Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಪ್ರಸ್ತಾಪ:...

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಪ್ರಸ್ತಾಪ: ಭಾರತ ವಿಷಾದ

ವಾರ್ತಾಭಾರತಿವಾರ್ತಾಭಾರತಿ12 Sept 2018 10:07 PM IST
share
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಪ್ರಸ್ತಾಪ: ಭಾರತ ವಿಷಾದ

ವಿಶ್ವಸಂಸ್ಥೆ, ಸೆ. 12: ಕಾಶ್ಮೀರ ವಿಷಯವು ವಿಶ್ವಸಂಸ್ಥೆಯ ಮಾನವಹಕ್ಕುಗಳ ಆಯೋಗದಲ್ಲಿ ಪ್ರಸ್ತಾಪಗೊಂಡಿರುವುದಕ್ಕೆ ಭಾರತ ವಿಷಾದ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಆಯೋಗದಲ್ಲಿ ಮಾತನಾಡಿದ ಅದರ ಹೈಕಮಿಶನರ್ ಮಿಚೆಲ್ ಬ್ಯಾಚಲೆಟ್ ಕಾಶ್ಮೀರ ಬಗ್ಗೆ ಪ್ರಸ್ತಾಪಿಸಿರುವುದನ್ನು ಸ್ಮರಿಸಬಹುದಾಗಿದೆ.

‘‘ಮಾನವಹಕ್ಕುಗಳ ಪರಿಸ್ಥಿತಿ ಕುರಿತ ಮಾನವಹಕ್ಕುಗಳ ಮಂಡಳಿಯ ಇತ್ತೀಚಿನ ವರದಿಯನ್ನು ಅರ್ಥಪೂರ್ಣ ಸುಧಾರಣೆಗಳೊಂದಿಗೆ ಅನುಸರಿಸಲಾಗಿಲ್ಲ ಹಾಗೂ ಬೆಟ್ಟು ಮಾಡಲಾದ ಗಂಭೀರ ವಿಷಯಗಳನ್ನು ಯಾವ ರೀತಿಯಲ್ಲಿ ಪರಿಹರಿಸಬಹುದು ಎಂಬ ಬಗ್ಗೆಯೂ ಮುಕ್ತ ಹಾಗೂ ಗಂಭೀರ ಚರ್ಚೆಗಳಾಗಿಲ್ಲ’’ ಎಂದು ಬ್ಯಾಚಲೆಟ್ ಹೇಳಿದ್ದರು.

‘‘ನ್ಯಾಯ ಪಡೆಯುವ ಹಾಗೂ ಘನತೆಯಿಂದ ಜೀವಿಸುವ ಹಕ್ಕು ಜಗತ್ತಿನ ಎಲ್ಲ ಕಡೆಯಲ್ಲಿರುವ ಜನರಂತೆ ಕಾಶ್ಮೀರದ ಜನರಿಗೂ ಇದೆ. ಅದನ್ನು ಗೌರವಿಸುವಂತೆ ಅಧಿಕಾರಿಗಳನ್ನು ನಾವು ಒತ್ತಾಯಿಸುತ್ತೇವೆ. ನಿಯಂತ್ರಣ ರೇಖೆಯ ಎರಡೂ ಕಡೆಗಳಿಗೆ ಭೇಟಿ ನೀಡುವ ಅನುಮತಿಗಾಗಿ ಕೋರಿಕೆ ಸಲ್ಲಿಸುವುದನ್ನು ನನ್ನ ಕಚೇರಿ ಮುಂದುವರಿಸಲಿದೆ ಹಾಗೂ ಅದರ ನಡುವೆ, ನಿಗಾ ಮತ್ತು ವರದಿ ಮಾಡುವುದನ್ನು ಮುಂದುವರಿಸಲಾಗುವುದು’’ ಎಂದಿದ್ದರು.

ಭಾರತದ ಪ್ರತಿಕ್ರಿಯೆ

ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಶನರ್ ಮಿಚೆಲ್ ಬ್ಯಾಚಲೆಟ್ ನೀಡಿರುವ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ಜಿನೇವದಲ್ಲಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಜೀವ್ ಚಂದ್ರ, ಈ ವಿಷಯ ಕುರಿತ ನಿಲುವನ್ನು ಭಾರತ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯಲ್ಲಿ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಹೇಳಿದರು.

‘‘ಮೇಡಂ ಹೈಕಮಿಶನರ್, ಇದು ವಿಶ್ವಸಂಸ್ಥೆಯ ಮಾನವಹಕ್ಕು ಮಂಡಳಿ ಸೇರಿದಂತೆ ಸಂಬಂಧಿತ ಎಲ್ಲರಿಗೂ ಕಠಿಣ ಸಮಯವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದುದರಿಂದ, ಮಾನವಹಕ್ಕು ವಿಷಯಗಳನ್ನು, ರಾಷ್ಟ್ರೀಯ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಮನ್ನಿಸಿ ಪಾರದರ್ಶಕ ಹಾಗೂ ವಿಶ್ವಾಸಾರ್ಹ ರೀತಿಯಲ್ಲಿ ರಚನಾತ್ಮಕವಾಗಿ ಪರಿಹರಿಸಬೇಕು’’ ಎಂದು ರಾಜೀವ್ ಚಂದ್ರ ಹೇಳಿದ್ದಾರೆ.

‘‘ಭಾರತದ ರಾಜ್ಯ ಜಮ್ಮು ಮತ್ತು ಕಾಶ್ಮೀರವು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯಲ್ಲಿ ಪ್ರಸ್ತಾಪಗೊಂಡಿರುವುದಕ್ಕೆ ನಾವು ವಿಷಾದಿಸುತ್ತೇವೆ. ಈ ವಿಷಯದ ಕುರಿತ ನಮ್ಮ ನಿಲುವನ್ನು ಮಂಡಳಿಯಲ್ಲಿ ಈಗಾಗಲೇ ಸ್ಪಷ್ಟಪಡಿಸಲಾಗಿದೆ’’ ಜಿನೇವದಲ್ಲಿ ಮಂಗಳವಾರ ನಡೆದ ಮಾನವಹಕ್ಕುಗಳ ಮಂಡಳಿಯ 39ನೇ ಅಧಿವೇಶನದಲ್ಲಿ ಮಾತನಾಡಿದ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X