Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇತನ ಹೆಚ್ಚಳದಿಂದ ಅಂಗನವಾಡಿ...

ವೇತನ ಹೆಚ್ಚಳದಿಂದ ಅಂಗನವಾಡಿ ಕಾರ್ಯಕರ್ತೆಯರ ಅತೃಪ್ತಿ ನಿವಾರಣೆ: ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ15 Sept 2018 7:31 PM IST
share
ವೇತನ ಹೆಚ್ಚಳದಿಂದ ಅಂಗನವಾಡಿ ಕಾರ್ಯಕರ್ತೆಯರ ಅತೃಪ್ತಿ ನಿವಾರಣೆ: ಜೇಟ್ಲಿ

ಹೊಸದಿಲ್ಲಿ, ಸೆ.15: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ವೇತನದಲ್ಲಿ ಸುಮಾರು ಶೇ.50ರಷ್ಟು ಹೆಚ್ಚಳ ಮಾಡಿರುವುದರಿಂದ ಸುಮಾರು 25 ಲಕ್ಷ ಕಾರ್ಯಕರ್ತರ ಅಸಮಾಧಾನ ದೂರವಾಗಿ ಅವರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಈ ಹಿಂದಿನ ಸರಕಾರಗಳು ಆದಾಯವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದ್ದವು. ಆದ್ದರಿಂದ ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆಯೇ ಅಪನಂಬಿಕೆ ಹುಟ್ಟಿತ್ತು. ಈ ಹಿಂದಿನ ಸರಕಾರಗಳ ಅವಧಿಯಲ್ಲಿ ಯೋಜನೆಗಳ ಲಾಭ ಉದ್ದೇಶಿತ ಜನರಿಗೆ ತಲುಪುತ್ತಿರಲಿಲ್ಲ ಅಥವಾ ಯೋಜಿತ ಗುರಿ ಸಾಧಿಸಲಾಗುತ್ತಿರಲಿಲ್ಲ. ಆದರೆ ಮೋದಿ ಸರಕಾರ ಜನತೆಯ ಹಿತಚಿಂತನೆಗೆ ಹೆಚ್ಚಿನ ಆದ್ಯತೆ ನೀಡಿದೆ.

ಅಂಗನವಾಡಿ ಕಾರ್ಯಕರ್ತರು ರಾಷ್ಟ್ರೀಯ ಪೌಷ್ಠಿಕ ಯೋಜನೆಯ ಮೂಲ ಆಧಾರವಾಗಿದ್ದಾರೆ. ದೇಶದಲ್ಲಿ ಸುಮಾರು 12.9 ಲಕ್ಷ ಅಂಗನವಾಡಿ ಕಾರ್ಯಕರ್ತರು ಮತ್ತು 11.6 ಲಕ್ಷ ಅಂಗನವಾಡಿ ಸಹಾಯಕಿಯರಿದ್ದಾರೆ. ಇದೀಗ ಸರಕಾರ ನೀಡಿರುವ ಸಹಾಯ ಈ 24.9 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅವರ ಕುಟುಂಬದವರಿಗೆ ಲಭ್ಯವಾಗಲಿದೆ ಎಂದು ಜೇಟ್ಲಿ ಫೇಸ್‌ಬುಕ್‌ನಲ್ಲಿ ಬರೆದಿರುವ ಲೇಖನದಲ್ಲಿ ತಿಳಿಸಿದ್ದಾರೆ.

2014ರಲ್ಲಿ ಪ್ರಧಾನಿಯವರು ಸ್ವಚ್ಛಭಾರತ ಅಭಿಯಾನ ಘೋಷಿಸಿದಾಗ ದೇಶದ ಶೇ.39ರಷ್ಟು ಗ್ರಾಮೀಣ ಪ್ರದೇಶ ನೈರ್ಮಲ್ಯದ ವ್ಯಾಪ್ತಿಯಡಿ ಸೇರಿತ್ತು. ಈಗ, ನಾಲ್ಕು ವರ್ಷಗಳ ಬಳಿಕ ಈ ಪ್ರಮಾಣ ಶೇ.92ಕ್ಕೇರಿದೆ. ಈ ಪ್ರಮಾಣದಲ್ಲಿ ಯಶಸ್ಸು ಸಾಧಿಸಬೇಕಿದ್ದರೆ ಜನತೆಯ ಸಹಕಾರ ಮತ್ತು ಜನರ ವರ್ತನೆಯಲ್ಲಿ ಆಗಿರುವ ಬದಲಾವಣೆ ಕಾರಣವಾಗಿದೆ. 2019ರಲ್ಲಿ ದೇಶ ಬಯಲುಶೌಚ ಮುಕ್ತವಾಗಬೇಕು ಎಂಬ ಸರಕಾರದ ಯೋಜನೆಯನ್ನು ಹಲವರು ಲೇವಡಿ ಮಾಡಿದ್ದಾರೆ. ಆದರೆ ಇದೀಗ ಇದು ಜನತೆಯ ಅಭಿಯಾನವಾಗಿ ಬದಲಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X