Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್...

ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ7 Sept 2018 7:18 PM IST
share
ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ

ಬೆಂಗಳೂರು, ಸೆ.7: ರಾಜ್ಯಾದ್ಯಂತ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನ (Single use packaged water bottles) ನೀರಿನ ಬಳಕೆ, ಸರಬರಾಜು ಮಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಇಂತಹ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಕಾಗದ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸರಕಾರಿ ಸಭೆ, ಸಮಾರಂಭ, ಕಾರ್ಯಾಗಾರ, ವಿಚಾರ ಸಂಕಿರಣ, ಇತ್ಯಾದಿಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್‌ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಏರ್ಪಡಿಸಬೇಕು.

ಕಚೇರಿಗಳಲ್ಲಿ ಸಾಮಾನ್ಯವಾಗಿ ಆಗಿಂದಾಗ್ಗೆ ಸಭೆ, ಸಮಾರಂಭಗಳು ಏರ್ಪಡುವ ಸಮಿತಿ ಕೊಠಡಿಗಳು, ಕಾನ್ಫರೆನ್ಸ್ ಹಾಲ್‌ಗಳು ಇತ್ಯಾದಿ ಸಭಾಂಗಣಗಳಲ್ಲಿ ಕೇಂದ್ರ ಸರಕಾರದ ಜಾಲತಾಣ https://gem.gov.in ರಲ್ಲಿ ಅನುಮೋದಿಸಲ್ಪಟ್ಟಿರುವ ಅಥವಾ ರಾಜ್ಯ ಸರಕಾರದಿಂದ ಅಂಗೀಕರಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ RO ಮತ್ತು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವುದಕ್ಕೆ ವ್ಯವಸ್ಥೆ ಮಾಡಬೇಕು.

ಎಲ್ಲ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರು ಸರಬರಾಜಿಗಾಗಿ ಕೇಂದ್ರ ಸರಕಾರದ ಜಾಲತಾಣ https://gem.gov.in ದಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ RO ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾಪನೆಗೊಳಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X