Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆದ್ಯತೆ...

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದ ಪ್ರಥಮ ಭಾರತೀಯ ಪ್ರಧಾನಿ ಮೋದಿ: ಬ್ರಿಟನ್ ಪತ್ರಿಕೆ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ15 Sept 2018 7:19 PM IST
share
ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದ ಪ್ರಥಮ ಭಾರತೀಯ ಪ್ರಧಾನಿ ಮೋದಿ: ಬ್ರಿಟನ್ ಪತ್ರಿಕೆ ಶ್ಲಾಘನೆ

ಹೊಸದಿಲ್ಲಿ, ಸೆ.15: ‘ಆಯುಷ್ಮಾನ್ ಭಾರತ್’ ಯೋಜನೆಯ ಮೂಲಕ ಆರೋಗ್ಯ ರಕ್ಷಣೆಗೆ ಮಹತ್ವ ನೀಡಿರುವ ಪ್ರಧಾನಿ ಮೋದಿ ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಪ್ರಥಮ ಭಾರತೀಯ ಪ್ರಧಾನಿಯಾಗಿದ್ದಾರೆ ಎಂದು ಬ್ರಿಟನ್‌ನ ವೈದ್ಯಕೀಯ ಪತ್ರಿಕೆ ‘ದಿ ಲ್ಯಾನ್ಸೆಟ್’ ತಿಳಿಸಿದೆ.

ಭಾರತದ ಮುಂದಿನ ಮಹಾಚುನಾವಣೆಯಲ್ಲಿ ‘ಆರೋಗ್ಯ’ವು ನಿರ್ಣಾಯಕ ಪಾತ್ರ ವಹಿಸಲಿದೆ ಎಂದೂ ಪತ್ರಿಕೆ ತಿಳಿಸಿದೆ. ಆರೋಗ್ಯಯುತ ಜೀವನ ಸಾಗಿಸುವುದು ದೇಶದ ನಾಗರಿಕರ ಹಕ್ಕಾಗಿದೆ ಎಂಬುದನ್ನು ಮನಗಂಡಿರುವ ಪ್ರಧಾನಿ, ದೇಶದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಮಧ್ಯಮ ವರ್ಗದವರ ಹೆಚ್ಚುತ್ತಿರುವ ಅಪೇಕ್ಷೆಗಳನ್ನು ಈಡೇರಿಸುವ ಮೂಲಕ ರಾಜಕೀಯ ಗುರಿ ಸಾಧಿಸುವ ಸಾಧನವಾಗಿಯೂ ಆರೋಗ್ಯಕ್ಷೇತ್ರಕ್ಕೆ ಆದ್ಯತೆ ನೀಡಿದ್ದಾರೆ ಎಂದು ‘ದಿ ಲ್ಯಾಂಕೆಟ್’ ಪತ್ರಿಕೆಯ ಪ್ರಧಾನ ಸಂಪಾದಕ ರಿಚರ್ಡ್ ಹಾರ್ಟನ್ ಹೇಳಿದ್ದಾರೆ.

ಅಲ್ಲದೆ, ಕೆಳ ವರ್ಗದ ಜನರಿಗೆ, ಆದಿವಾಸಿಗಳಿಗೆ ಹಾಗೂ ಬಡಜನರಿಗೆ ನೆರವಾಗುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಭರವಸೆಯ ಹೊರತಾಗಿಯೂ, ಅವರು ‘ಮೋದಿಕೇರ್’ (ಆಯುಷ್ಮಾನ್ ಭಾರತ್ ಯೋಜನೆ)ಗೆ ಸಾಟಿಯಾಗಲು ವಿಫಲವಾಗಿದ್ದಾರೆ ಎಂದು ಹಾರ್ಟನ್ ಹೇಳಿದ್ದಾರೆ. ಕಳೆದ ತಿಂಗಳು ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನಲ್ಲಿ ಉಪನ್ಯಾಸ ನೀಡಿದ್ದ ರಾಹುಲ್ ಗಾಂಧಿ ಭಾರತದಲ್ಲಿ ತೀವ್ರವಾದ ಉದ್ಯೋಗ ಬಿಕ್ಕಟ್ಟು ತಲೆದೋರಿದೆ ಎಂದಿರುವುದನ್ನು ಉಲ್ಲೇಖಿಸಿರುವ ಪತ್ರಿಕೆ, ಆದರೆ ಭಾರತದಲ್ಲಿ ತೀವ್ರವಾದ ಆರೋಗ್ಯ ಬಿಕ್ಕಟ್ಟೂ ಇದೆ ಎಂದು ತಾನು ಪ್ರಕಟಿಸಿರುವ ವರದಿಗಳಲ್ಲಿ ತಿಳಿಸಿದೆ. ಸುದೀರ್ಘಕಾಲದ ನಿರ್ಲಕ್ಷದ ಬಳಿಕ, ಕಡೆಗೂ ಭಾರತ ಸರಕಾರ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಅಸಮಾಧಾನದಿಂದ ಆಗಬಹುದಾದ ಅಪಾಯವನ್ನು ಮನಗಂಡಿದೆ. ಈ ವರ್ಷ ಚಾಲನೆ ನೀಡಲಾಗಿರುವ ‘ಆಯುಷ್ಮಾನ್ ಭಾರತ್’ ಎಂಬ ಅಭಿಯಾನದ ಮೂಲಕ ಪ್ರಧಾನಿ ಮೋದಿ ಎರಡು ಮಹತ್ವದ ಯೋಜನೆಗಳನ್ನು ಆರಂಭಿಸಿದ್ದಾರೆ.

ಸಾರ್ವತ್ರಿಕ ಆರೋಗ್ಯ ಸುರಕ್ಷೆಯಡಿ ಪ್ರಾಥಮಿಕ ಆರೋಗ್ಯ ರಕ್ಷಣೆ ಸೇವೆ ಒದಗಿಸಲು ದೇಶದಾದ್ಯಂತ 1,50,000 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಆರಂಭಿಸುವುದು ಹಾಗೂ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ ಅಭಿಯಾನ(ಎನ್‌ಎಚ್‌ಪಿಎಂ)ಯಡಿ ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವೆಚ್ಚದ ಆರೋಗ್ಯ ಸೇವೆ ಒದಗಿಸುವುದು- ಈ ಎರಡು ಯೋಜನೆಗಳಾಗಿವೆ ಎಂದು ‘ಲ್ಯಾಂಕೆಟ್’ ತಿಳಿಸಿದೆ. ಭಾರತದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಿರುವಂತೆಯೇ, ಮಾನಸಿಕ ಆರೋಗ್ಯದ ಸಮಸ್ಯೆಯೂ ಇದೆ. 2016ರಲ್ಲಿ ಭಾರತ ವಿಶ್ವದ ಶೇ.18ರಷ್ಟು ಜನಸಂಖ್ಯೆಯನ್ನು ಹೊಂದಿತ್ತು. ಆದರೆ ಮಹಿಳೆಯರ ಆತ್ಮಹತ್ಯೆ ಪ್ರಕರಣ(ಜಾಗತಿಕ)ದ ಶೇ.37ರಷ್ಟು ಮತ್ತು ಪುರುಷರ ಆತ್ಮಹತ್ಯೆ ಪ್ರಕರಣದ ಶೇ.24ರಷ್ಟು ಪ್ರಕರಣ ಭಾರತದಲ್ಲಿ ದಾಖಲಾಗಿದೆ ಎಂದು ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X