Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್‌ ಚಾಂಪಿಯನ್ ಸ್ವಪ್ನಾಗೆ...

ಏಶ್ಯನ್ ಗೇಮ್ಸ್‌ ಚಾಂಪಿಯನ್ ಸ್ವಪ್ನಾಗೆ ಒಪ್ಪುವಂತಹ ಶೂ ಒದಗಿಸಲಿರುವ ಸಾಯ್

ವಾರ್ತಾಭಾರತಿವಾರ್ತಾಭಾರತಿ14 Sept 2018 11:55 PM IST
share
ಏಶ್ಯನ್ ಗೇಮ್ಸ್‌ ಚಾಂಪಿಯನ್ ಸ್ವಪ್ನಾಗೆ ಒಪ್ಪುವಂತಹ ಶೂ ಒದಗಿಸಲಿರುವ ಸಾಯ್

ಹೊಸದಿಲ್ಲಿ, ಸೆ.14: ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಸ್ವಪ್ನಾ ಬರ್ಮನ್‌ರ 12 ಬೆರಳಿನ ಪಾದಕ್ಕೆ ಒಪ್ಪುವಂತಹ ಶೂ ಒದಗಿಸಲು ಮುಂದಾಗಿರುವ ಭಾರತದ ಕ್ರೀಡಾ ಪ್ರಾಧಿಕಾರ(ಸಾಯ್) ಪಾದರಕ್ಷೆ ಕಂಪೆನಿ ಅಡಿಡಾಸ್‌ನೊಂದಿಗೆ ಶೀಘ್ರವೇ ಒಪ್ಪಂದಕ್ಕೆ ಸಹಿ ಹಾಕಲಿದೆ.

‘‘ಅಥ್ಲೀಟ್ ಸ್ವಪ್ನಾರ ಶೂ ಸಮಸ್ಯೆ ಬಗ್ಗೆ ಗೊತ್ತಾದ ತಕ್ಷಣ ಕ್ರೀಡಾ ಸಚಿವಾಲಯ ಆಕೆಯ ಪಾದಕ್ಕೆ ಒಪ್ಪುವಂತಹ ಶೂಗಳನ್ನು ಸಿದ್ಧ ಮಾಡುವಂತೆ ಆದೇಶ ನೀಡಿದೆ. ನಾವು ಈ ವಿಷಯವನ್ನು ಅಡಿಡಾಸ್ ಮುಂದಿಟ್ಟಿದ್ದೇವೆ. ಕಂಪೆನಿಯು ಶೂಗಳನ್ನು ಪೂರೈಸಲು ಒಪ್ಪಿಕೊಂಡಿದೆ’’ ಎಂದು ಸಾಯ್ ಪ್ರಧಾನ ನಿರ್ದೇಶಕ ನೀಲಂ ಕಪೂರ್ ಹೇಳಿದ್ದಾರೆ.

ಸ್ವಪ್ನಾಗೆ ಹುಟ್ಟುವಾಗಲೇ ಎರಡೂ ಕಾಲಿನಲ್ಲಿ ಆರು ಬೆರಳುಗಳಿದ್ದವು. ಕಳೆದ ತಿಂಗಳು ಜಕಾರ್ತದಲ್ಲಿ ನಡೆದ ಏಶ್ಯನ್ ಗೇಮ್ಸ್‌ನಲ್ಲಿ ಹೆಪ್ಟಾಥ್ಲಾನ್‌ನಲ್ಲಿ ಎಲ್ಲ ಸಮಸ್ಯೆಯ ನಡುವೆಯೂ ಜೀವನಶ್ರೇಷ್ಠ ಪ್ರದರ್ಶನ ನೀಡಿ ಪದಕ ಜಯಿಸಿದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡಿದ್ದರು. ಚಿನ್ನ ಗೆದ್ದ ಬಳಿಕ ಸ್ವಪ್ನಾರ ಶೂ ಸಮಸ್ಯೆ ಹೆಚ್ಚು ಗಮನ ಸೆಳೆದಿತ್ತು.

ತನ್ನ ಕಾಲಿಗೆ ಒಪ್ಪುವಂತಹ ಶೂಗಳನ್ನು ಒದಗಿಸುವಂತೆ ಸ್ವಪ್ನಾ ವಿನಂತಿಸಿಕೊಂಡಿದ್ದರು. ತುರ್ತಾಗಿ ಕ್ರಮ ಕೈಗೊಳ್ಳುವಂತೆ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಸಾಯ್‌ಗೆ ನಿರ್ದೇಶನ ನೀಡಿದ್ದರು. ಸ್ವಪ್ನಾ ಕಾಲಿನ ಅಳತೆ, ಕಾಲಿಗೆ ಒಪ್ಪುವಂತಹ ಶೂ ನಕ್ಷೆ ಸಹಿತ ಹಲವು ವಿವರವನ್ನು ನೀಡುವಂತೆಯೂ ಸ್ವಪ್ನಾರ ಕೋಚ್ ಸುಭಾಶ್ ಸರ್ಕಾರ್‌ಗೆ ಸಾಯ್ ಈಗಾಗಲೇ ಸೂಚಿಸಿದೆ.

‘‘ಸಾಯ್ ನನಗೆ ಕರೆ ಮಾಡಿ ಸ್ವಪ್ನಾರ ಕಾಲಿನ ಅಳತೆ ನೀಡುವಂತೆ ತಿಳಿಸಿದೆ. ನಾನು ಏಶ್ಯಾಗೇಮ್ಸ್ ಆರಂಭವಾಗುವ ಮೊದಲೇ ಸಾಯ್ ಅಧಿಕಾರಿಗಳೊಂದಿಗೆ ಮಾತನಾಡಿ ಸ್ವಪ್ನಾಗೆ ಸೂಕ್ತ ಶೂ ನೀಡುವಂತೆ ಕೇಳಿಕೊಂಡಿದ್ದೆ. ಆಗ ನನ್ನ ಮಾತನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಆಕೆ ಚಿನ್ನ ಗೆದ್ದ ತಕ್ಷಣ ಸೆಲೆಬ್ರಿಟಿಯಾಗಿದ್ದು, ಎಲ್ಲ ಕಂಪೆನಿಗಳು ಸ್ವಪ್ನಾ ಹೆಸರಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ’’ಎಂದು ಸರ್ಕಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X