Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮನು ಅತ್ರಿ-ಸುಮೀತ್ ರೆಡ್ಡಿ ಕ್ವಾರ್ಟರ್...

ಮನು ಅತ್ರಿ-ಸುಮೀತ್ ರೆಡ್ಡಿ ಕ್ವಾರ್ಟರ್ ಫೈನಲ್‌ಗೆ

ಜಪಾನ್ ಓಪನ್

ವಾರ್ತಾಭಾರತಿವಾರ್ತಾಭಾರತಿ12 Sept 2018 11:55 PM IST
share
ಮನು ಅತ್ರಿ-ಸುಮೀತ್ ರೆಡ್ಡಿ ಕ್ವಾರ್ಟರ್ ಫೈನಲ್‌ಗೆ

ಟೋಕಿಯೊ, ಸೆ.12: ಭಾರತದ ಡಬಲ್ಸ್ ಜೋಡಿ ಮನು ಅತ್ರಿ ಮತ್ತು ಬಿ.ಸುಮೀತ್ ರೆಡ್ಡಿ ಅವರು ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಪುರುಷರ ವಿಭಾಗದ ಡಬಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

 ಬುಧವಾರ ನಡೆದ ಪಂದ್ಯದಲ್ಲಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ ಮಲೇಶ್ಯಾದ ಗೋಹ್ ವಿ ಶೆಮ್ ಮತ್ತು ತ್ಯಾನ್ ವೀ ಕಿಯೊಂಗ್ ವಿರುದ್ಧ 15-21, 23-21, 21-19 ಅಂತರದಲ್ಲಿ ಜಯ ಗಳಿಸಿ ಕ್ವಾರ್ಟರ್ ಫೈನಲ್ ತಲುಪಿದರು.

  ಕೇವಲ 54 ನಿಮಿಷಗಳಲ್ಲಿ ಗೋಹ್ ವಿ ಶೆಮ್ ಮತ್ತು ತ್ಯಾನ್ ವೀ ಕಿಯೊಂಗ್ ಸವಾಲನ್ನು ಸಮರ್ಥವಾಗಿ ಎದುರಿಸಿ ಗೆಲುವಿನ ನಗೆ ಬೀರಿದರು.

 ರಾಷ್ಟ್ರೀಯ ಚಾಂಪಿಯನ್ ಮನು ಅತ್ರಿ ಮತ್ತು ಸುಮೀತ್ ಅವರು 2015ರಲ್ಲಿ ಮಲೇಶ್ಯನ್ ಜೋಡಿ ಗೋಹ್ ವಿ ಶೆಮ್ ಮತ್ತು ತ್ಯಾನ್ ವೀ ಕಿಯೊಂಗ್‌ರನ್ನು ಸೈಯದ್ ಮೋದಿ ಗ್ರಾನ್ ಪ್ರೀ ಗೋಲ್ಡ್‌ನಲ್ಲಿ ಮಣಿಸಿದ್ದರು.

ಮುಂದಿನ ಪಂದ್ಯದಲ್ಲಿ ಚೀನಾದ ಹೀ ಜಿಟ್ಟಿಂಗ್ ಮತ್ತು ತ್ಯಾನ್ ಕಿಯಾಂಗ್ ರನ್ನು ಮನು ಅತ್ರಿ ಮತ್ತು ಸುಮೀತ್ ಎದುರಿಸಲಿದ್ದಾರೆ.

    ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಅವರು ಜಪಾನ್‌ನ ಟಾಕೆಶಿ ಕುಮಾರ ಮತ್ತು ಕಿಯ್ಗಿ ಸೊನೊಡಾ ವಿರುದ್ಧ 12-21, 17-21 ಅಂತರದಲ್ಲಿ ಸೋಲು ಅನುಭವಿಸಿದರು. ಮಹಿಳೆಯರ ಡಬಲ್ಸ್ ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಸಿಕ್ಕಿ ರೆಡ್ಡಿ ಅವರು ಕೊರಿಯಾದ ಚಾಂಗ್ ಯೆ ನಾ ಮತ್ತು ಜಂಗ್ ಕಿಯೊಂಗ್ ಯುನ್ ವಿರುದ್ಧ 17-21, 13-21 ಅಂತರದಲ್ಲಿ ಸೋಲು ಅನುಭವಿಸಿದರು.

ಒಲಿಂಪಿಕ್ ಪದಕ ಪಡೆದ ಮಹಿಳಾ ತಾರೆ ಪಿ.ವಿ.ಸಿಂಧು,ಪುರುಷರ ಸಿಂಗಲ್ಸ್‌ನಲ್ಲಿ ಕೆ.ಶ್ರೀಕಾಂತ್ ಮತ್ತು ಎಚ್.ಎಸ್.ಪ್ರಣಯ್ ಗುರುವಾರ ಆಡಲಿದ್ದಾರೆ.

 ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ಅವರು ಚೀನಾದ ಗಾವೊ ಫಾಂಗ್‌ಜಿಯೊ ಮತ್ತು ಪ್ರಣಯ್ ಇಂಡೋನೇಶ್ಯದ ನಂ.10 ಅಂಟೋನಿ ಸಿನಿಸುಕಾ ಗಿಂಟಿಂಗ್‌ರನ್ನು ಎದುರಿಸುವರು. ನಂ.1 ಶ್ರೀಕಾಂತ್ ಹಾಂಕಾಂಗ್‌ನ ವಾಮಗ್ ವಿಂಗ್ ಕಿ ವಿನ್ಸೆಂಟ್ ಅವರನ್ನು ಎದುರಿಸುವರು. ವಿನ್ಸೆಂಟ್ ಏಶ್ಯನ್ ಗೇಮ್ಸ್‌ನಲ್ಲಿ ಕಳೆದ ತಿಂಗಳು ಶ್ರೀಕಾಂತ್‌ಗೆ ಸೋಲುಣಿಸಿದ್ದರು.

ಮಿಶ್ರ ಡಬಲ್ಸ್ ನಲ್ಲಿ ಭಾರತದ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಎನ್.ಸಿಕ್ಕಿ ರೆಡ್ಡಿ ಅವರು ಮಲೇಶ್ಯಾದ ಚಾನ್ ಪೆಂಗ್ ಸೋನ್ ಮತ್ತು ಗೋಹ್ ಲಿಯು ಯಂಗ್‌ರನ್ನು ಎದುರಿಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X