Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಗಂಟಲು ಕ್ಯಾನ್ಸರ್‌ನ ಈ...

ಗಂಟಲು ಕ್ಯಾನ್ಸರ್‌ನ ಈ ಲಕ್ಷಣಗಳನ್ನೆಂದಿಗೂ ಕಡೆಗಣಿಸುವಂತಿಲ್ಲ

ವಾರ್ತಾಭಾರತಿವಾರ್ತಾಭಾರತಿ11 Sept 2018 5:09 PM IST
share
ಗಂಟಲು ಕ್ಯಾನ್ಸರ್‌ನ ಈ ಲಕ್ಷಣಗಳನ್ನೆಂದಿಗೂ ಕಡೆಗಣಿಸುವಂತಿಲ್ಲ

ಕ್ಯಾನ್ಸರ್ ಮಾನವಕುಲವನ್ನು ಕಾಡುತ್ತಿರುವ ಹೆಮ್ಮಾರಿಯಾಗಿದೆ. ವಿಶ್ವದಲ್ಲಿ ಅತಿ ಹೆಚ್ಚಿನ ಸಾವುಗಳು ಕ್ಯಾನ್ಸರ್‌ನಿಂದಲೇ ಸಂಭವಿಸುತ್ತವೆ.ಮೂಳೆ,ರಕ್ತ,ಮಿದುಳು,ಮೂತ್ರಪಿಂಡ,ಶ್ವಾಸಕೋಶ,ಬಾಯಿ,ಕಣ್ಣು,ಗಂಟಲು ಸೇರಿದಂತೆ ಮಾನವ ಶರೀರದ ಯಾವುದೇ ಅಂಗವೂ ಕ್ಯಾನ್ಸರ್‌ಗೆ ಗುರಿಯಾಗಬಹುದು.

 ಗಂಟಲು ಕ್ಯಾನ್ಸರ್‌ನ್ನು ಸ್ವರತಂತು ಕ್ಯಾನ್ಸರ್,ಧ್ವನಿಪೆಟ್ಟಿಗೆಯ ಕ್ಯಾನ್ಸರ್,ಕಂಠದ್ವಾರ ಅಥವಾ ಕಂಠನಾಳ ಕ್ಯಾನ್ಸರ್ ಎಂದೂ ಕರೆಯಲಾಗುತ್ತದೆ. ಗಂಟಲಿನ ಈ ಭಾಗಗಳಲ್ಲಿ ಜೀವಕೋಶಗಳು ವಿಭಜನೆಗೊಂಡು ಅವುಗಳ ಸಂಖ್ಯೆ ಅನಿಯಂತ್ರಿತವಾಗಿ ಹೆಚ್ಚಿದಾಗ ಕ್ಯಾನ್ಸರ್ ಉಂಟಾಗುತ್ತದೆ.

ಕ್ಯಾನ್ಸರ್ ರೋಗವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪ್ರಾರಂಭಿಸಿದರೆ ಗುಣಮುಖವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದರೆ ಗಂಟಲು ಕ್ಯಾನ್ಸರ್‌ನ್ನು ಆರಂಭಿಕ ಹಂತಗಳಲ್ಲಿ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಗಂಟಲು ಕ್ಯಾನ್ಸರ್‌ನ ಹೆಚ್ಚಿನ ಲಕ್ಷಣಗಳು ಸಾಮಾನ್ಯ ಶೀತ ಮತ್ತು ಅಲರ್ಜಿಯ ಲಕ್ಷಣಗಳನ್ನೇ ಹೋಲುತ್ತವೆ. ಗುಣವಾಗದ ಗಂಟು ಅಥವಾ ಹುಣ್ಣು ಮತ್ತು ವಾಸಿಯಾಗದ ಗಂಟಲು ನೋವು ಅಥವಾ ಕೆಮ್ಮು ಇವು ಗಂಟಲು ಕ್ಯಾನ್ಸರ್‌ನ ಸಾಮಾನ್ಯ ಲಕ್ಷಣಗಳಲ್ಲಿ ಸೇರಿವೆ.

 ಗಂಟಲು ಕ್ಯಾನ್ಸರ್‌ನ ಲಕ್ಷಣಗಳು ಮುಖ್ಯವಾಗಿ ಗಂಟು ಅಥವಾ ಗಡ್ಡೆಯ ಗಾತ್ರ ಮತ್ತು ಅದರ ಸ್ಥಾನವನ್ನು ಅವಲಂಬಿಸಿರುತ್ತವೆ.

 ಧ್ವನಿಯಲ್ಲಿ ಕರ್ಕಶತೆ ಅಥವಾ ಇತರ ಬದಲಾವಣೆಗಳು,ತುಟಿ,ಬಾಯಿ ಅಥವಾ ಗಂಟಲಿನಲ್ಲಿ ಕಾಣಿಸಿಕೊಂಡು ವಾರಗಟ್ಟಲೆ ಗುಣವಾಗದ ಹುಣ್ಣು,ಆಹಾರ ನುಂಗುವಾಗ ನೋವು,ಅಗಿಯುವಾಗ ಕಷ್ಟ ಅಥವಾ ಗಂಟಲಿನಲ್ಲಿ ಗಡ್ಡೆಯಿರುವ ಅನುಭವ,ಕೆಮ್ಮು ಅಥವಾ ಆ್ಯಂಟಿಬಯಾಟಿಕ್ಸ್‌ಗಳ ಸೇವನೆಯ ಬಳಿಕವೂ ಉಳಿದುಕೊಳ್ಳುವ ಗಂಟಲು ಕೆರತ ಅಥವಾ ನೋವು,ವಸಡುಗಳು,ನಾಲಿಗೆ ಅಥವಾ ಬಾಯಿಯ ಒಳಭಾಗದಲ್ಲಿ ಬಿಳಿ ಅಥವಾ ಕೆಂಪು ಕಲೆಗಳು,ಬಾಯಿಯಲ್ಲಿ ಮರಗಟ್ಟುವಿಕೆ ಅಥವಾ ರಕ್ತಸ್ರಾವ,ಊದಿಕೊಂಡ ದುಗ್ಧರಸ ಗ್ರಂಥಿಗಳು ಅಥವಾ ಕುತ್ತಿಗೆಯಲ್ಲಿ ಊತ,ಕುತ್ತಿಗೆ ನೋವು ಮತ್ತು ಆಗಾಗ್ಗೆ ಕಿವಿನೋವು, ದವಡೆಗಳಲ್ಲಿ ನೋವು ಅಥವಾ ಊತ,ಕೆಟ್ಟ ಉಸಿರು,ದೇಹತೂಕದಲ್ಲಿ ಗಣನೀಯ ಇಳಿಕೆ, ಕೆಮ್ಮಿದಾಗ ರಕ್ತ ಬರುವುದು,ಏದುಸಿರು ಮತ್ತು ಶಿಳ್ಳೆಯಂತಹ ಶಬ್ದ ಇವೆಲ್ಲ ಗಂಟಲು ಕ್ಯಾನ್ಸರ್‌ನ ಸಾಮಾನ್ಯ ಲಕ್ಷಣಗಳಾಗಿವೆ.

ಮುಖದ ಮಾಂಸಖಂಡಗಳಲ್ಲಿ ಮರಗಟ್ಟುವಿಕೆ ಅಥವಾ ನಿಷ್ಕ್ರಿಯತೆ,ಮುಖದಲ್ಲಿ ನಿರಂತರ ನೋವು,ನಿರಂತರವಾದ ಕುತ್ತಿಗೆ ನೋವು ಇವೂ ಗಂಟಲು ಕ್ಯಾನ್ಸರ್‌ನ ಸಂಭಾವ್ಯ ಲಕ್ಷಣಗಳಾಗಿವೆ.

ಅಂದ ಹಾಗೆ ಈ ಲಕ್ಷಣಗಳು ವ್ಯಕ್ತಿಯಲ್ಲಿ ಕಂಡು ಬಂದರೆ ಆತ ಗಂಟಲು ಕ್ಯಾನ್ಸರ್‌ನಿಂದಲೇ ಬಳಲುತ್ತಿದ್ದಾನೆ ಎಂಬ ನಿರ್ಧಾರಕ್ಕೆ ಬರಬೇಕಾಗಿಲ್ಲ. ಆದರೆ ಈ ಲಕ್ಷಣಗಳು ಎರಡು ವಾರಗಳಿಗೂ ಅಧಿಕ ಸಮಯದಿಂದ ಕಾಣಿಸಿಕೊಂಡಿದ್ದರೆ ನಿಮ್ಮ ವೈದ್ಯರನ್ನು ಅಥವಾ ಯಾವುದೇ ತಜ್ಞವೈದ್ಯರನ್ನು ಸಂಪರ್ಕಿಸುವುದು ಅಗತ್ಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X