Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹವಾಮಾನ ಬದಲಾವಣೆ ನಮಗಿಂತ ವೇಗವಾಗಿದೆ:...

ಹವಾಮಾನ ಬದಲಾವಣೆ ನಮಗಿಂತ ವೇಗವಾಗಿದೆ: ವಿಶ್ವಸಂಸ್ಥೆ

ಕೇರಳ ಪ್ರವಾಹ

ವಾರ್ತಾಭಾರತಿವಾರ್ತಾಭಾರತಿ6 Sept 2018 10:12 PM IST
share
ಹವಾಮಾನ ಬದಲಾವಣೆ ನಮಗಿಂತ ವೇಗವಾಗಿದೆ: ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಸೆ. 6: ಕೇರಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹ ಹಾಗೂ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಕಾಳ್ಗಿಚ್ಚು ದುರಂತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್, ಹವಾಮಾನ ಬದಲಾವಣೆ ನಮಗಿಂತ ವೇಗವಾಗಿದ್ದು ಇನ್ನಷ್ಟು ಭಯಾನಕ ಪ್ರಾಕೃತಿಕ ವಿಪತ್ತು ಸಂಭವಿಸದಂತೆ ತಡೆಯಲು ಕ್ಷಿಪ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಕಳೆದ ವರ್ಷ ಹವಾಮಾನಕ್ಕೆ ಸಂಬಂಧಿಸಿದ ಪ್ರಾಕೃತಿಕ ದುರಂತಗಳಿಂದ ಸಾವಿರಾರು ಜನ ಮೃತಪಟ್ಟಿದ್ದು 320 ಬಿಲಿಯನ್ ಡಾಲರ್ ನಷ್ಟ ಉಂಟಾಗಿದೆ ಎಂದವರು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಪ್ರಭಾವ ವಿನಾಶಕಾರಿಯಾಗಿದೆ. ಇಂತಹ ವಿಪತ್ತಿಗೆ ಸಿಲುಕಿ ಬವಣೆ ಪಡುವವರು ಸಾಮಾನ್ಯವಾಗಿ ಬಡ ಮತ್ತು ದುರ್ಬಲ ಜನರೇ ಆಗಿರುತ್ತಾರೆ ಎಂದು ಅವರು ತಿಳಿಸಿದರು. 2018ರ ಹೊಸ ಹವಾಮಾನ ಆರ್ಥಿಕ ವರದಿಯನ್ನು ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

  ಭಾರತದ ಕೇರಳದಲ್ಲಿ ಭಯಾನಕ ಪ್ರವಾಹ, ಕ್ಯಾಲಿಫೋರ್ನಿಯಾ ಮತ್ತು ಕೆನಡಾದಲ್ಲಿ ಘೋರ ಕಾಳ್ಗಿಚ್ಚು, ಆರ್ಕಿಟಿಕ್ ಪ್ರದೇಶದಲ್ಲಿ ಉಷ್ಣತೆ ಅಪಾಯಕಾರಿಯಾಗಿ ಏರುತ್ತಿರುವ ವಿದ್ಯಮಾನ ಈ ವರ್ಷ ನಡೆದಿದೆ. ಸೂಚನೆ ಸ್ಪಷ್ಟವಾಗಿದೆ. ಕಳೆದ 19 ವರ್ಷಗಳಲ್ಲಿ 18 ವರ್ಷಗಳು ಅತ್ಯಂತ ಉಷ್ಣತೆಯ ವರ್ಷಗಳಾಗಿದ್ದು ಹಸಿರುಮನೆ(ಗ್ರೀನ್‌ಹೌಸ್) ಅನಿಲದ ಸಾಂದ್ರತೆಯು ಏರುತ್ತಲೇ ಹೋಗುತ್ತಿದೆ ಎಂದವರು ತಿಳಿಸಿದರು.

ಹವಾಮಾನ ಬದಲಾವಣೆಯ ನಾಗಾಲೋಟ ವಾಸ್ತವಿಕ ಸಾಧ್ಯತೆಯಾಗಿದ್ದು ಸಮುದಾಯ, ಅರ್ಥವ್ಯವಸ್ಥೆ, ದೇಶಗಳ ಶಾಂತಿ ಮತ್ತು ಭದ್ರತೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆದ್ದರಿಂದ ಹೆಚ್ಚಿನ ಮಹಾತ್ವಾಕಾಂಕ್ಷೆ ಮತ್ತು ಅವಸರದಿಂದ ಕಾರ್ಯ ನಿರ್ವಹಿಸಬೇಕು ಎಂದರು. ವಿಶ್ವದ ಸುಮಾರು 130ಕ್ಕೂ ಅಧಿಕ ಪ್ರಮುಖ ಸಂಸ್ಥೆಗಳು ಇದೀಗ ನವೀಕರಿಸಬಹುದಾದ ಇಂಧನ ಬಳಸಲು ನಿರ್ಧರಿಸುವ ಮೂಲಕ ಹವಾಮಾನ ಬದಲಾವಣೆಯ ಬಗ್ಗೆ ಗಮನ ಹರಿಸಿವೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿರುವ ಸುಮಾರು 1 ಬಿಲಿಯನ್ ಜನತೆ ಇನ್ನೂ ವಿದ್ಯುತ್‌ಚ್ಛಕ್ತಿಯ ಸೌಲಭ್ಯದಿಂದ ವಂಚಿತರಾಗಿದ್ದು ಶುದ್ಧ ಇಂಧನ ಯೋಜನೆಯು ಅವರಿಗೆ ನೆರವಾಗಲಿದೆ ಎಂದು ಗುಟೆರಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X