Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊಡಗಿನಲ್ಲಿ ಪ್ರಕೃತಿ ವಿಕೋಪ ವಿಚಾರ:...

ಕೊಡಗಿನಲ್ಲಿ ಪ್ರಕೃತಿ ವಿಕೋಪ ವಿಚಾರ: ಸಂಪೂರ್ಣ ಅಧ್ಯಯನ ನಡೆಸಲು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

ವಾರ್ತಾಭಾರತಿವಾರ್ತಾಭಾರತಿ14 Sept 2018 10:41 PM IST
share
ಕೊಡಗಿನಲ್ಲಿ ಪ್ರಕೃತಿ ವಿಕೋಪ ವಿಚಾರ: ಸಂಪೂರ್ಣ ಅಧ್ಯಯನ ನಡೆಸಲು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

ಬೆಂಗಳೂರು, ಸೆ.14: ಕಳೆದ ವಾರ ಕೊಡಗು ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹದ ಕಾರಣಗಳ ಕುರಿತು ಅಧ್ಯಯನ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.   

ಈ ಕುರಿತು ರಾಜ್ಯ ಮಾಹಿತಿ ಆಯೋಗದ ಮಾಜಿ ಆಯುಕ್ತ ಜೆ.ಎಸ್. ವಿರೂಪಾಕ್ಷಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ವಿಚಾರದ ಬಗ್ಗೆ ಅರ್ಜಿದಾರರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಪತ್ರ ಸಲ್ಲಿಸಲು ಸೂಚಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರ ಪರ ವಕೀಲ ರವೀಂದ್ರ ಕಾಮತ್ ವಾದಿಸಿ, ಕೊಡಗು ನೆರೆ ಪರಿಸ್ಥಿತಿ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗೂ ಹಾಗೂ ವಾಸ್ತವದ ಅಂಶಗಳಿಗೆ ಸಾಕಷ್ಟು ವ್ಯತ್ಯಾಸವಿದೆ. ಕೊಡಗಿನ ನೆರೆ ಪರಿಸ್ಥಿತಿ ಬಗ್ಗೆ ಸಂಪೂರ್ಣ ಅಧ್ಯಯನ ಮಾಡಲು ನ್ಯಾಯಾಂಗ ತನಿಖಾ ಆಯೋಗ ರಚನೆ ಮಾಡಬೇಕು. ಈ ಕುರಿತು ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ನ್ಯಾಯಾಂಗ ತನಿಖೆ ನೇಮಕ ಮಾಡುವುದು ಸರಕಾರದ ಕೆಲಸ. ಸರಕಾರದ ಕೆಲಸವನ್ನು ನ್ಯಾಯಾಲಯ ಮಾಡಲಾಗುವುದಿಲ್ಲ. ಹೀಗಾಗಿ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿ, ಅರ್ಜಿ ವಜಾಗೊಳಿಸಿತು.

ಪ್ರಕರಣವೇನು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಹೀಗಾಗಿ ಪ್ರವಾಹದ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೊಡಗಿನಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ, ಹಾರಂಗಿ ಜಲಾಶಯ ಭರ್ತಿಯಾಗಿತ್ತು. ಹೀಗಿದ್ದರೂ ಜಲಾಶಯದ ಗೇಟ್‌ಗಳನ್ನು ತೆಗೆದು ನೀರು ಹೊರಬಿಡಲಾಗಿಲ್ಲ. ಇದರಿಂದ ಹಿನ್ನೀರು ಹೆಚ್ಚಾಗಿ, ಈ ಭಾಗದ 32 ಹಳ್ಳಿಗಳಿಗೆ ನುಗ್ಗಿದೆ. ಅಧಿಕಾರಿಗಳ ನಿರ್ಲಕ್ಷವೇ ಪ್ರವಾಹ ಸ್ಥಿತಿಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕಿದೆ. ನೆರೆಯಿಂದ ಸಾವಿರಾರು ಎಕರೆ ಭೂಮಿ ನಾಶವಾಗಿದ್ದು, ಅಲ್ಲಿ ಮತ್ತೆ ಕೃಷಿ ಚಟುವಟಿಕೆ ನಡೆಸುವುದು ಕಷ್ಟ ಸಾಧ್ಯವಾಗಿದೆ. ಹೀಗಾಗಿ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ಭೂಮಿ ಕಲ್ಪಿಸಬೇಕಿದೆ. ಈ ಕುರಿತು ಅಧ್ಯಯನ ನಡೆಸಲು ನ್ಯಾಯಾಂಗ ಆಯೋಗ ರಚಿಸಬೇಕು ಎಂದು ಮನವಿ ಮಾಡಿರುವ ಅರ್ಜಿದಾರರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಈ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಆಯೋಗಕ್ಕೆ ನಿರ್ದೇಶಿಸಬೇಕೆಂದು ಮಧ್ಯಂತರ ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X