Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುರ್ತು ಸಂದರ್ಭ ಪ್ರಾಣ ರಕ್ಷಣೆಗೆ...

ತುರ್ತು ಸಂದರ್ಭ ಪ್ರಾಣ ರಕ್ಷಣೆಗೆ ‘ಸೇವಿಯರ್’ ಆ್ಯಪ್ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ14 Sept 2018 8:06 PM IST
share

ಮಂಗಳೂರು, ಸೆ.14: ತುರ್ತು ಸಂದರ್ಭ ಅಂದರೆ ಅಪಘಾತ, ಹೃದಯಾಘಾತ ಮತ್ತಿತರ ಘಟನೆ ನಡೆದಾಗ ಪ್ರಾಣರಕ್ಷಣೆಗೆ ‘ಸೇವಿಯರ್’ ಎಂಬ ಹೊಸ ಆ್ಯಪ್ ಸಿದ್ಧಗೊಂಡಿದೆ.

ಈ ಬಗ್ಗೆ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್‌ನ ಸ್ಥಾಪಕ ದೀಕ್ಷಿತ್ ರೈ ಹಿಂದೆ ತುರ್ತು ಸಂದರ್ಭ ಆ್ಯಂಬುಲೆನ್ಸ್‌ಗೆ ತಾಸುಗಟ್ಟಲೆ ಕಾಯಬೇಕಿತ್ತು. ಆದರೆ ಇನ್ನು ಮುಂದೆ ಕಾಯಬೇಕಿಲ್ಲ. ಮೊಬೈಲ್‌ನಲ್ಲಿ ಬಟನ್ ಅದುಮಿದರೆ ಕೆಲವೇ ನಿಮಿಷದಲ್ಲಿ ಆ್ಯಂಬುಲೆನ್ಸ್ ಘಟನೆ ನಡೆದ ಸ್ಥಳಕ್ಕೆ ಹಾಜರಾಗಲಿದೆ. ಅಷ್ಟೇ ಅಲ್ಲದೆ ಪ್ರಥಮ ಚಿಕಿತ್ಸೆಗಾಗಿ ಸ್ವಯಂ ಸೇವಕರೂ ಬರಲಿದ್ದಾರೆ ಎಂದರು.

ಮಂಗಳೂರು ಕೆಎಂಸಿ ಆಸ್ಪತ್ರೆಯ ವೈದ್ಯ ಡಾ. ಮನೀಶ್ ರೈ ಮಾತನಾಡಿ, ಸೇವಿಯರ್ ಆ್ಯಪ್‌ನಲ್ಲಿ ಅತ್ತಾವರ ಕೆಎಂಸಿ, ಜ್ಯೋತಿ ಕೆಎಂಸಿ, ಯೆನೆಪೊಯ ಆಸ್ಪತ್ರೆ, ಕೆ.ಎಸ್. ಹೆಗ್ಡೆ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕಣಚೂರು ಆಸ್ಪತ್ರೆ, ವೆನ್‌ಲಾಕ್ ಆಸ್ಪತ್ರೆ, ಫಾದರ್ ಮುಲ್ಲರ್ ಆಸ್ಪತ್ರೆ ಹಾಗೂ ಆಳ್ವಾಸ್ ಆಸ್ಪತ್ರೆಗಳು ಲಿಂಕ್ ಆಗಿವೆ.

ವ್ಯಕ್ತಿಗೆ ಹೃದಯಾಘಾತ, ಅಪಘಾತಗಳಾದ ಸಂದರ್ಭ ಅಥವಾ ತುರ್ತು ವೈದ್ಯಕೀಯ ನೆರವು ಬೇಕಾದಾಗ ಆ್ಯಪ್ ಹೊಂದಿದವರು ಆ ಸ್ಥಳದಿಂದ ರಿಕ್ವೆಸ್ಟ್ ಬಟನ್ ಅದುಮಬೇಕು. ತಕ್ಷಣ ಸಮೀಪದಲ್ಲಿರುವ ಆ್ಯಂಬುಲೆನ್ಸ್ ಚಾಲಕರ ಮೊಬೈಲ್ ಬೀಪ್ ಆಗುತ್ತದೆ ಮತ್ತು ಸ್ಥಳದ ಜಿಪಿಎಸ್ ವಿವರಗಳು ಸಿಗುತ್ತದೆ. ಆ ಚಾಲಕ ರಿಕ್ವೆಸ್ಟ್ ಓಕೆ ಮಾಡಿದೊಡನೆ ವ್ಯಕ್ತಿಯ ಮೊಬೈಲ್‌ಗೆ ಮರು ಸಂದೇಶ ರವಾನೆಯಾಗುತ್ತದೆ. ಅಲ್ಲದೆ ಕೆಲವೇ ನಿಮಿಷದಲ್ಲಿ ಆ್ಯಂಬುಲೆನ್ಸ್ ತಲುಪುತ್ತದೆ. ಜೊತೆಗೆ ಪ್ರಥಮ ಚಿಕಿತ್ಸೆ ನೀಡುವವರು ಬೇಕಾಗಿದ್ದರೆ ಅವರನ್ನೂ ಸ್ಥಳಕ್ಕೆ ಕರೆಸುವ ವ್ಯವಸ್ಥೆ ಇದೆ. ಇದರಿಂದ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದರಲ್ಲದೆ, ಆ್ಯಂಬುಲೆನ್ಸ್ ಸೇರಿದ ಆಸ್ಪತ್ರೆಗೇ ರೋಗಿ ತೆರಳಬೇಕಾಗಿಲ್ಲ. ಆತ ಬಯಸಿದ ಆಸ್ಪತ್ರೆಗೇ ಕರೆದೊಯ್ಯಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.

ಸೆ.16ರಂದು ಸಮ್ಮೇಳನ: ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ ಈ ಆ್ಯಪ್‌ನ ಕಾರ್ಯನಿರ್ವಹಣೆ ಕುರಿತು ಸಾರ್ವಜನಿಕರಿಗೆ ತರಬೇತಿ ನೀಡಲು ಸೇವಿಯರ್ ಮತ್ತು ಜಿಲ್ಲಾಧಿಕಾರಿ ಕಚೇರಿಯ ಸಹಯೋಗದಲ್ಲಿ ಸೆ.16ರಂದು ಬೆಳಗ್ಗೆ 9 ಗಂಟೆಗೆ ನಗರದ ಪುರಭವನದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ಸೆ.15ರಂದು ಕಾರ್ಯಾಗಾರ : ಈ ಬಗ್ಗೆ ಸೆ.15ರಂದು ಬೆಳಗ್ಗೆ 9ರಿಂದ ವಿವಿಧ ಆಸ್ಪತ್ರೆಗಳಲ್ಲಿ ಆ್ಯಪ್ ಕುರಿತು ತರಬೇತಿ ಕಾರ್ಯಾಗಾರಗಳು ನಡೆಯಲಿವೆ. ಸುಮಾರು 300ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದುಕೊಳ್ಳಲಿದ್ದಾರೆ.

ಕೆಎಂಸಿ ಆಸ್ಪತ್ರೆಯ ವೈದ್ಯ ಡಾ. ಜೀದು ರಾಧಾಕೃಷ್ಣನ್, ಡಾ. ಮೇಘನಾ ಮುಕುಂದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X