Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಬದಲಾದರೆ ಅರಾಜಕತೆ ಸೃಷ್ಟಿ:...

ಸಂವಿಧಾನ ಬದಲಾದರೆ ಅರಾಜಕತೆ ಸೃಷ್ಟಿ: ಎಚ್.ಎನ್.ನಾಗಮೋಹನ್‌ದಾಸ್ ಆತಂಕ

‘ಸಂವಿಧಾನ ಸುಟ್ಟ ಬೆಂಕಿ ದೇಶವನ್ನು ಸುಡುವುದು’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ8 Sept 2018 6:59 PM IST
share
ಸಂವಿಧಾನ ಬದಲಾದರೆ ಅರಾಜಕತೆ ಸೃಷ್ಟಿ: ಎಚ್.ಎನ್.ನಾಗಮೋಹನ್‌ದಾಸ್ ಆತಂಕ

ಬೆಂಗಳೂರು, ಸೆ.8: ದೇಶದಲ್ಲಿಂದು ಕೆಲವರು ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಅರಾಜಕ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಸಭಾಂಗಣದಲ್ಲಿ ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ‘ಸಂವಿಧಾನ ಸುಟ್ಟ ಬೆಂಕಿ ದೇಶವನ್ನು ಸುಡುವುದು’ ವಿಷಯದ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಅನೇಕ ಧರ್ಮೀಯರು, ಅನೇಕ ಜಾತಿಗಳು, ಅನೇಕ ಸಂಸ್ಕೃತಿ ಒಂದಾಗಿ ಬದುಕುತ್ತಿವೆ. ಇದಕ್ಕೆಲ್ಲ ಮೂಲಕಾರಣ ಸಂವಿಧಾನ. ಆದರೆ, ಇಂದು ಸಂವಿಧಾನವನ್ನೇ ನಾಶ ಪಡಿಸಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ಈ ನಿಟ್ಟಿನಲ್ಲಿ ನಾವು ಐಕ್ಯತೆ ಪ್ರದರ್ಶಿಸಬೇಕು. ಇಲ್ಲದಿದ್ದರೆ, ಮತ್ತೊಮ್ಮೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇಂದು ದೇಶದಲ್ಲಿ ಆರ್ಥಿಕ-ಸಾಮಾಜಿಕ ಭಯೋತ್ಪಾದನೆ ನಡೆಯುತ್ತಿದೆ. ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಜನರ ಚಿಂತನೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಸಂವಿಧಾನ ಸುಡುವುದಾಗಿ, ತಿರುಚುವುದಾಗಿ ಹೇಳುತ್ತಿರುವವರು ವಾಸ್ತವದಲ್ಲಿ ಭಾರತದ ಸಂವಿಧಾನ ಓದಿ ಅರ್ಥೈಸಿಕೊಂಡಿಲ್ಲ. ಈ ದೇಶವನ್ನು ಅರ್ಥೈಸಿಕೊಳ್ಳಬೇಕಾದರೆ ಪ್ರತಿಯೊಬ್ಬರೂ ಸಂವಿಧಾನ ಓದಬೇಕು ಎಂದು ಹೇಳಿದರು.

ವಿಶ್ವದಲ್ಲಿ ಹಲವಾರು ರಾಷ್ಟ್ರಗಳು ಸ್ವಾತಂತ್ರ ಪಡೆದಿದ್ದರೂ, ಎಲ್ಲವೂ ಗಣರಾಜ್ಯ ದೇಶಗಳಾಗಿಲ್ಲ. ಲಿಖಿತ ಸಂವಿಧಾನವನ್ನು ರೂಪಿಸಿ, ಅದನ್ನು ಒಪ್ಪಿಕೊಂಡು, ಅದರ ಪ್ರಕಾರ ಸರಕಾರ ರಚನೆ ಮಾಡಿ ಆಡಳಿತ ನಡೆಸಿದಾಗ ಗಣರಾಜ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮಗಿಂತಲೂ ಮೊದಲು ಸ್ವಾತಂತ್ರ ಪಡೆದ ಇಂಗ್ಲೆಂಡ್‌ಗೆ ಇದುವರೆಗೂ ಲಿಖಿತವಾದ ಒಂದು ಸಂವಿಧಾನವಿಲ್ಲ. ಹೀಗಾಗಿ, ಅದು ಸ್ವತಂತ್ರ ದೇಶವಾಗಿದ್ದರೂ, ಗಣರಾಜ್ಯವಾಗಿಲ್ಲ ಎಂದು ತಿಳಿಸಿದರು.

ಭಾರತ ಗಣರಾಜ್ಯವಾಗಿ 68 ವರ್ಷ ಕಳೆದಿದೆ. ಅದಕ್ಕೆ ಕಾರಣ ನಮ್ಮ ಲಿಖಿತ ಸಂವಿಧಾನ. ದೇಶದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಗಳು, ರೈತರು ನೆಮ್ಮದಿಯಾಗಿ ಬದುಕುವುದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳೇ ಕಾರಣ. ಹಿಂದು, ಮುಸ್ಲಿಂ, ಕ್ರೈಸ್ತ, ಸಿಖ್, ಬೌದ್ಧ ಹೀಗೆ ಒಂದೊಂದು ಧರ್ಮಕ್ಕೂ ಒಂದೊಂದು ಧರ್ಮ ಗ್ರಂಥವಿದೆ. ಅದರಂತೆ ಅಖಂಡ ಭಾರತೀಯರಿಗೆ ಸಂವಿಧಾನವೇ ಧರ್ಮ ಗ್ರಂಥ ಎಂದು ಪ್ರತಿಪಾದಿಸಿದರು.

ದೇಶಕ್ಕೆ ಸ್ವಾತಂತ್ರ ಸಿಕ್ಕಿ ಏಳು ದಶಕಗಳಾದರೂ ನಿರುದ್ಯೋಗ, ಬಡತನ ಮೊದಲಾದ ಸಮಸ್ಯೆಗಳು ನಿವಾರಣೆಯಾಗಿಲ್ಲ. ಎಲ್ಲರಿಗೂ ಸಮರ್ಪಕ ಸವಲತ್ತುಗಳು ದೊರೆತಿಲ್ಲ. ಹಾಗಂತಾ ಅದಕ್ಕೆ ಸಂವಿಧಾನ ಕಾರಣವಲ್ಲ. ಆಳುವ ವರ್ಗ ಸಂವಿಧಾನದ ಸಮರ್ಪಕ ಅನುಷ್ಠಾನದಲ್ಲಿ ವಿಫಲವಾಗಿರುವುದರಿಂದ ಸಮಸ್ಯೆಗಳು ಮುಂದುವರಿದಿವೆ. ಮುಂದಿನ ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ ಎನ್ನುವ ಆಶಾಭಾವವಿದೆ. ಅಂತೆಯೆ ಈ ಸಮಸ್ಯೆಗಳ ಜತೆಗೆ ಭಯೋತ್ಪಾದನೆ, ಉಗ್ರವಾದ, ಕೋಮುವಾದ, ಭ್ರಷ್ಟಾಚಾರವೂ ದೇಶಕ್ಕೆ ದೊಡ್ಡ ಕಂಟಕವಾಗಿವೆ. ಈ ಸವಾಲುಗಳ ವಿರುದ್ಧವೂ ಹೋರಾಡಬೇಕಿದೆ ಎಂದು ಅವರು ಕರೆ ನೀಡಿದರು.

ಮಾಜಿ ಶಾಸಕ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ಇಂದು ದೇಶದ ಸಂವಿಧಾನಕ್ಕೆ ಗಂಡಾಂತರ ಬಂದೊದಗಿದೆ. ಸಂವಿಧಾನ ಸುಡುವುದರ ಜತೆಗೆ ದೇಶವನ್ನೇ ಸುಡುವ ಹುನ್ನಾರಗಳು ನಡೆಯುತ್ತಿವೆ. ಆರಂಭದಲ್ಲಿ ಸಂವಿಧಾನ ವಿರೋಧಿಸಿದ್ದವರ ಕೈಯಲ್ಲಿ ಇಂದು ಅಧಿಕಾರವಿದೆ. ಈಗಿರುವ ಸಂವಿಧಾನ ನಿಷ್ಕ್ರಿಯಗೊಳಿಸಿ ಮನುಸ್ಮೃತಿ ಆಧರಿತ ಸಂವಿಧಾನ ಜಾರಿಗೊಳಿಸುವುದೇ ಅವರ ಗುರಿಯಾಗಿದೆ ಎಂದು ಕಿಡಿಕಾರಿದರು.

ಲೇಖಕರ, ಚಿಂತಕರ, ಸಾಹಿತಿಗಳ ಹತ್ಯೆಗಳನ್ನು ಸಮರ್ಥಿಸುವವರು ನಗ್ನವಾಗಿ ನಮ್ಮೆದುರಿಗೆ ಸುತ್ತಾಡುತ್ತಿದ್ದಾರೆ. ಭಾರತದ ಬಹುತ್ವದ ಕಲ್ಪನೆಯನ್ನು ನಾಶ ಮಾಡಿ ಒಂದು ಧರ್ಮ, ಜಾತಿ, ದೇಶದ ಕಲ್ಪನೆಯನ್ನು ತರಲು ಪ್ರಯತ್ನಗಳು ನಡೆಯುತ್ತಿವೆ. ಆದರೆ, ಇಂತಹ ವ್ಯವಸ್ಥೆಯನ್ನು ತರಲು ಸಂವಿಧಾನ ಅವಕಾಶ ಕಲ್ಪಿಸಿಲ್ಲ. ಆದುದರಿಂದಾಗಿ ಸಂವಿಧಾನವನ್ನೇ ನಾಶ ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಸಂವಿಧಾನಕ್ಕೆ ಪರ್ಯಾಯವಾಗಿ ಮೂರು ಸಾವಿರ ವರ್ಷಗಳ ಹಿಂದಿನ ಮನುಸ್ಮೃತಿಯನ್ನು ಮುಂದಿಡಲಾಗುತ್ತಿದೆ ಎಂದು ಅವರು ದೂರಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಕೆ.ಷರೀಫಾ, ಡಿಎಸ್‌ಎಂಎಂ ರಾಷ್ಟ್ರೀಯ ಸದಸ್ಯ ನಾಗರಾಜ ನಂಜುಂಡಯ್ಯ, ದಲಿತ ಸಂಘರ್ಷ ಸಮಿತಿ ಸಂಚಾಲಕ ಆರ್.ಮೋಹನ್‌ರಾಜ್, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಎನ್.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ದೇಶದಲ್ಲಿ ಸಾವಿರಾರು ಕಾಯ್ದೆ-ಕಾನೂನುಗಳಿವೆ. ಅವುಗಳಿಗೆಲ್ಲಾ ಸಂವಿಧಾನವೇ ತಾಯಿ. ಹಾಗಾಗಿ ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ, ಅರ್ಥೈಸಿಕೊಳ್ಳಬೇಕು. ಸಂವಿಧಾನ ಒಂದು ಕಾದಂಬರಿ ಅಥವಾ ಕವಿತೆಯಲ್ಲ. ಅದು ದೇಶವನ್ನು ಮುನ್ನಡೆಸುವ ಒಂದು ಕಾರ್ಯಕ್ರಮವಾಗಿದೆ. ಸಂವಿಧಾನ ಅರ್ಥ ಮಾಡಿಕೊಳ್ಳದೇ ದೇಶವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶ ಅರ್ಥ ಮಾಡಿಕೊಳ್ಳಬೇಕಾದರೆ, ದೇಶದ ಇತಿಹಾಸ ಅರ್ಥ ಮಾಡಿಕೊಳ್ಳಬೇಕು.

-ಎಚ್.ಎನ್.ನಾಗಮೋಹನ್‌ದಾಸ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X