Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಲು ಉತ್ಪಾದನೆಗೆ ಸರಕಾರದ ಸಹಕಾರ ಸದಾ...

ಹಾಲು ಉತ್ಪಾದನೆಗೆ ಸರಕಾರದ ಸಹಕಾರ ಸದಾ ಇರಲಿದೆ: ಉಪಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ6 Sept 2018 11:42 PM IST
share
ಹಾಲು ಉತ್ಪಾದನೆಗೆ ಸರಕಾರದ ಸಹಕಾರ ಸದಾ ಇರಲಿದೆ: ಉಪಮುಖ್ಯಮಂತ್ರಿ ಪರಮೇಶ್ವರ್

ತುಮಕೂರು,ಸೆ.6: ಹಾಲು ಉತ್ಪಾದನೆ ಇಂದು ಲಾಭದಾಯಕ ಉದ್ಯಮವಾಗಿದ್ದು, ಮಾರುಕಟ್ಟೆ ದರವನ್ನು ಇನ್ನಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ, ಬಡಚೋಡನಹಳ್ಳಿ, ದೊಡ್ಡರಸನಹಳ್ಳಿ,ಅರಳಾಪುರ ಹಾಗೂ ಕೊಂಡಾವಾಡಿಯಲ್ಲಿನ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟನೆಯನ್ನು ಒಂದೇ ಸ್ಥಳದಲ್ಲಿ ನೆರವೇರಿಸಿ, ಬಳಿಕ ಮಾತನಾಡಿದ ಅವರು, 80ನೇ ದಶಕದಲ್ಲಿ ಹಾಲು ಉತ್ಪಾದನೆ ದೊಡ್ಡ ಆಂದೋಲನದ ರೀತಿ ಶುರುವಾಗಿ, ಇಂದು ಲಾಭದಾಯಕ ಉದ್ಯಮವಾಗಿ ಪರಿಣಮಿಸಿದೆ. ಇಡೀ ವಿಶ್ವದಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ರಾಷ್ಟ್ರ ಭಾರತ. ನಮ್ಮಲ್ಲಿ ದಿನಕ್ಕೆ 76 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ಉತ್ಪಾದಿಸಲಾಗುತ್ತಿದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದರು.

ನಮ್ಮ ಸರಕಾರ ರೈತರ ಪರವಿದೆ. ಹಿಂದೆ ಕೇಂದ್ರದಲ್ಲಿ‌ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ 72 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದರು. ಕಳೆದ ಸಿದ್ದರಾಮಯ್ಯ ಅವರ ಸರಕಾರ ಕೂಡ ಸಹಕಾರ ಬ್ಯಾಂಕ್ ನಲ್ಲಿನ 10 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ಅಂತೆಯೇ ಸಮ್ಮಿಶ್ರ ಸರಕಾರ ಕೂಡ 49 ಸಾವಿರ ಕೋಟಿ ರೂ. ರೈತತ ಸಾಲವನ್ನು ಹಂತಹಂತವಾಗಿ ಮನ್ನಾ ಮಾಡಲಿದೆ. ನಮ್ಮದು ಸದಾ ರೈತರ ಪರ ಸರಕಾರ ಎಂದರು.  ಇದರ ಜೊತೆಗೆ ಕೈಸಾಲ ಮಾಡಿಕೊಂಡಿರುವವರ ಸಾಲವನ್ನೂ ಮನ್ನಾ ಮಾಡುವ ಋಣಮುಕ್ತ ಕಾಯಿದೆಯನ್ನು ಮಂಜೂರು ಮಾಡಲು ಹೊರಟಿದ್ದೇವೆ ಎಂದರು. 

ರೈತರ ಬದುಕು ಹಸನಾಗಲು ಹಾಲು ಉತ್ಪಾದನೆ ಮಹತ್ವದ ಸ್ಥಾನದಲ್ಲಿದೆ. ಹೀಗಾಗಿ ಈ ಉದ್ದಿಮೆ ಇನ್ನಷ್ಟು ಹೆಚ್ಚು ಬೆಳೆಯಲು ನಮ್ಮ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸದ ಮುದ್ದಹನುಮೇಗೌಡ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X