Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಿಂಗ್‌ಪಿನ್‌ಗಳ ಹಿನ್ನೆಲೆ ನನಗೆ ಗೊತ್ತು:...

ಕಿಂಗ್‌ಪಿನ್‌ಗಳ ಹಿನ್ನೆಲೆ ನನಗೆ ಗೊತ್ತು: ಮುಖ್ಯಮಂತ್ರಿ ಕುಮಾರಸ್ವಾಮಿ

"ಸರಕಾರ ಬೀಳಿಸಲು ಬಿಜೆಪಿ ವ್ಯರ್ಥ ಕಸರತ್ತು"

ವಾರ್ತಾಭಾರತಿವಾರ್ತಾಭಾರತಿ14 Sept 2018 5:58 PM IST
share
ಕಿಂಗ್‌ಪಿನ್‌ಗಳ ಹಿನ್ನೆಲೆ ನನಗೆ ಗೊತ್ತು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಸೆ.14: ರಾಜ್ಯದ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ವ್ಯರ್ಥ ಕಸರತ್ತು ಮಾಡುತ್ತಿದೆ. ಇದಕ್ಕಾಗಿ ಯಾರಿಂದ ಯಾರು ಹಣ ಸಂಗ್ರಹಿಸುತ್ತಿದ್ದಾರೆ. ಇದರ ಹಿಂದಿರುವ ಕಿಂಗ್‌ಪಿನ್‌ಗಳು ಯಾರು, ಅವರ ಹಿನ್ನೆಲೆ ಏನು ಎಲ್ಲ ಮಾಹಿತಿಯೂ ನನ್ನ ಬಳಿಯಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ಸಕಲೇಶಪುರದ ಕಾಫಿ ಪ್ಲಾಂಟರ್ ಒಬ್ಬರು ರೆಸಾರ್ಟ್ ಮಾಡಲು ಹೋಗಿದ್ದರು. ತನ್ನ ಹೆಂಡತಿ ಹಾಗೂ ಜನ್ಮ ಕೊಟ್ಟ ಮಗುವನ್ನು ಕೊಂದ ಅವರು ಈಗ ಜೈಲಿನಲ್ಲಿದ್ದಾರೆ. ಅದಕ್ಕೆ ಕಾರಣವಾದವರು ಯಾರು ಅನ್ನೋದು ಗೊತ್ತಿದೆ ಎಂದರು.

2010ರಲ್ಲಿ ಬಿಬಿಎಂಪಿ ಕಡತಗಳ ಕಚೇರಿಗೆ ಬೆಂಕಿ ಇಟ್ಟವರು ಯಾರು? ಅದರ ಹಿಂದೆ ಇರುವ ಕಿಂಗ್‌ಪಿನ್ ಯಾರು? ಯಾರ ಜೊತೆ ಸೇರಿ ಸರಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇಸ್ಪೀಟ್ ದಂಧೆಯಲ್ಲಿ ಕೋಟ್ಯಂತರ ರೂ.ಸಂಗ್ರಹಿಸಿದ್ದಾರೆ. ಸರಕಾರ ಬೀಳಿಸಲು ಆ ಹಣವನ್ನು ಬಳಕೆ ಮಾಡುತ್ತಿದ್ದಾರೆ. ಈ ಎಲ್ಲ ಮಾಹಿತಿಗಳು ನನ್ನ ಬಳಿ ಇದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಬಿಜೆಪಿಯವರು ಅವರ ಕೆಲಸ ಮಾಡಲಿ, ನಾನು ಯಾವುದಕ್ಕೂ ತಲೆ ಕಡೆಸಿಕೊಳ್ಳುವುದಿಲ್ಲ, ಆರಾಮಾಗಿದ್ದೇನೆ. ಶಾಸಕರಿಗೆ ಹಣದ ಆಮಿಷ ಒಡ್ಡುತ್ತಿರುವುದು ಗೊತ್ತಿದೆ. ನಾನು ಸುಮ್ಮನೆ ಕೂತಿಲ್ಲ. ಸರಕಾರವನ್ನು ಬೀಳಿಸಲು ಯಾರು ಯಾರು ಕಿಂಗ್‌ಪಿನ್‌ಗಳು ಕೆಲಸ ಮಾಡುತ್ತಿದ್ದಾರೆ. ಯಾರಿಂದ ಹೇಗೆ ಹಣ ಸಂಗ್ರಹ ಮಾಡುತ್ತಿದ್ದಾರೆ ಎಲ್ಲವೂ ಗೊತ್ತು ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರಕಾರವನ್ನು ಬೀಳಿಸಲು ಪದೇ ಪದೇ ಡೆಡ್‌ಲೈನ್‌ಗಳು ಮಾಧ್ಯಮಗಳಲ್ಲಿ ಬರುತ್ತಿದೆ. ಸೋಮವಾರದ ಡೆಡ್‌ಲೈನ್ ಮುಗಿಯಿತು, ಗಣೇಶ ಹಬ್ಬದ ಡೆಡ್‌ಲೈನ್ ಕೂಡ ಮುಗಿಯಿತು. ಈಗ ಬಹುಷ ಅಕ್ಟೋಬರ್ 2, ನಂತರ ದಸರಾ, ಆಮೇಲೆ ಪಂಚಾಂಗ ನೋಡಿಕೊಂಡು ಬೇರೆ ಮುಹೂರ್ತ ನಿಗದಿ ಮಾಡುತ್ತಾರೇನೋ ಎಂದು ಅವರು ವ್ಯಂಗ್ಯವಾಡಿದರು.

ಸರಕಾರ ಅಸ್ಥಿರವಾಗಲಿದೆ ಎಂಬ ಅಸಡ್ಡೆ ಸರಕಾರಿ ಅಧಿಕಾರಿಗಳಲ್ಲಿ ಮೂಡುತ್ತಿದೆ. ಅವರಿಗೆ ಚಾಟಿ ಬೀಸಬೇಕಿದೆ. ಆದುದರಿಂದ, ಸೋಮವಾರದಿಂದ ಅಧಿಕಾರಿಗಳ ಸಭೆ ಕರೆಯುತ್ತಿದ್ದೇನೆ. ಇನ್ನೂ ಕಠಿಣವಾಗಿ ಮುಂದುವರೆಯಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಜೆಪಿ ಪಕ್ಷ ಹಾಗೂ ಯಡಿಯೂರಪ್ಪಗೆ ರಾಜ್ಯದ ಅಭಿವೃದ್ಧಿ ಬೇಕಾಗಿಲ್ಲ. ಈ ಸರಕಾರವನ್ನು ಹೇಗೆ ಬೀಳಿಸಬೇಕು ಎಂಬ ಚಿಂತನೆ ಮಾತ್ರ ಅವರನ್ನು ಆವರಿಸಿಕೊಂಡಿದೆ. ಬಿಜೆಪಿಯವರು ರೆಸಾರ್ಟ್, ಗುಡಿಸಲು ಏನನ್ನಾದರೂ ಸಿದ್ಧಮಾಡಿಕೊಳ್ಳಲಿ, ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿ ಕೆಲ ಶಾಸಕರು ನನ್ನ ಜೊತೆ ಹಳೆಯ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಹಿಂದೆ ಅವರ ಜೊತೆ ಸೇರಿ ಸರಕಾರ ಮಾಡಿದ್ದೇನೆ. ನಾನು ಮೈಸೂರು ಭಾಗದ ಬಿಜೆಪಿ ಶಾಸಕರನ್ನು ಮುಟ್ಟುವುದಿಲ್ಲ. ಅವರನ್ನು ಯಾಕೆ ಈ ವಿಚಾರದಲ್ಲಿ ಎಳೆದು ತರುತ್ತಿದ್ದೀರಾ? ಮಾಧ್ಯಮದವರ ಬಳಿ ಇರುವ ಶಾಸಕರ ಪಟ್ಟಿಯೇ ಬೇರೆ, ನಮ್ಮ ಬಳಿ ಇರುವ ಪಟ್ಟಿಯೇ ಬೇರೆ ಎಂದು ಕುಮಾರಸ್ವಾಮಿ ಹೇಳಿದರು.

ನನಗೆ ರಾಜ್ಯದ ಅಭಿವೃದ್ಧಿ ಮುಖ್ಯ. ನಾನು ಜನರ ಕೆಲಸ ಮಾಡಬೇಕು. ಬಿಜೆಪಿಯವರು ಮಾಡುತ್ತಿರುವ ಕೆಲಸವನ್ನು ನಾನೇಕೆ ಮಾಡಲಿ, ಸರಕಾರ ಉಳಿಸಿಕೊಳ್ಳುವುದು ನನ್ನ ಕರ್ತವ್ಯ. ಅದಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಮಾರ್ಮಿಕವಾಗಿ ನುಡಿದರು.

ನಾಳೆ ಬೆಳಗಾವಿಗೆ ಹೋಗುತ್ತಿದ್ದೇನೆ. ರಾಷ್ಟ್ರಪತಿಯವರ ಸಭೆಯಲ್ಲಿ ಭಾಗವಹಿಸಿ, ನಂತರ ಜನತೆಯ ಕಷ್ಟ ಸುಖ ಆಲಿಸಲು ಜನತಾ ದರ್ಶನ ಏರ್ಪಡಿಸಿದ್ದೇನೆ. ಅದನ್ನು ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತೇನೆ. ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಸಚಿವರು ನನ್ನ ಜೊತೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X