Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಷ್ಠಿತರ ವಂಚನೆ ಹಗರಣ: ಪ್ರಧಾನಿ...

ಪ್ರತಿಷ್ಠಿತರ ವಂಚನೆ ಹಗರಣ: ಪ್ರಧಾನಿ ಮೋದಿ ನಿರ್ಲಕ್ಷ್ಯ; ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ11 Sept 2018 11:19 PM IST
share
ಪ್ರತಿಷ್ಠಿತರ ವಂಚನೆ ಹಗರಣ: ಪ್ರಧಾನಿ ಮೋದಿ ನಿರ್ಲಕ್ಷ್ಯ;  ರಘುರಾಮ್ ರಾಜನ್

-ಕೆಟ್ಟ ಸಾಲಗಳ ಬಗ್ಗೆ ಸಂಸದೀಯ ಸಮಿತಿಗೆ ವರದಿ ಸಲ್ಲಿಸಿದ ರಾಜನ್.

-ಬ್ಯಾಂಕರ್‌ಗಳ ಆಶಾವಾದ, ಸರಕಾರದ ನಿರ್ಲಕ್ಷ, ನಿಧಾನ ಗತಿ ಬೆಳವಣೆಗೆಯ ಆರೋಪ.

-ಪ್ರತಿಕ್ರಿಯಿಸುವಲ್ಲಿ ಯುಪಿಎ ಹಾಗೂ ಎನ್‌ಡಿಎ ಸರಕಾರ ನಿಧಾನ.

ಹೊಸದಿಲ್ಲಿ, ಸೆ. 11: ಪ್ರತಿಷ್ಠಿತ ವ್ಯಕ್ತಿಗಳ ವಂಚನೆ ಪ್ರಕರಣಗಳ ಪಟ್ಟಿಯನ್ನು ಪ್ರಧಾನ ಮಂತ್ರಿ ಅವರ ಕಚೇರಿಗೆ ಕಳುಹಿಸಿ ಕೊಟ್ಟಿದ್ದೇನೆ. ಆದರೆ, ಅದರ ಬಗ್ಗೆ ಯಾವುದೇ ಪ್ರಗತಿಯಾದ ಬಗ್ಗೆ ತಿಳಿದಿಲ್ಲ ಎಂದು ಆರ್‌ಬಿಐಯ ಮಾಜಿ ಗವರ್ನರ್ ರಘುರಾಮ್ ರಾಜನ್ ಸಂಸದೀಯ ಸಮಿತಿಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.

ಬ್ಯಾಂಕರ್‌ಗಳ ಅತಿಯಾದ ಆಶಾವಾದ, ಸರಕಾರದ ನಿರ್ಲಕ್ಷ ಹಾಗೂ ನಿಧಾನಗತಿಯ ಬೆಳವಣಿಗೆ ಅಂಶಗಳು ಕೆಟ್ಟ ಸಾಲಗಳು ಹೆಚ್ಚಲು ಕಾರಣ ಎಂದು ರಘುರಾಮ ರಾಜನ್ ಬಿಜೆಪಿ ನಾಯಕ ಮುರಳಿ ಮನೋಹರ ಜೋಷಿ ನಾಯಕತ್ವದ ಸಮಿತಿಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಂಚನೆಗಳ ಪ್ರಮಾಣ ಹೆಚ್ಚುತ್ತಿದೆ. ಆದರೆ, ಅನುತ್ಪಾದಕ ಆಸ್ತಿಗಳಿಗೆ ಹೋಲಿಸಿದಾಗ ಆ ಪ್ರಮಾಣ ತುಂಬಾ ಕಡಿಮೆ ಎಂದು ಅವರು ತಿಳಿಸಿದ್ದಾರೆ.

ತನಿಖಾ ಸಂಸ್ಥೆಗೆ ವಂಚನೆ ಪ್ರಕರಣಗಳ ಬಗ್ಗೆ ಶೀಘ್ರ ವರದಿ ಮಾಡಲು ತಾನು ಗವರ್ನರ್ ಆಗಿದ್ದಾಗ ಆರ್‌ಬಿಐ ವಂಚನೆ ನಿಗಾ ಸೆಲ್ ಆರಂಭಿಸಿತ್ತು. ಪ್ರತಿಷ್ಠತ ವಂಚನೆ ಪ್ರಕರಣಗಳ ಪಟ್ಟಿಯನ್ನು ತಾನು ಪ್ರಧಾನಿ ಮಂತ್ರಿ ಅವರ ಕಚೇರಿಗೆ ಕಳುಹಿಸಿದ್ದೆ. ಇದರಲ್ಲಿ ಕನಿಷ್ಠ ಒಬ್ಬರು ಅಥವಾ ಇಬ್ಬರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲು ಸಮನ್ವಯ ಕ್ರಮಗಳಿಗೆ ಆಗ್ರಹಿಸಿದ್ದೆ. ಆದರೆ, ಈ ದಿಶೆಯಲ್ಲಿ ಪ್ರಗತಿಯಾದ ಬಗ್ಗೆ ನನಗೆ ಇದುವರೆಗೆ ತಿಳಿದಿಲ್ಲ. ಇದು ತುರ್ತಾಗಿ ಪರಿಹರಿಸಬೇಕಾದ ವಿಚಾರ ಎಂದು ರಾಜನ್ ವರದಿಯಲ್ಲಿ ಹೇಳಿದ್ದಾರೆ. ದುರಾದೃಷ್ಟವೆಂದರೆ, ಒಬ್ಬನೇ ಒಬ್ಬ ಪ್ರತಿಷ್ಠಿತ ವಂಚಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ವ್ಯವಸ್ಥೆ ವಿಫಲವಾಗಿದೆ. ಇದು ವಂಚನೆಗೆ ಪ್ರೋತ್ಸಾಹ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ವಂಚನೆ ತಡೆಯಲು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಿ ಹಾಗೂ ಸರಕಾರದಿಂದ ಪ್ರತ್ಯೇಕಿಸಿ ಎಂದು ಅವರು ಸಲಹೆ ನೀಡಿದ್ದಾರೆ. ಕೆಟ್ಟ ಸಾಲಗಳು ದೊಡ್ಡ ಪ್ರಮಾಣದಲ್ಲಿ ಉತ್ಪತ್ತಿಯಾದುದು 2006-2008ರ ಅವಧಿಯಲ್ಲಿ. ಈ ಸಂದರ್ಭ ಆರ್ಥಿಕ ಬೆಳವಣಿಗೆ ಉತ್ತಮವಾಗಿತ್ತು. ವಿದ್ಯುತ್ ಸ್ಥಾವರದಂತಹ ಈ ಹಿಂದಿನ ಯೋಜನೆಗಳು ಸಮಯದ ಒಳಗೆ ಹಾಗೂ ಬಜೆಟ್‌ನಲ್ಲಿ ಪೂರ್ಣಗೊಂಡಿತ್ತು ಎಂದು ರಘುರಾಮ ರಾಜನ್ ವರದಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X