Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ತೆನೆ...

ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ತೆನೆ ಹಬ್ಬ ಎಚ್ಚರಿಸಲಿ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ7 Sept 2018 10:15 PM IST
share
ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ತೆನೆ ಹಬ್ಬ ಎಚ್ಚರಿಸಲಿ: ಉಡುಪಿ ಬಿಷಪ್

ಉಡುಪಿ, ಸೆ.7: ಮಳೆಯಿಂದ ಸಮೃದ್ಧಗೊಂಡು ಪೃಕೃತಿಯು ಫಲಭರಿತವಾಗುವಾಗ ಭರವಸೆಯ ಮಹಾಪೂರದಂತೆ ಬರುವ ತೆನೆ ಹಬ್ಬ ಎಲ್ಲರನ್ನು ಸಂತೃಪ್ತಿಗೊಳಿಸುತ್ತದೆ. ಇದನ್ನೇ ಮಾತೆ ಮರಿಯಮ್ಮನವರ ಹುಟ್ಟುಹಬ್ಬ ಅಥವಾ ಮೊಂತಿ ಹಬ್ಬವಾಗಿ ಅಕ್ಕರೆಯಿಂದ ಆಚರಿಸಲಾಗುತ್ತದೆ ಎಂದು ಪರಮಪೂಜ್ಯ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಲೋಬೊ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಇಂದು ಎಲ್ಲರನ್ನು ಸಾಕಿ ಸಲಹುವ ಪೃಕೃತಿಮಾತೆಯು ಮನುಷ್ಯನ ದಬ್ಬಾಳಿಕೆಗೆ ಒಳಗಾಗಿದ್ದಾಳೆ. ಇದರ ಪರಿಣಾಮವಾಗಿ ಇತ್ತೀಚೆಗೆ ಕೇರಳ ಹಾಗೂ ಕೊಡಗಿ ನಲ್ಲಿ ಸಂವಿಸಿದ ಪ್ರಕೃತಿ ವಿಕೋಪಗಳು, ಅನಿಶ್ಚಿತ ಮಳೆ, ವಾತಾವರಣದ ವೈಪರೀತ್ಯ, ವಿಚಿತ್ರವಾದ ರೋಗರುಜಿನಗಳು, ಇನ್ನಿತರ ವಿಷಮತೆಗಳು ಸಂಭವಿಸುತ್ತಿವೆ. ಒಂದು ರೀತಿಯಲ್ಲಿ ಇದನ್ನು ಪೃಕೃತಿಮಾತೆಯ ದುಃಖ ಎನ್ನ ಬಹುದು. ಭೂಮಾತೆಯನ್ನು, ಪರಿಸರವನ್ನು ಸಂರಕ್ಷಿಸುವ ಆದ್ಯ ಕರ್ತವ್ಯದ ಬಗ್ಗೆ ಈ ಹಬ್ಬವು ಎಚ್ಚರಿಸುತ್ತದೆ. ಇದಕ್ಕಾಗಿ ಎಲ್ಲರೂ ಪರಿಸರ ಆಧ್ಯಾತ್ಮಿಕತೆಯನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ಮೊಂತಿ ಹಬ್ಬವು ಬಾಲಿಕಾ ಮಾತೆ ಮರಿಯಮ್ಮನವರ ಭಿನ್ನಹಗಳ ಮೂಲಕ ಸರ್ವಜನರನ್ನು ಒಂದೇ ಕುಟುಂಬದ ಸದಸ್ಯರಂತೆ ಒಗ್ಗೂಡಿಸಲಿ. ಪೃಕೃತಿಮಾತೆಯ ಆರೈಕೆಯನ್ನು ಸವಿಯುವ ಎಲ್ಲರೂ ಪರಿಸರ ಸಂರಕ್ಷಣೆಗಾಗಿ ಗಂಭೀರ ಪ್ರಯತ್ನಗಳನ್ನು ನಡೆಸಲಿ.
ನಮ್ಮ ಜೀವನಶೈಲಿಯು ಬದಲಾಗಿ ಈ ಭೂಮಿಯ ಯೋಗ್ಯ ನಾಗರಿಕರನ್ನಾಗಿ ನಮ್ಮನ್ನು ಪರಿವರ್ತಿಸಲಿ. ಒಂದೇ ಕುಟುಂಬದ ಸದಸ್ಯರಂತೆ ಈ ಹಬ್ಬವನ್ನು ಆಚರಿಸುವಾಗ ಪೃಕೃತಿ ವಿಕೋಪದಿಂದ ಕಂಗೆಟ್ಟಿರುವ ಕೊಡಗು ಹಾಗು ಕೇರಳದ ಸಹೋದರ-ಸಹೋದರಿಯರಿಗಾಗಿ ನಮ್ಮ ಮನಗಳು ಮಿಡಿದು, ಹೃದಯವು ಔದಾರ್ಯತೆಯನ್ನು ತೋರಿಸಲಿ ಎಂದು ಅವರು ಸಂದೇಶದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X