Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತರಿಗೆ ಪ್ರತ್ಯೇಕ ಮತದಾನ ಹಕ್ಕು...

ದಲಿತರಿಗೆ ಪ್ರತ್ಯೇಕ ಮತದಾನ ಹಕ್ಕು ವಿಚಾರದಲ್ಲಿ ಗಾಂಧಿ ನಿಲುವೇ ಸರಿಯಿತ್ತು: ರಾಜ್ಯಸಭಾ ಸದಸ್ಯ ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ15 Sept 2018 7:05 PM IST
share
ದಲಿತರಿಗೆ ಪ್ರತ್ಯೇಕ ಮತದಾನ ಹಕ್ಕು ವಿಚಾರದಲ್ಲಿ ಗಾಂಧಿ ನಿಲುವೇ ಸರಿಯಿತ್ತು: ರಾಜ್ಯಸಭಾ ಸದಸ್ಯ ಹನುಮಂತಯ್ಯ

ಬೆಂಗಳೂರು, ಸೆ.15: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ನಡುವೆ ದಲಿತರಿಗೆ ಪ್ರತ್ಯೇಕ ಮತದಾನ ಹಕ್ಕು ನೀಡುವ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಆದರೂ, ಈ ವಿಚಾರದಲ್ಲಿ ಗಾಂಧೀಜಿಯ ನಿಲುವೇ ಸರಿಯಾಗಿತ್ತು ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಹೇಳಿದ್ದಾರೆ.

ಶನಿವಾರ ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ನಗರದ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಜನರಿಗೆ ಮೋಹನದಾಸ್ ಕರಮಚಂದ ಗಾಂಧೀಜಿ ಮತ್ತು ಭೀಮರಾಮ್ ರಾಮ್‌ಜೀ ಅಂಬೇಡ್ಕರ್ ವಿಚಾರಧಾರೆ’ ವಿಷಯ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಲಿತರಿಗೆ ಪ್ರತ್ಯೇಕ ಮತದಾನದ ಅವಕಾಶ ನೀಡಿದರೆ ಶೋಷಿತ ವರ್ಗವನ್ನು ಮತ್ತಷ್ಟು ಶೋಷಿತರನ್ನಾಗಿ ಮಾಡಿದಂತಾಗುತ್ತದೆ ಎಂಬುದು ಗಾಂಧೀಜಿ ವಾದವಾಗಿತ್ತು. ಆದರೆ, ಭಯವಿಲ್ಲದೆ, ಸ್ವತಂತ್ರವಾಗಿ ನೈಜ ಜನನಾಯಕ, ತಮಗಿಷ್ಟವಾದ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರೆ ದಲಿತರಿಗೆ ಮತದಾನ ಹಕ್ಕು ಸಿಗಬೇಕು ಎಂಬುದು ಅಂಬೇಡ್ಕರ್ ವಾದವಾಗಿತ್ತು. ಇದನ್ನು ಮಹಾತ್ಮಗಾಂಧೀಜಿ ವಿರೋಧಿಸಿ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದರು ಎಂದು ಅವರು ತಿಳಿಸಿದರು.

ಗಾಂಧೀಜಿ ಮತ್ತು ಅಂಬೇಡ್ಕರ್ ಭಾರತದ ಅತಿದೊಡ್ಡ ನಿರ್ಮಾಪಕರಾಗಿದ್ದಾರೆ. ಅಹಿಂಸೆ ಮೂಲಕ ಗಾಂಧಿ ಚಳವಳಿ ಕಟ್ಟಿದರೆ, ತನ್ನ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ, ಶೋಷಿತ ವರ್ಗಗಳ ಪರವಾಗಿ ಅಂಬೇಡ್ಕರ್ ಚಳವಳಿ ಕಟ್ಟಿದ್ದಾರೆ. ಈ ಇಬ್ಬರೂ ನಾಯಕರು ದೇಶ ಕಂಡ ಮಹಾನ್ ವ್ಯಕ್ತಿಗಳಾಗಿದ್ದಾರೆ ಎಂದು ಬಣ್ಣಿಸಿದರು.

ದೇಶದಲ್ಲಿ ಅಹಿಂಸೆ ಮೂಲಕ ಹೋರಾಟ ನಡೆಸುತ್ತಿದ್ದ ಗಾಂಧೀಜಿಯ ಮಾತನ್ನು ಯಾರೂ ನಿರಾಕರಿಸುತ್ತಿರಲಿಲ್ಲ. ಅವರು ಏನು ಹೇಳಿದರೂ ಅದನ್ನು ಜನರು ತಪ್ಪದೇ ಪಾಲಿಸುತ್ತಿದ್ದರು. ಈ ಸಂದರ್ಭದಲ್ಲಿ ಗಾಂಧೀಜಿ ಮನಸ್ಸು ಮಾಡಿದ್ದರೆ ಬಯಸಿದ ಹುದ್ದೆಯನ್ನು, ಸ್ಥಾನ-ಮಾನಗಳನ್ನು ಪಡೆದುಕೊಳ್ಳಬಹುದಿತ್ತು. ಆದರೆ, ಅವರು ಎಂದೂ ತನ್ನ ಸ್ವಾರ್ಥಕ್ಕಾಗಿ ಏನನ್ನು ಯೋಚಿಸಿದವರಲ್ಲ. ಅಲ್ಲದೆ, ತಾವು ನಂಬಿದ ತತ್ವ ಸಿದ್ಧಾಂತದಲ್ಲಿ ಎಂದೂ ರಾಜಿ ಮಾಡಿಕೊಂಡವರಲ್ಲ ಎಂದು ಹನುಮಂತಯ್ಯ ಹೇಳಿದರು.

ಸ್ವತಂತ್ರ ರಾಷ್ಟ್ರವಾದ ಭಾರತದಲ್ಲಿಂದು ಅಸಮಾನತೆ, ಜಾತೀಯತೆ ಮಿತಿ ಮೀರಿ ಬೆಳೆಯುತ್ತಿದೆ. ಭ್ರಷ್ಟಾಚಾರ ಬೃಹದಾಕಾರದಲ್ಲಿ ಹೆಚ್ಚುತ್ತಿದೆ. ಮತ್ತೊಂದು ಕಡೆ ರಕ್ಷಕರಾಗಬೇಕಿದ್ದ ಪೊಲೀಸರು ಹಿಂಸಾಕಾರರಾಗುತ್ತಿದ್ದಾರೆ. ವಕೀಲರು, ವೈದ್ಯರು ಸುಲಿಗೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಶಾಂತಿ ತತ್ವ ಹೇಳಿಕೊಟ್ಟ ಮಹಾತ್ಮಗಾಂಧಿ ಹಾಗೂ ಶೋಷಣೆಯ ವಿರುದ್ಧ, ಸಮಾನತೆ ಪರವಾಗಿ ಧ್ವನಿ ಎತ್ತಿದ ಅಂಬೇಡ್ಕರ್‌ರ ವಿಚಾರಧಾರೆಗಳು ಪ್ರಸ್ತುತವಾಗಬೇಕಿದೆ. ಅದನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜರೂರು ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಎಸ್.ರಾಮಲಿಂಗೇಶ್ವರ (ಸಿಸಿರಾ), ಡಾ.ಎಸ್.ಪೂರ್ಣಿಮಾ, ಶೇಷಾದ್ರಿಪುರಂ ಕಾಲೇಜಿನ ಪ್ರಾಶುಂಪಾಲ ಪ್ರೊ.ವಿದ್ಯಾ ಶಿವಣ್ಣವರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X