Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಲೆಮಾರಿ ಸಮುದಾಯದ ನಾಯಕರಿಗೆ ದೇವರಾಜ...

ಅಲೆಮಾರಿ ಸಮುದಾಯದ ನಾಯಕರಿಗೆ ದೇವರಾಜ ಅರಸು ಪ್ರೇರಣೆಯಾಗಲಿ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ8 Sept 2018 8:04 PM IST
share
ಅಲೆಮಾರಿ ಸಮುದಾಯದ ನಾಯಕರಿಗೆ ದೇವರಾಜ ಅರಸು ಪ್ರೇರಣೆಯಾಗಲಿ: ಎಚ್.ವಿಶ್ವನಾಥ್

ಬೆಂಗಳೂರು, ಸೆ.8: ಅಲೆಮಾರಿ ಸಮುದಾಯವನ್ನು ಸರ್ವೋತೋಮುಖವಾಗಿ ಅಭಿವೃದ್ಧಿ ಪಡಿಸಲು ಸಮುದಾಯದ ನಾಯಕರಿಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪ್ರೇರಣೆಯಾಗಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಶಿಸಿದರು.

ಶನಿವಾರ ಅಲೆಮಾರಿ ಬುಡಕಟ್ಟು ಮಹಾಸಭಾ ನಗರದ ಸಚಿವಾಲಯ ಕ್ಲಬ್‌ನಲ್ಲಿ ಆಯೋಜಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರಿಗೆ ನಾಯಕತ್ವ ತರಬೇತಿ, ಅರಿವು ಕಾರ್ಯಕ್ರಮ ಹಾಗೂ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇವರಾಜ ಅರಸು ದಲಿತರು ಹಾಗೂ ತಬ್ಬಲಿ ಅಲೆಮಾರಿಗಳನ್ನು ಗುರುತಿಸಿ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಳ್ಳಲು ನೆರವಾದರು. ಅಲೆಮಾರಿ ಸಮುದಾಯದ ವೆಂಕಟಪ್ಪ, ಕೆ.ಎಚ್.ರಂಗನಾಥ್‌ರನ್ನು ಮಂತ್ರಿಯನ್ನಾಗಿ ಮಾಡಿದರು. ಭೂ ಸುಧಾರಣೆಯನ್ನು ತಂದು ಈ ಸಮುದಾಯಗಳಿಗೆ ಭೂಮಿಹಕ್ಕು ಕೊಡಿಸಿದರು. ಹೀಗಾಗಿ ಅರಸು ದಾರಿಯಲ್ಲಿ ಅಲೆಮಾರಿ ಸಮುದಾಯದ ನಾಯಕರು ಸಾಗಬೇಕೆಂದು ಅವರು ಸಲಹೆ ನೀಡಿದರು.

ನಾವು ಅಂಬೇಡ್ಕರ್, ಗಾಂಧಿ, ಕೃಷ್ಣರಾಜ ಒಡೆಯರ್, ಅರಸು ಹಾಕಿಕೊಟ್ಟ ಮಾರ್ಗದಲ್ಲಿ ತಳ ಸಮುದಾಯಗಳೆಲ್ಲಾ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಸಮುದಾಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಬೇಕಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಗೆ ಅಲೆಮಾರಿಗಳ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು, ಸಮುದಾಯದ ಒಳಿತಿಗೆ ಪ್ರಯತ್ನಿಸುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪರಿಷತ್ ಸದಸ್ಯ ಉಗ್ರಪ್ಪ ಮಾತನಾಡಿ, ನಮ್ಮಲ್ಲಿ ಸಾಮಾಜಿಕ ನ್ಯಾಯ ಹೇಳುವವರೆಲ್ಲಾ ಸುಳ್ಳು ಹೇಳುತ್ತಾರೆ. ಪ.ಜಾತಿಯಲ್ಲಿ 101 ಜಾತಿಗಳಿಗೆ ಶೇ.15, 51 ಬುಡಕಟ್ಟುಗಳಿಗೆ ಶೇ.3, ನಗಣ್ಯ ಅಲೆಮಾರಿಗಳಿಗೆ ಶೇ.1 ಮೀಸಲಾತಿಯೂ ಇಲ್ಲವಾಗಿದೆ. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಸಿಗಬೇಕು. ಅಲೆಮಾರಿಗಳಿಗೆ ಸರಕಾರ ಪ್ರತ್ಯೇಕ ಜಮೀನು ಕೊಂಡು ನೀರಾವರಿ, ಎಲ್ಲಾ ಸೌಲಭ್ಯಗಳನ್ನು ಕೊಟ್ಟು, ತಲಾ 2 ಎಕರೆ ಜಮೀನು ಕೊಟ್ಟರೆ, ಅಲೆಮಾರಿ ಜೀವನವನ್ನು ತೊರೆದು, ಒಂದು ಕಡೆ ನೆಲೆ ನಿಲ್ಲಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ರಂಗತಜ್ಞ ಹಾಗೂ ಅಲೆಮಾರಿ ಬುಡಕಟ್ಟು ಸಭಾದ ಪ್ರದಾನ ಕಾರ್ಯದರ್ಶಿ ಡಾ.ಎ.ಆರ್.ಗೋವಿಂದಸ್ವಾಮಿ ಮಾತನಾಡಿ, ಸಾಮಾಜಿಕವಾಗಿ ತಬ್ಬಲಿಗಳಾಗಿರುವ ಅಲೆಮಾರಿಗಳಾದ ಹಾವಾಡಿಗರು, ಕರಡಿ ಆಡಿಸುವವರು, ಕೋಲೆ ಬಸವನ ಆಟ, ದೊಂಬರಾಟದವರಿಗೆ ಪ್ರಾಣಿ ದಯಾ ಸಂಘ, ಪೊಲೀಸರು ಹಾಗೂ ಪಟ್ಟಭದ್ರರಿಂದ ರಕ್ಷಣೆ ಒದಗಿಸಿ ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದರು.

ಪಂಚತತ್ವ ಯೋಜನೆಗಳ ಅಡಿಯಲ್ಲಿ ಇವರ ಅಭಿವೃದಿಗೆ ಸರಕಾರ ಮುಂದಾಗಬೇಕು. ಇವರನ್ನು ವೈದ್ಯ ಕಲೆ, ಕರಕುಶಲತೆ, ಪ್ರದರ್ಶನ ಕಲೆ, ಪ್ರಾಣಿ ಸಾಕಾಣಿಕೆ, ನೈಸರ್ಗಿಕ ವಿನ್ಯಾಸದಂತ ಜ್ಞಾನ ಪರಂಪರೆಗಳನ್ನು ಉಳಿಸಿ ಬೆಳೆಸುವುದು ಅಗತ್ಯ. ಪ್ರತಿ ಜಿಲ್ಲೆಯಲ್ಲೂ ಅಲೆಮಾರಿ ಕಾಲನಿ ನಿರ್ಮಾಣ ಅಗತ್ಯ, ಕಲಾ ಅಕಾಡೆಮಿ ರಾಷ್ಟ್ರೀಯ ಪ್ರದರ್ಶನ ಶಾಲೆ ಕಟ್ಟಬೇಕು, ಅಲೆಮಾರಿ, ಅರೆಅಲೆಮಾರಿಗಳ ಕುರಿತು ಇನ್ನಷ್ಟು ಅಧ್ಯಯನಗಳು, ಸಂಶೋದನೆಗಳು ಆಗಬೇಕೆಂದು ಅವರು ಆಶಿಸಿದರು.

ಅಲೆಮಾರಿ ಭಾಂದವರು ನಾವು ಭಿಕ್ಷುಕರಲ್ಲ, ಸೋಮಾರಿಗಳಲ್ಲ, ಕುಡುಕರಲ್ಲ ಮತ್ತು ಅಮುಖ್ಯರಲ್ಲ, ನಾವು ಸ್ವಾಭಿಮಾನಿಗಳು, ನಮ್ಮ ಓಟಿಗೂ ಬೆಲೆಯಿದೆಯೆಂದು ತಮ್ಮ ನರೆಹೊರೆಗೆ ಸಾಬೀತು ಪಡಿಸಬೇಕು ಹಾಗೂ ಯುವಕರು ನಾಯಕತ್ವ ಗುಣವನ್ನು ಅಳವಡಿಸಿಕೊಂಡು ಅರಿವನ್ನು ಪಡೆಯಬೇಕು ಎಂದು ಅವರು ತಿಳಿಸಿದರು.

ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಡಾ.ಬಾಲಗುರುಮೂರ್ತಿ ಮಾತನಾಡಿ, ಅಲೆಮಾರಿಗಳಿಗೆ ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟದ ಫಲವಾಗಿ ಅಲೆಮಾರಿ ಕೋಶ ಸ್ಥಾಪನೆಯಾಗಿ ಅಲೆಮಾರಿಗಳೂ ಕೂಡ ಮುಖ್ಯ ವಾಹಿನಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಹರ್ಷದ ಸಂಗತಿ ಎಂದರು.

ಸಮತಾಸೈನಿಕ ದಳ ಹಾಗೂ ರಿಪಬ್ಲಿಕನ್ ಪಾರ್ಟಿಯ ಅಧ್ಯಕ್ಷ ವೆಂಕಟಸ್ವಾಮಿ, ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ಸುಡುಗಾಡು ಸಿದ್ದ ಸಮುದಾಯದ ರಾಜ್ಯಾಧ್ಯಕ್ಷರು, ಬಿ.ಎಚ್.ಮಂಜುನಾಥ್, ಶಿಳ್ಳೆಕ್ಯಾತ ಸಮುದಾಯದ ರಾಜ್ಯಾಧ್ಯಕ್ಷರು, ಅಲೆಮಾರಿ ಮುಖಂಡರಾದ ಕುಳ್ಳಾಯ್ಯಪ್ಪ, ಸಿರಿವಾಟಿ ನರಸಿಂಹಲು, ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X