Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬದ್ಧತೆ ಇಲ್ಲದಿದ್ದರೆ ಕಾನೂನುಗಳೆಲ್ಲವೂ...

ಬದ್ಧತೆ ಇಲ್ಲದಿದ್ದರೆ ಕಾನೂನುಗಳೆಲ್ಲವೂ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ13 Sept 2018 12:01 AM IST
share

ಮಾನ್ಯರೇ,

ದಿಲ್ಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದ ನಂತರ ದೇಶದಲ್ಲಿ ಮಹಿಳೆಯರು, ಅಪ್ರಾಪ್ತ ವಯಸ್ಕರ ಮೇಲೆ ನಡೆಯುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹತ್ಯೆ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಸಮಾಜದಲ್ಲಿ ಗಮನಸೆಳೆಯ ತೊಡಗಿದವು. ಇದರಲ್ಲಿ ಮಾಧ್ಯಮಗಳ ಪಾತ್ರವೂ ಪ್ರಮುಖವಾಗಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಂತರ ದೇಶದ ತುಂಬೆಲ್ಲಾ ನಡೆಯುವ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಂತಹ ಘನಘೋರ ಕೃತ್ಯಗಳ ವಿರುದ್ಧ ಇಡೀ ದೇಶದಲ್ಲಿ ಜಾಗೃತಿ ಮೂಡಿವೆ.

ಪ್ರಪಂಚದಲ್ಲಿ ಮುಂದುವರಿದ ದೇಶಗಳು ಸೇರಿದಂತೆ ಎಲ್ಲಾ ರಾಷ್ಟ್ರಗಳಲ್ಲೂ ಅತ್ಯಾಚಾರ ಪ್ರಕರಣಗಳು ನಡೆಯುತ್ತವೆ. ಅದರೆ ಭಾರತ ವಿಶ್ವದ ಅತ್ಯಾಚಾರ ಪ್ರಕರಣಗಳಲ್ಲಿ ಟಾಪ್ 10ರೊಳಗೆ ಗುರುತಿಸಿಕೊಂಡಿದ್ದು ಅಭಿವೃದ್ಧಿಶೀಲ ದೇಶವಾದ ಭಾರತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಬಿಂಬಿಸಿದೆ. ನ್ಯಾಷನಲ್ ಕ್ರೈಮ್ ಬ್ಯುರೊ ರೆಕಾರ್ಡ್ ಪ್ರಕಾರ ಎರಡು ವರ್ಷಗಳ ಹಿಂದೆ ದೇಶಾದ್ಯಂತ 38,947 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಅದರಲ್ಲೂ ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ, ಹತ್ಯೆಗಳಂತಹ ಹೇಯ ಕೃತ್ಯಗಳು ದೇಶವಾಸಿಗಳನ್ನು ಆಘಾತಗೊಳಿಸಿವೆ.

ಕಥುವಾ, ಉನ್ನಾವೊ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಇಂತಹ ಅಪರಾಧ ಕೃತ್ಯಗಳ ತಡೆಗೆ ಕಠಿಣ ಕಾನೂನು ತರುವ ಚಿಂತನೆಯತ್ತ ಹೊರಡಿಸಿದವು. ಇದೀಗ ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಗಲ್ಲು ಶಿಕ್ಷೆ ನೀಡುವ ವಿಧೇಯಕವನ್ನು ಸಂಸತ್‌ನಲ್ಲಿ ಪಾಸ್ ಮಾಡಲಾಗಿದೆ. ಇದು ಕಾನೂನಾಗಿ ರೂಪುಗೊಂಡು ಪೈಶಾಚಿಕ ಕೃತ್ಯ ಎಸಗಿದವರಿಗೆ ಗಲ್ಲುಗಂಬಕ್ಕೆ ಕೊಂಡೊಯ್ಯಲಿದೆ. ಇದಕ್ಕೂ ಮುನ್ನ ಅತ್ಯಾಚಾರ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವ ಪೊಕ್ಸೊ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಜಾರಿಯಲ್ಲಿವೆ. ಆದರೆ ಎಂತಹ ಕಠಿಣ ಕಾನೂನನ್ನು ತಂದರೂ ಜಾರಿ ಮಾಡುವವರಿಗೆ ಬದ್ಧತೆ, ಇಚ್ಛಾಶಕ್ತಿ ಇಲ್ಲದಿದ್ದರೆ ಎಲ್ಲಾ ಕಾನೂನುಗಳು ವ್ಯರ್ಥ.

-ಅರ್ಪಿತಾ ವಿ. ರಾವ್, ಎಚ್. ಡಿ. ಕೋಟೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X