ ರಾಜವಂಶ ಆಳ್ವಿಕೆ ಕಾಲದ ಹಾಗೂ 12ನೇ ಶತಮಾನಕ್ಕೆ ಸೇರಿದ ಶಿವನ ವಿಗ್ರಹ ‘ಲಿಂಗೋದ್ಭವಮೂರ್ತಿ’ ಹಾಗೂ 12ನೇ ಶತಮಾನಕ್ಕೆ ಸೇರಿದ ಬಿಹಾರದ ಬೋಧಗಯಾ ದೇವಸ್ಥಾನದ ಸಮೀಪದ ದೇಗುಲವೊಂದರಿಂದ ಅಪಹರಿಸಲ್ಪಟ್ಟಿದ್ದ ಮಂಜುಶ್ರೀ ಎಂಬ ಬೋಧಿಸತ್ವನ ವಿಗ್ರಹವು ಅಮೆರಿಕ ಭಾರತಕ್ಕೆ ಮರಳಿಸಿರುವ ವಿಗ್ರಹಗಳಾಗಿವೆ.

ಪ್ರಸ್ತುತ ‘ಲಿಂಗೋದ್ಭವ’ಮೂರ್ತಿಯ ಮೌಲ್ಯ 2.25 ಲಕ್ಷ ಡಾಲರ್ ಎಂದು ಅಂದಾಜಿಸಲಾಗಿದ್ದು, ತಮಿಳುನಾಡಿನಿಂದ ಅಪಹರಿಸಲ್ಪಟ್ಟಿದ್ದ ಆ ಪ್ರತಿಮೆಯನ್ನು ಅಲಬಾಮಾದ ಬರ್ಮಿಂಗ್‌ಹ್ಯಾಂ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಮಂಜುಶ್ರೀ ವಿಗ್ರಹವನ್ನು ಉತ್ತರ ಕರೋಲಿನಾದ ವಿ.ವಿ.ಗೆ ಸೇರಿದ ಆಕ್ಲಂಡ್ ಕಲಾ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿತ್ತು.

ಮಂಗಳವಾರ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಧೂತಾವಾಸ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಎರಡೂ ವಿಗ್ರಹಗಳನ್ನು ಮ್ಯಾನ್‌ಹಟನ್‌ನ ಜಿಲ್ಲಾ ಅಟಾರ್ನಿ ಸೈರಸ್ ವೇನ್ಸ್ ಜೂ. ಅವರು ಭಾರತೀಯ ಕಾನ್ಸುಲ್ ಜನರಲ್, ಸಂದೀಪ್ ಚಕ್ರವರ್ತಿಯವರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ವೇನ್ಸ್ ಮಾತನಾಡಿ, ಭಾರತದಿಂದ ಅಪಹರಿಸಲಾದ ಹಲವಾರು ಸೊತ್ತುಗಳನ್ನು ಈಗಾಗಲೇ ಭಾರತಕ್ಕೆ ಮರಳಿಸಲಾಗಿದೆ, ಮುಂದೆಯೂ ತನ್ನ ಇಲಾಖೆಯು, ಭಾರತಕ್ಕೆ ಸೇರಿದ ಕಲಾಕೃತಿಗಳನ್ನು ಹಿಂತಿರುಗಿಸಲಿದೆಯೆಂದು ತಿಳಿಸಿದರು.

ಕಳವುಗೈದ ಕಲಾಕೃತಿಗಳ ಅಕ್ರಮ ವ್ಯಾಪಾರವನ್ನು ತಡೆಗಟ್ಟಲು ಪಾಲುದಾರ ದೇಶಗಳೊಂದಿಗೆ ನಡೆಯುತ್ತಿರುವ ಜಂಟಿ ತನಿಖೆಯ ಕ್ರಮವಾಗಿ ಕಳೆದ ಆಗಸ್ಟ್‌ನಲ್ಲಿ ಮ್ಯಾನ್‌ಹಟ್ಟನ್ ಜಿಲ್ಲಾ ಅಟಾರ್ನಿ ಅವರ ನೇತೃತ್ವದ ಅಮೂಲ್ಯ ಕಲಾಕೃತಿಗಳ ಕಳ್ಳಸಾಗಣೆ ನಿಗ್ರಹ ದಳವು ಈ ಎರಡು ವಿಗ್ರಹಗಳನ್ನು ವಶಪಡಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X