Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸಂಪುಟ ವಿಸ್ತರಣೆ ಸದ್ಯಕ್ಕೆ ದೂರ ...

ರಾಜ್ಯ ಸಂಪುಟ ವಿಸ್ತರಣೆ ಸದ್ಯಕ್ಕೆ ದೂರ ..!

ವಾರ್ತಾಭಾರತಿವಾರ್ತಾಭಾರತಿ13 Sept 2018 10:01 PM IST
share
ರಾಜ್ಯ ಸಂಪುಟ ವಿಸ್ತರಣೆ ಸದ್ಯಕ್ಕೆ ದೂರ  ..!

ಬೆಂಗಳೂರು, ಸೆ.13: ರಾಜ್ಯದಲ್ಲಿ ಮೈತ್ರಿ ಸರಕಾರಕ್ಕೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸದ್ಯಕ್ಕೆ   ದೂರವಾಗುವ ಎಲ್ಲ ಸೂಚನೆ ಕಂಡು ಬಂದಿದೆ.

ಸಮನ್ವಯ ಸಮಿತಿಯ ನಿರ್ಧಾರದಂತೆ ಸೆಪ್ಟಂಬರ್ ಮೂರನೇ ವಾರದಲ್ಲಿ ಸಚಿವ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಚಿವರ ನೇಮಕವಾಗಬೇಕಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕವನ್ನು ಮುಂದೂಡಲು ಹೈಕಮಾಂಡ್ ನಿರ್ಧರಿಸಿದೆ.

6 ಸಚಿವ ಸ್ಥಾನ  ಮತ್ತು 20 ನಿಗಮ ಮಂಡಳಿಗಳ ಹುದ್ದೆ ಖಾಲಿ ಇದೆ.  ಹಲವು ಮಂದಿ ಶಾಸಕರು ಕಣ್ಣಿಟ್ಟಿದ್ದಾರೆ. ಒಂದು ವೇಳೆ ದೋಸ್ತಿ ಸರಕಾರ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡುವ ನಿಟ್ಟಿನಲ್ಲಿ ಗಮನ ಹರಿಸಿದರೆ  ಸರಕಾರಕ್ಕೆ ಹೊಸ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಲೋಕಸಭೆ ಚುನಾವಣೆ ಮುಗಿಯುವ ತನಕ  ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದು ಬಂದಿದೆ.

ಜೆಡಿಎಸ್ ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನಲ್ಲಿ ಒಳಜಗಳ ಇದೆ. ಜಾರಕಿಹೊಳಿ ಸಹೋದರರು ಅನಗತ್ಯವಾಗಿ ಗೊಂದಲ ಸೃಷ್ಟಿಸಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಕಣ್ಣಿಟ್ಟು ಕಾಯುತ್ತಿರುವ ವಿಪಕ್ಷ ಬಿಜೆಪಿ ಆಪರೇಶನ್ ಕಮಲಕ್ಕೆ ಚಿಂತನೆ ನಡೆಸಿದೆ. ಅತೃಪ್ತ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವುದು ಬಹಿರಂಗಗೊಂಡಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹೈಕಮಾಂಡ್  ಸಮ್ಮಿಶ್ರ ಸರಕಾರಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸಿದೆ ಎನ್ನಲಾಗಿದೆ.

ಜಾರಕಿಹೊಳಿ ಸಹೋದರರ ವರ್ತನೆಯ ಬಗ್ಗೆ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಬೇಸರ ವ್ಯಕ್ತಪಡಿಸಿ  ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ  ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. " ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ "  ಎಂದು ಗೌಡರು  ಗುಡುಗಿದ್ದಾರೆ ''ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X