Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಳವಳಿಗಳು ಎಂದಿಗೂ ಸಾಯುವುದಿಲ್ಲ:...

ಚಳವಳಿಗಳು ಎಂದಿಗೂ ಸಾಯುವುದಿಲ್ಲ: ಪ್ರೊ.ಚಂಪಾ

ವಾರ್ತಾಭಾರತಿವಾರ್ತಾಭಾರತಿ7 Sept 2018 6:16 PM IST
share
ಚಳವಳಿಗಳು ಎಂದಿಗೂ ಸಾಯುವುದಿಲ್ಲ: ಪ್ರೊ.ಚಂಪಾ

ಬೆಂಗಳೂರು, ಸೆ.7: ಯಾವುದೇ ಚಳವಳಿಯಾಗಲಿ ಎಂದಿಗೂ ಸಾಯುವುದಿಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ನಗರದ ನ್ಯಾಷನಲ್ ಕಾಲೇಜಿನ ಕನ್ನಡ ವಿಭಾಗ ಹಮ್ಮಿಕೊಂಡಿದ್ದ ‘ಚಳವಳಿಗಳು ಮತ್ತು ಹೊಸಗನ್ನಡ ಸಾಹಿತ್ಯ’ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷಿಪ್ರಕ್ರಾಂತಿಯ ಚಳವಳಿಗಳಿಗೆ ಅಳಿವಿಲ್ಲ. ಚಳವಳಿ ಕೊನೆಗೊಳ್ಳಬಹುದು, ಆದರೆ, ಸಾಯುವುದಿಲ್ಲ ಎಂದು ಪ್ರತಿಪಾದಿಸಿದರು.

ವಚನಕಾರರು, ದಾರ್ಶನಿಕರು, ಶರಣರು ಸಾಮಾಜಿಕ ಕ್ರಾಂತಿ ಹಾಗೂ ಚಳವಳಿಗಳ ಹುಟ್ಟಿಗೆ ಕಾರಣಕರ್ತರಾಗಿದ್ದಾರೆ. ಸಮಾಜದಲ್ಲಿನ ಅನಿಷ್ಟ ಪದ್ಧತಿಗಳ ವಿರುದ್ಧ, ಒಂದು ವರ್ಗದ ವಿರುದ್ಧ ಅಪಾರವಾದ ಹೋರಾಟ ಮಾಡಿದ್ದಾರೆ. ಅವರ ಚಳವಳಿ ಇಂದಿಗೂ ಮಾದರಿಯಾಗಿದೆ. ದಲಿತ ಚಳವಳಿ, ಪ್ರಗತಿಪರ ಚಳವಳಿ, ಬಂಡಾಯ ಚಳವಳಿ ಪ್ರಭಾವ ಕಡಿಮೆಯಾಗಿದೆ ಎಂದಮಾತ್ರಕ್ಕೆ ಚಳವಳಿ ನಾಶಗೊಂಡಿದೆ ಎಂದರ್ಥವಲ್ಲ ಎಂದು ಹೇಳಿದರು.

ನಮ್ಮ ಹಿಂದಿನ ಕಾಲದ ಸಾಮಾಜಿಕ ಹೋರಾಟಗಾರರು, ದಲಿತ, ದಮನಿತ, ರೈತ, ಕೃಷಿ-ಕೂಲಿ ಕಾರ್ಮಿಕ ನಾಯಕರು, ಹೋರಾಟಗಾರರು ಬಿತ್ತಿದ ಬೀಜಗಳು ಎಂದಿಗೂ ಸಾಯುವುದಿಲ್ಲ. ಸಂದರ್ಭಕ್ಕೆ ತಕ್ಕಂತೆ ಮೊಳಕೆ ಒಡೆಯುತ್ತಿರುತ್ತವೆ. ಹೀಗಾಗಿ, ನಾಡಿನ ಯಾವುದೇ ಚಳವಳಿಯೂ ನಾಶವಾಗುವುದಿಲ್ಲ ಎಂದು ವಿಶ್ಲೇಷಿಸಿದರು.

ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣ ಮನುಕುಲಕ್ಕೆ ಎಷ್ಟು ಅಪಾಯವೋ ಅಷ್ಟೇ ಕೇಸರೀಕರಣವೂ ಅಪಾಯಕಾರಿ. ಒಂದು ವ್ಯವಸ್ಥೆ ವಿರುದ್ಧದ ಹೋರಾಟ ನಡೆಸಿದವರನ್ನು ಹತ್ಯೆ ಮಾಡಲಾಗುತ್ತಿದೆ. ಇದು, ಇನ್ನಷ್ಟು ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪ್ರವೃತ್ತಿಯನ್ನು ಪ್ರತಿಭಟಿಸಬೇಕು ಎಂದು ಹೇಳಿದರು.

ಪ್ರಾಧ್ಯಾಪಕ ಡಾ.ವಿ.ಬಿ.ತಾರಕೇಶ್ವರ್ ಮಾತನಾಡಿ, ಆಯಾ ಕಾಲಘಟ್ಟದಲ್ಲಿ ನಡೆದ ಚಳವಳಿಗಳ ಬಗ್ಗೆ ಮರು ವಿಮರ್ಶೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಸಾಮಾಜಿಕ ಬದಲಾವಣೆಗೆ ಹುಟ್ಟಿದ ಹೋರಾಟದ ಪ್ರಕ್ರಿಯೆ ಚಳವಳಿಯಾಗಿದೆ. ನಿರ್ದಿಷ್ಟ ಬದಲಾವಣೆ ಬಿತ್ತುವುದು ಇದರ ಮುಖ್ಯ ಉದ್ದೇಶವಾಗಿದ್ದು, ಚಳವಳಿಯ ಗುರುತಿಸುವಿಕೆ ಆಯಾ ಕಾಲಘಟ್ಟವನ್ನು ತಿಳಿಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎ.ಎಚ್.ರಾಮರಾವ್, ಎಸ್.ಎನ್.ನಾಗರಾಜರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X