Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಡಿಕೆ, ಕಾಳುಮೆಣಸು ಬೆಳೆಗಳಿಗೆ ಕೊಳೆರೋಗ:...

ಅಡಿಕೆ, ಕಾಳುಮೆಣಸು ಬೆಳೆಗಳಿಗೆ ಕೊಳೆರೋಗ: ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಭಾಕಿಸಂ ಕರೆ

ವಾರ್ತಾಭಾರತಿವಾರ್ತಾಭಾರತಿ15 Sept 2018 9:01 PM IST
share

ಉಡುಪಿ, ಸೆ.15: ಈ ಬಾರಿ ಜಿಲ್ಲೆಯಾದ್ಯಂತ ಸುರಿದ ಅತೀ ಮಳೆಯಿಂದ ಅಡಿಕೆ ಹಾಗೂ ಕಾಳುಮೆಣಸಿನ ಬೆಳೆಗಳಿಗೆ ವಿಪರೀತ ಕೊಳೆರೋಗ ತಗುಲಿ ಅನೇಕ ರೈತರ ತೋಟಗಳಲ್ಲಿ ಶೇ.80ರಷ್ಟು ಫಸಲುಗಳು ನಾಶವಾಗಿವೆ. ಜೊತೆಗೆ ಅಲ್ಲಲ್ಲಿ ಕೆಲವು ಅಡಿಕೆ ಮರ ಹಾಗೂ ದೊಡ್ಡ ಪ್ರಮಾಣದಲ್ಲಿ ಕಾಳು ಮೆಣಸಿನ ಬಳ್ಳಿಗಳು ಸತ್ತಿವೆ. ಈ ಬಗ್ಗೆ ಪರಿಹಾರ ನೀಡುವಂತೆ ಭಾಕಿಸಂ ಮಾಡಿಕೊಂಡ ಮನವಿಗೆ ಉಡುಪಿ ಜಿಪಂ ಹಾಗೂ ಜಿಲ್ಲಾಡಳಿತ ಸ್ಪಂದಿಸಿ, ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಮುಂದಾಗಿ ಆದೇಶ ಹೊರಡಿಸಿದೆ.

ಅದರಂತೆ ಗರಿಷ್ಟ ಒಬ್ಬ ರೈತನಿಗೆ 1 ಹೆಕ್ಟೇರ್ ಪ್ರದೇಶಕ್ಕೆ 18,000 ರೂ.ವರೆಗೆ ಪರಿಹಾರ ನೀಡಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಪರಿಹಾರ ಪಡೆಯಲು ರೈತರು ಅರ್ಜಿಯನ್ನು ತಾಲೂಕಿನ ತೋಟಗಾರಿಕಾ ಇಲಾಖೆಯ ಕಚೇರಿ, ಆಯಾ ಗ್ರಾಮದ ಗ್ರಾಮಕರಣಿಕರಿಗೆ ಅಥವಾ ಗ್ರಾಪಂನ ಪಿಡಿಒರಿಗೆ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಯಾವುದೇ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿಲ್ಲ. ಅದರಲ್ಲಿ ರೈತರ ಒಟ್ಟು ಕೃಷಿ ಕ್ಷೇತ್ರ, ಅದರ ಸರ್ವೇ ನಂಬ್ರ, ನಷ್ಟವಾದ ಅಡಿಕೆ ಹಾಗೂ ಕಾಳು ಮೆಣಸಿನ ಪ್ರದೇಶ ಹಾಗೂ ನಷ್ಟ ಪ್ರಮಾಣದ ಬಗ್ಗೆ ಮಾಹಿತಿಯನ್ನು ನೀಡುವುದು ಅತ್ಯಗತ್ಯ. ಈ ಅರ್ಜಿಯೊಂದಿಗೆ ಆಧಾರ್ ಕಾರ್ಡ್‌ನ ಪ್ರತಿ, ಬೆಳೆ ನಷ್ಟವಾಗಿರುವ ಪ್ರದೇಶದ ಆರ್‌ಟಿಸಿ ಪ್ರತಿ ಹಾಗೂ ರೈತರ ಬ್ಯಾಂಕ್ ಪಾಸ್ ಬುಕ್‌ನ ಮೊದಲ ಪುಟದ ಜೆರಾಕ್ಸ್ ಲಗತ್ತಿಸುವುದು ಅವಶ್ಯಕ. ಅರ್ಜಿಯನ್ನು ಸೆ.17ರೊಳಗೆ ಸಲ್ಲಿಸಬೇಕು ಹಾಗೂ ಈ ಬಗ್ಗೆ ರೈತರು ಯಾರಿಗೂ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಆದರೆ ರೈತರ ಬೆಳೆ ನಷ್ಟವಾದಲ್ಲಿ ಮಾತ್ರ ಪ್ರಾಮಾಣಿಕವಾಗಿ ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಸಂಘಟನೆ ಕೋರಿದೆ. 2013ರಲ್ಲಿ ಆದಂತೆ ಅಡಿಕೆ ತೋಟ ಗಳೇ ಇಲ್ಲದವರಿಗೆ ಪರಿಹಾರ ನೀಡದಂತೆ ಅಧಿಕಾರಿಗಳೂ ಜಾಗೃತೆ ವಹಿಸು ವಂತೆಯೂ ಅದು ಸಲಹೆ ನೀಡಿದೆ. ರೈತರ ನಷ್ಟಕ್ಕೆ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಿ ರೈತನಿಗಾದ ನೈಜ ನಷ್ಟದ ಆಧಾರದಲ್ಲಿ ಪರಿಹಾರ ನೀಡುವಂತೆ ಸರಕಾರಕ್ಕೆ ಪತ್ರ ಬರೆದು ಆಗ್ರಹಿಸಲು ಸಂಘ ತೀರ್ಮಾನಿಸಿದೆ ಎಂದು ಭಾಕಿಸಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X