ಚಿಕ್ಕಮಗಳೂರು: ಭಾರತ್ ಬಂದ್ ಕರೆ ಹಿನ್ನೆಲೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಸೆ.9: ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಕರೆದಿರುವ ಭಾರತ್ ಬಂದ್ಗೆ ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಸೋಮವಾರ ಜಿಲ್ಲಾದ್ಯಂತ ಬಂದ್ ಆಗಲಿದೆ.
ಕಾಂಗ್ರೆಸ್, ಜೆಡಿಎಸ್, ಭಾರತೀಯ ಕಮ್ಯೂನಿಸ್ಟ್ ಪಕ್ಷ, ವಿವಿಧ ಕನ್ನಡ ಪರ ಸಂಘಟನೆಗಳು, ಆಟೋ ಮಾಲಕರ ಸಂಘ, ಲಾರಿ ಮಾಲಕರ ಸಂಘ ಬಂದ್ಗೆ ಬೆಂಬಲ ಘೋಷಿಸಿವೆ. ಬಂದ್ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಘೋಷಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಇಲಾಖೆ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಆಸ್ಪತ್ರೆ, ಮೆಡಿಕಲ್ ಹೊರತುಪಡಿಸಿ ಅಂಗಡಿಮುಗ್ಗಟ್ಟುಗಳು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯ ವರೆಗೂ ಬಂದ್ ಆಗಲಿವೆ. ನಗರದಲ್ಲಿ ಬಸ್, ಆಟೋ, ಲಾರಿ ಸಂಚಾರವಿರುವುದಿಲ್ಲ ಎಂದು ಆಟೋ ಮತ್ತು ಮಾಲಕರ ಸಂಘ ಈಗಾಗಲೇ ತಿಳಿಸಿದ್ದು, ಸೋಮವಾರ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಗ್ರಾಮೀಣ ಪ್ರದೇಶದ ಜನರು ಮುಂದೂಡುವುದು ಒಳಿತಾಗಿದೆ.