Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಮಾನವ ಹಕ್ಕು ಹೋರಾಟಗಾರರ ಬಂಧನ...

ಮಂಡ್ಯ: ಮಾನವ ಹಕ್ಕು ಹೋರಾಟಗಾರರ ಬಂಧನ ಖಂಡಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ8 Sept 2018 11:04 PM IST
share
ಮಂಡ್ಯ: ಮಾನವ ಹಕ್ಕು ಹೋರಾಟಗಾರರ ಬಂಧನ ಖಂಡಿಸಿ ಧರಣಿ

ಮಂಡ್ಯ, ಸೆ.8: ಮಾನವ ಹಕ್ಕು ಹೋರಾಟಗಾರರು ಹಾಗೂ ಚಿಂತಕರ ಬಂಧನ ಖಂಡಿಸಿ ಕರ್ನಾಟಕ ಜನಶಕ್ತಿ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ರೈತಸಭಾಂಗಣದ ಕುವೆಂಪು ಪ್ರತಿಮೆ ಮುಂಭಾಗ ಶನಿವಾರ ಸಂಜೆ ಧರಣಿ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಹತ್ಯೆಯ ಸಂಚು ಎಂಬ ಪ್ರಹಸನದ ಮುಂದುವರಿದ ಭಾಗವಾಗಿ ಚಿಂತಕರು, ಪ್ರಗತಿಪರ ಕವಿ, ಲೇಖಕರು ಹಾಗೂ ಹೋರಾಟಗಾರರ ಬಂಧನವಾಗುತ್ತಿದೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಮುಂಬೈನ ಮಾನವ ಹಕ್ಕು ಹೋರಾಟಗಾರ ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೀರಾ, ದೆಹಲಿಯ ಗೌತಮ್ ನವ್ಲಾಖಾ, ಫರಿದಾಬಾದ್ ಸುಧಾ ಭಾರದ್ವಾಜ್ ಹಾಗೂ ತೆಲುಗಿನ ಕ್ರಾಂತಿಕರಿ ಕವಿ ವರವರರಾವ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದು, ದಲಿತ ಬರಹಗಾರ ಆನಂದ ತೇಲ್ತುಂಬ್ಡೆ ಮತ್ತು ಕೆ.ಸತ್ಯನಾರಾಯಣ ಅವರನ್ನು ವಿಚಾರಣೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು.

ಕೋರೆಂಗಾವ್ ಮೇಳದ ಸಂದರ್ಭದಲ್ಲಿ ದಲಿತ ಸಂಘಟನೆಗಳು ವಿಜಯದ ದ್ವಿಶತಮಾನ ಅಚರಿಸುವ ವೇಳೆ ಸ್ಥಳೀಯ ಆರೆಸ್ಸೆಸ್ ಮತ್ತು ಹಿಂದುತ್ವ ಸಂಘಟನೆಗಳ ಚಿತಾವಣೆಯಿಂದ ತೀವ್ರ ಹಿಂಸೆ ಸೃಷ್ಟಿಯಾಗಿತ್ತು. ಅದರ ಸಂಚುಕೋರರಾದ ಮನೋಹರ ಭಿಡೆ ಮತ್ತು ಏಕ್ಬೂಟೆ ವಿರುದ್ಧ ಮಹಾರಾಷ್ಟ್ರ ಸರಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅದರ ಬದಲು ರ್ಯಾಲಿ ಸಂಘಟಿಸಿದ್ದ ದಲಿತ ನಾಯಕರ ಮೇಲೆ ನಕ್ಸಲ್ ಸಂಪರ್ಕ ಎಂಬ ಆರೋಪ ಹೊರಿಸಿ ಬಂಧಿಸಿಸಲಾಗಿದೆ ಎಂದು ಅವರು ಹೇಳಿದರು.

ಭಿನ್ನಾಭಿಪ್ರಾಯಗಳಿಗೆ ಮನ್ನಣೆ ನೀಡದ ಕೇಂದ್ರ ಸರಕಾರ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ತಮ್ಮ ನೀತಿಗಳನ್ನು ಪ್ರಶ್ನಿಸುವವರನ್ನು ಹತ್ತಿಕ್ಕುವ ಹುನ್ನಾರ ಹೆಣೆಯುತ್ತಿವೆ. ಸಾಮಾಜಿಕ ಕಾರ್ಯಕರ್ತರನ್ನು ಇಂತಹ ಪ್ರಕರಣಗಳು ಹಾಗೂ ವಿಚಾರಗಳಲ್ಲಿ ನಿರತರಾಗುವಂತೆ ಮಾಡುವ ಮೂಲಕ ತನ್ನ ಬೇಳೆ ಬೇಯಿಸಿಕೊಳ್ಳುವ ಖಯಾಲಿಯಲ್ಲಿ ತೊಡಗಿವೆ ಎಂದು ಅವರು ದೂರಿದರು.

ವಿಚಾರವಾದಿಗಳ ಬಂಧನಕ್ಕೆ ದೆಹಲಿ ಹೈಕೋರ್ಟ್, ಸುಧಾ ಭಾರಧ್ವಜ್, ವರವರರಾವ್, ಇತರ ಬಂಧಿತರನ್ನು ಗೃಹ ಬಂಧನದಲ್ಲಿಡುವಂತೆ ಆದೇಶ ನೀಡಿ ಸಣ್ಣ ರಿಲೀಫ್ ನೀಡಿದೆ. ವಿಚಾರಣೆ ವೇಳೆ ನ್ಯಾಯಾಧೀಶ ಚಂದ್ರಚೂಡ್ ಅವರು ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಸುರಕ್ಷತೆಯ ಕವಾಟ. ಇಂತಹ ಭಿನ್ನಾಭಿಪ್ರಾಯಗಳಿಗೆ ಮನ್ನಣೆ ಸಿಗದಿದ್ದರೆ ಅಭಿಪ್ರಾಯಗಳ ಒತ್ತಡದಲ್ಲಿರುವ ಕುಕ್ಕರ್ ಸ್ಪೋಟಿಸುತ್ತದೆ ಎಂಬ ಮಹತ್ವದ ಮಾತುಗಳನ್ನು ಹೇಳಿರುವುದು ಗಮನಾರ್ಹ ಎಂದು ಧರಣಿ ನಿರತರು ಸಂತಸ ವ್ಯಕ್ತಪಡಿಸಿದರು.

ಹುರಗಲವಾಡಿ ರಾಮಯ್ಯ ಮತ್ತು ತಂಡದವರು ಕ್ರಾಂತಿಗೀತೆಗಳನ್ನು ಹಾಡಿದರು. ರೈತ ಹೋರಾಟಗಾರ್ತಿ ಸುನಂದ ಜಯರಾಂ, ಸಿದ್ದರಾಜು, ವಕೀಲರಾದ ಶ್ರೀನಿವಾಸ್, ಚೇತನ್, ಪತ್ರಕರ್ತ ನಾಗೇಶ್, ಸಂತೋಷ್, ಪೂರ್ಣಿಮಾ ರೈತಸಂಘದ ಲತಾಶಂಕರ್ ಮೊದಲಾದವರು ಧರಣಿಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X