Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ವಾರ್ತಾಭಾರತಿವಾರ್ತಾಭಾರತಿ10 Sept 2018 12:04 AM IST
share
ಓ ಮೆಣಸೇ...

ವಿಧಾನ ಸಭಾ ಚುನಾವಣೆಯಲ್ಲಿ ಸೋತವರು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆ - ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ.

ಬಹುಶಃ ಸೋಲಿನ ರುಚಿ ಹತ್ತಿರಬೇಕು.

---------------------

2 ಮಕ್ಕಳನ್ನು ಹೆತ್ತವರು ತೆರಿಗೆ ಕಟ್ಟುತ್ತಾರೆ. 12 ಮಕ್ಕಳನ್ನು ಹೆತ್ತವರು ಸಬ್ಸಿಡಿ ತೆಗೋತಾರೆ -ಬಸವನ ಗೌಡ ಪಾಟೀಲ ಯತ್ನಾಳ್, ಶಾಸಕ.

ಆದರೆ ನಿಮ್ಮಂಥ ನಾಯಕರನ್ನು ಹೆತ್ತವರು ಮಾತ್ರ ಕಣ್ಣೀರು ಸುರಿಸುತ್ತಿದ್ದಾರೆ.

---------------------
ಕಾಂಗ್ರೆಸ್ ಸೋಲಿಸಲು ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ - ಜನಾರ್ದನ ರೆಡ್ಡಿ, ಮಾಜಿ ಸಚಿವ.

ಅಂದರೆ ಅಕ್ರಮ ಗಣಿಗಾರಿಕೆ ಮಾಡಿರುವುದು ಕೂಡ ಕಾಂಗ್ರೆಸ್‌ನ್ನು ಸೋಲಿಸುವುದಕ್ಕೆ ಎಂದು ತಿಳಿಯಬೇಕೇ?
---------------------

ದೇಶ ವಿಭಜನೆಯನ್ನು ಸಾಂಸ್ಕೃತಿಕವಾಗಿ ಒಪ್ಪಲಾಗದು -ಅನಂತ ಕುಮಾರ ಹೆಗಡೆ, ಸಂಸದ.

ಅದಕ್ಕಾಗಿ ರಾಜಕೀಯವಾಗಿ ವಿಭಜನೆಗೆ ಇಳಿದಿದ್ದೀರಿ.

---------------------

ಡಾ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಜೆಡಿಎಸ್ ವಕ್ತಾರರಂತೆ ಮಾತನಾಡುತ್ತಿದ್ದಾರೆ - ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ.

ಬಿಜೆಪಿ ವಕ್ತಾರರಂತೆ ಮಾತನಾಡಬೇಕೆನ್ನುತ್ತೀರಾ?

---------------------

ನನ್ನನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳಬೇಡಿ - ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

ಮತ್ತೆ ಮತ್ತೆ ಆಸೆ ಹುಟ್ಟಿಸಬೇಡಿ ಎಂದು ಮನವಿ ಮಾಡಿ.

---------------------
ಯಡಿಯೂರಪ್ಪ ಬೀಳುತ್ತೆ ಎಂದಷ್ಟು ಸರಕಾರಕ್ಕೆ ಆಯಸ್ಸು ಜಾಸ್ತಿ -ಎಚ್.ಡಿ. ರೇವಣ್ಣ, ಸಚಿವ.
ಯಾವ ಜ್ಯೋತಿಷಿ ಹೇಳಿದ್ದು?

---------------------

ಜಾತಿ, ಧರ್ಮ, ಲಿಂಗದ ಆಧಾರದಲ್ಲಿ ತಾರತಮ್ಯವನ್ನು ಯಾವುದೇ ರಾಷ್ಟ್ರೀಯವಾದಿ ಸಹಿಸಲಾರ -ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ.

ಅವರು ಸಾಮೂಹಿಕ ಹತ್ಯೆಯನ್ನಷ್ಟೇ ಸಹಿಸುವವರು.

---------------------

ನಾನು ಮುಖ್ಯಮಂತ್ರಿಯಾಗುವವರೆಗೆ ನನಗೆ ದೇಶದಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಇರಲಿಲ್ಲ -ನರೇಂದ್ರ ಮೋದಿ, ಪ್ರಧಾನಿ.

ನಿಮ್ಮ ಖಾತೆಗಳೆಲ್ಲ ಆವರೆಗೆ ವಿದೇಶಗಳಲ್ಲೇ ಇದ್ದಿರಬೇಕು.

---------------------

ಇಂಧನ ಬೆಲೆ ಏರಿಕೆ ತಾತ್ಕಾಲಿಕ -ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ.

ಹೌದು, ತಮ್ಮ ಸರಕಾರ ಅಸ್ತಿತ್ವದಲ್ಲಿರುವವರೆಗೆ.

---------------------

ಜೆಡಿಎಸ್ ಜತೆ ಸೇರಿ ಲೋಕಸಭೆ ಚುನಾವಣೆ ಎದುರಿಸಲು ಮನಸ್ಸಿಲ್ಲ. ಆದರೆ ಬಿಜೆಪಿಯನ್ನು ಸೋಲಿಸಲು ಮೈತ್ರಿ ಅನಿವಾರ್ಯ -ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ.

ಇಲ್ಲವಾದರೆ ಅವರು ಕಾಂಗ್ರೆಸ್‌ನ್ನು ಸೋಲಿಸಲು ಬಿಜೆಪಿ ಜೊತೆಗೆ ಮೈತ್ರಿ ಮಾಡುವ ಸಾಧ್ಯತೆಗಳಿವೆ.

---------------------

ಪ್ರಧಾನಿ ಹತ್ಯೆಗೆ ಸಂಚು ನಡೆದಿದೆ ಎನ್ನುವುದರ ಕುರಿತು ನಾನೇನೂ ಮಾತನಾಡುವುದಿಲ್ಲ - ದೇವೇಗೌಡ, ಮಾಜಿ ಪ್ರಧಾನಿ.

ನಗರ ನಕ್ಸಲ್ ಎಂಬ ಆರೋಪ ನಿಮ್ಮ ತಲೆಗೂ ಕಟ್ಟಬಹುದೆಂಬ ಭಯವೇ?

---------------------

ಪೆಟ್ರೋಲ್ ದರ ಪ್ರತೀ ಲೀಟರ್‌ಗೆ ರೂ. 48ಕ್ಕಿಂತ ಹೆಚ್ಚಿರಬಾರದು - ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮುಖಂಡ.

ಈಗ ಹೆಚ್ಚಾಗಿದೆಯಲ್ಲ, ಅದಕ್ಕೆ ಪರಿಹಾರ?

---------------------
ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಇರುವ ರಾಜ್ಯದ ಹಣಕಾಸಿನ ಬೀಗದ ಕೀ ಕೇಳಿ ಕೇಳಿ ಸಾಕಾಯ್ತು -ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ.

ಅದು ದೇವೇಗೌಡರ ಸೊಂಟದಲ್ಲಿ ನೇತಾಡುತ್ತಿದೆಯಂತೆ.

---------------------
ಕಲಿಯುಗದಲ್ಲಿ ಎಲ್ಲವೂ ಕೆಟ್ಟದ್ದು ಆಗುತ್ತದೆ ಎಂಬ ವಾದ ಒಪ್ಪತಕ್ಕದ್ದಲ್ಲ - ಡಾ.ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿ ಧರ್ಮಸ್ಥಳ.

ಮೋದಿಯುಗಕ್ಕಷ್ಟೇ ಅದು ಸೀಮಿತ.

---------------------

‘ಸಾಲಮಾಡಿ ತುಪ್ಪ ತಿನ್ನು’ ಗಾದೆಯನ್ನು ಕುಮಾರಸ್ವಾಮಿ- ಸಿದ್ದರಾಮಯ್ಯ ಯಥಾವತ್ತಾಗಿ ಅನುಸರಿಸುತ್ತಿದ್ದಾರೆ - ಪ್ರಹ್ಲಾದ್ ಜೋಶಿ, ಸಂಸದ.

ಸಾಲ ಮಾಡಿ ಪೆಟ್ರೋಲ್ ಹಾಕಿಸುವವರ ಬಗ್ಗೆಯೂ ಹೇಳಿ.

---------------------

ನಾಯಿಯ ಬಾಯಿಯಲ್ಲಿ ಮೂಳೆಯಿದ್ದರೆ ಅದು ಬೊಗಳುವುದಿಲ್ಲ - ಅರುಣ್ ಶೌರಿ, ಮಾಜಿ ಕೇಂದ್ರ ಸಚಿವ.

ಈ ಹಿಂದೆ ನೀವು ಬೊಗಳದೇ ಇರುವುದಕ್ಕೆ ಕಾರಣ ಸಿಕ್ಕಿತು.

---------------------

ನೋಟು ನಿಷೇಧದಿಂದ ಭಾರತದಲ್ಲಿ ತೆರಿಗೆ ಅನುಸರಣೆ ಹೆಚ್ಚಾಗಿದೆ - ಅರುಣ್ ಜೇಟ್ಲಿ, ಕೇಂದ್ರ ಸಚಿವ.

ಆ ತೆರಿಗೆ ಯಾವ ದೇಶಕ್ಕೆ ಸಂದಾಯವಾಗುತ್ತಿದೆ ಎನ್ನುವುದನ್ನೂ ಹೇಳಿ.

---------------------

ಮಾಂಸ ತಿಂದು ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಮಾಡಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರು -ಬಸವನ ಗೌಡ ಪಾಟೀಲ ಯತ್ನಾಳ್, ಶಾಸಕ.

ದುರ್ಮಾಂಸ ತಿಂದೇ ನೀವು ಅಧಿಕಾರ ಹಿಡಿದಿರಿ ಎನ್ನುವ ವಾದ ಇದೆ.

---------------------

ಕಾಂಗ್ರೆಸ್ ಪಕ್ಷದಲ್ಲಿ ಬ್ರಾಹ್ಮಣರ ಡಿಎನ್‌ಎ ಇದೆ -ರಣದೀಪ್ ಸುರ್ಜೇವಾಲ, ಕಾಂಗ್ರೆಸ್ ವಕ್ತಾರ.

ಹೌದು, ತಪಾಸಣೆ ನಡೆಸಿದರೆ ಜನಿವಾರಗಳೂ ಪತ್ತೆಯಾಗುತ್ತವೆ.

---------------------

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ಗೆ ನಾನು ಯಾರು, ನನ್ನ ಶಕ್ತಿ ಏನೆಂದು ತೋರಿಸುತ್ತೇನೆ -ಪ್ರತಾಪ ಸಿಂಹ, ಸಂಸದ.

ಆ ಶಕ್ತಿಯನ್ನು ಕೊಡಗಿನ ನೆರೆಯ ಸಂದರ್ಭದಲ್ಲಿ ಯಾಕೆ ಪ್ರದರ್ಶಿಸಿಲ್ಲ?

---------------------

ನನ್ನ ವಿರುದ್ಧ ಮಾನ ನಷ್ಟ ಹೂಡಲು ಯಡಿಯೂರಪ್ಪರಿಗೆ ಅದು ಇದೆಯಾ? - ಕುಮಾರಸ್ವಾಮಿ, ಮುಖ್ಯಮಂತ್ರಿ.

ಅದು ನಿಮ್ಮ ಜೊತೆಗೆ ಕೈ ಜೋಡಿಸಿ ಸರಕಾರ ಮಾಡಿದ ಆ ದಿನವೇ ನಷ್ಟವಾಗಿದೆಯಂತೆ.

---------------------
 ಇನ್ನು ಮುಂದೆ ಬೇರೆ ದೇಶಕ್ಕಾಗಿ ಪಾಕಿಸ್ತಾನ ಯುದ್ಧ ಮಾಡುವುದಿಲ್ಲ - ಇಮ್ರಾನ್ ಖಾನ್, ಪಾಕ್ ಪ್ರಧಾನಿ.

  ಕ್ರಿಕೆಟ್ ಆಡುವುದಕ್ಕೆ ಅನುಮತಿ ಇದೆಯೇ?

---------------------

ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ 14 ಹಿಂದೂ ಕಾರ್ಯಕರ್ತರು ನಿರ್ದೋಷಿಗಳು -ಪ್ರಮೋದ್ ಮುತಾಲಿಕ್, ಶ್ರಿರಾಮ ಸೇನೆ ಮುಖಂಡ.

ಅವರನ್ನು ಬಿಡುಗಡೆ ಮಾಡಿ, ನಿಮ್ಮನ್ನು ಬಂಧಿಸಿದರೆ ನಿಜವಾದ ದೋಷಿಯನ್ನು ಬಂಧಿಸಿದಂತಾಗುತ್ತದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X