Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಂತ್ರಜ್ಞಾನದ ಕಾಲಘಟ್ಟದಲ್ಲಿ ಸಾಹಿತ್ಯ...

ತಂತ್ರಜ್ಞಾನದ ಕಾಲಘಟ್ಟದಲ್ಲಿ ಸಾಹಿತ್ಯ ಕ್ಷೇತ್ರವು ನಮ್ಮಿಂದ ದೂರವಾಗುತ್ತಿದೆ: ಬಿ.ಎಂ. ರೋಹಿಣಿ

ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2018 9:09 PM IST
share
ತಂತ್ರಜ್ಞಾನದ ಕಾಲಘಟ್ಟದಲ್ಲಿ ಸಾಹಿತ್ಯ ಕ್ಷೇತ್ರವು ನಮ್ಮಿಂದ ದೂರವಾಗುತ್ತಿದೆ: ಬಿ.ಎಂ. ರೋಹಿಣಿ

ಕೊಣಾಜೆ, ಸೆ. 15:  ಇಂದಿನ ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನವು ಬಹಳಷ್ಟು ಮುಂದುವರಿದಿರುವುದರಿಂದ ಸಾಹಿತ್ಯ ಕ್ಷೇತ್ರವು ದೂರವಾಗುತ್ತಿರುವ ಅನುಭವವಾಗುತ್ತದೆ. ಪುಸ್ತಕ ಓದುವವರ ಸಂಖ್ಯೆ ಇಳಿದಿದ್ದು, ಭಾಷಾವಾರು ಶಿಕ್ಷಣ ಕೂಡಾ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಹಿರಿಯ ಲೇಖಕಿ , ಸಂಶೋದಕಿ ಬಿ.ಎಂ. ರೋಹಿಣಿ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಇದರ ಆಶ್ರಯದಲ್ಲಿ ಶನಿವಾರ  ದೇರಳಕಟ್ಟೆಯಲ್ಲಿರುವ ವಿದ್ಯಾರತ್ನ ಶಾಲೆಯಲ್ಲಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇಂದು ಕನ್ನಡ ಶಾಲೆಗಳು ಬಾಗಿಲು ಮುಚ್ಚಿಸುವ ಹಂತಕ್ಕೆ ಖಾಸಗಿ ಶಾಲೆಗಳು ಅದರಲ್ಲೂ ಆಂಗ್ಲ ಮಾಧ್ಯಮ ಶಾಲೆಗಳು ಬೆಳೆದಿವೆ. ಪ್ರಸಕ್ತ 1782 ಸರಕಾರಿ ಶಾಲೆಗಳು ಮುಚ್ಚಲ್ಪಟ್ಟು 3186 ಖಾಸಗಿ ಶಾಲೆಗಳು ಆರಂಭವಾಗಿವೆ ಕರಾವಳಿಯಲ್ಲೇ ಕನ್ನಡದ ಕೊರತೆ ಎದ್ದು ಕಾಣುತ್ತಿದ್ದು ಈ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಶಿವರಾಮ ಶೆಟ್ಟಿ ಮಾತನಾಡಿ, ಕನ್ನಡಿಗರಿಗೆ ಕನ್ನೆದ ಅಭಿರುಚಿಯನ್ನು ಬೆಳೆಸಲು ಇಂತಹ ಸಮ್ಮೇಳನವನ್ನು ಹಮ್ಮಿಕೊಳ್ಳುತ್ತೇವೆ. ಆದರೆ ಇದನ್ನು ಸದುಪಯೋಗ ಮಾಡುವವರ ಸಂಖ್ಯೆ ಕುಂಠಿತವಾಗಿದೆ. ಕನ್ನಡ ಶಬ್ದಗಳು ಈಗಿನ ಮಕ್ಕಳಿಗೆ ಗೊತ್ತಿರುವುದಿಲ್ಲ. ಆಂಗ್ಲ ಮಾಧ್ಯಮ ಶಾಲೆ ಬಂದ ಬಳಿಕ ಕನ್ನಡ ಭಾಷೆಯನ್ನೇ ಮರತುಬಿಡುವಂತಹ ಪರಿಸ್ಥಿತಿ ಬಂದಿದೆ. ಭಾಷೆ ಎಷ್ಟೇ ಇರಲಿ, ಕನ್ನಡ ಭಾಷೆಯ ಉಳಿವು, ಕನ್ನಡ ಸಂಸ್ಕøತಿಯ ಉಳಿವು ಆಗಬೇಕು. ಸಂಸ್ಕøತಿ ಹಲವು ಇರಬಹುದು. ಇಂಗ್ಲಿಷ್ ಭಾಷೆಯ ಬಳಕೆ ತಪ್ಪು ಎನ್ನಲಾಗುವುದಿಲ್ಲ. ಆದರೆ ಕನ್ನಡ ಭಾಷೆಯ ಸಂಸ್ಕøತಿಯನ್ನು ಅಳಿಸಿ ಹೋಗದಂತೆ ಸಂಪೂರ್ಣ ಪ್ರಯತ್ನ ಆಗಬೇಕು ಎಂದರು.

ಪರಿಷತ್‍ನ ಧ್ವಜಾರೋಹಣ ಮಾಡಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಆಶಯ ಭಾಷಣ ಮಾಡಿದರು. ರತ್ನ ಎಜುಕೇಶನ್ ಟ್ರಸ್ಟ್‍ನ  ಕೋಶಾಧಿಕಾರಿ ರತ್ನಾವತಿ ಕೆ. ಶೆಟ್ಟಿ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರು.ರತ್ನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಪುಸ್ತಕ ಬಿಡುಗಡೆ ಮಾಡಿದರು. ಸ್ಮರಣ ಸಂಚಿಕೆ ಬಿಡುಗಡೆಯನ್ನು ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ನೆರವೇರಿಸಿದರು.ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು,  ಜಿ..ಪಂ. ಸದಸ್ಯೆ ರಶೀದಾಬಾನು, ರತ್ನ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಸೌಮ್ಯ ಆರ್ ಭಟ್, ಉಪಸ್ಥಿತರಿದ್ದರು. 

ಕ.ಸಾ.ಪ. ಮಂಗಳೂರು ದೇವಕಿ ಅಚ್ಯುತ್ತ ಧನ್ಯವಾದ ಸಮರ್ಪಿಸಿದರು. ಚೇತನ್ ಕದ್ರಿ ಅಧ್ಯಕ್ಷರ ಪರಿಚಯ ಮಾಡಿದರು. ಪದ್ಮನಾಭ ಭಟ್ ಎಕ್ಕಾರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಕಾರ್ಯಕ್ರಮ ಆರಂಭ ಆಗುವ ಮುನ್ನಾ ಸಮ್ಮೇಳನಾಧ್ಯಕ್ಷರನ್ನು ದೇರಳಕಟ್ಟೆ ನೇತಾಜಿ ಸುಭಾಶ್ಚಂದ್ರ ಬೋಸ್ ಶಾಲಾ ವಠಾರದಿಂದ ಮೆರವಣಿಗೆ ಮೂಲಕ ಕರ ತರಲಾಯಿತು. ಈ ಮೆರವಣಿಗೆ ಕಾರ್ಯಕ್ರಮವನ್ನು ಬೆಳ್ಮ ಗ್ರಾ.ಪಂ. ಅಧ್ಯಕ್ಷೆ ವಿಜಯ ಕೃಷಪ್ಪ ಪುಜಾರಿ ಉದ್ಘಾಟಿಸಿದರು.

ನೇತಾಜಿ ದೇರಳಕಟ್ಟೆ ನೇತಾಜಿ ಸುಭಾಶ್ಚಂದ್ರ ಬೋಸ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಎಚ್. ಇಸ್ಮಾಯಿಲ್ ಪುಷ್ಪಾರ್ಚನೆ ಮಾಡಿದರು. ಶಿಕ್ಷಕ ನವೀನ್ ರಾವ್ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಾರ್ಯಕ್ರಮದ ಬಳಿಕ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X