Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಅಧಿಕಾರಕ್ಕಾಗಿ ಜಟಾಪಟಿ

ಬಿಬಿಎಂಪಿ ಅಧಿಕಾರಕ್ಕಾಗಿ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ15 Sept 2018 10:15 PM IST
share
ಬಿಬಿಎಂಪಿ ಅಧಿಕಾರಕ್ಕಾಗಿ ಜಟಾಪಟಿ

ಬೆಂಗಳೂರು, ಸೆ.15: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕಾಗಿ ಸೆ.28 ರಂದು ಚುನಾವಣೆ ನಡೆಯಲಿದ್ದು, ಪಾಲಿಕೆಯ ಅಧಿಕಾರಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ಆರಂಭಗೊಂಡಿದ್ದು, ಪಕ್ಷೇತರರು ನಿರ್ಣಾಯಕವಾಗಿದ್ದಾರೆ.

ಪಾಲಿಕೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆದಿರುವ ಬಿಜೆಪಿ ಪಕ್ಷೇತರರನ್ನು ತನ್ನತ್ತ ಸೆಳೆದು ಚುನಾವಣೆ ಸಂದರ್ಭದಲ್ಲಿ ಅವರನ್ನು ವಿದೇಶಕ್ಕೆ ಪ್ರವಾಸ ಕಳುಹಿಸಿ ಗೈರು ಹಾಜರಾಗುವಂತೆ ನೋಡಿಕೊಂಡು ಪಾಲಿಕೆಯ ಅಧಿಕಾರ ಹಿಡಿಯುವ ಸತತ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ನಗರದ ಬಿಜೆಪಿ ಪ್ರಭಾವಿ ಮುಖಂಡರೊಬ್ಬರ ನಿವಾಸದಲ್ಲಿ ಪಕ್ಷೇತರರೊಂದಿಗೆ ಈ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಅಧಿಕಾರ ಹಂಚಿಕೆ ಬಗ್ಗೆ ಸಹಮತ ವ್ಯಕ್ತವಾಗದೇ, ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ.

ಪಕ್ಷೇತರರೊಂದಿಗೆ ಬಿಜೆಪಿಯವರು ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಭಾವಿ ನಾಯಕ ಶಾಸಕ ರಾಮಲಿಂಗಾರೆಡ್ಡಿ ಶುಕ್ರವಾರ ರಾತ್ರಿಯಿಂದಲೇ ಅಖಾಡಕ್ಕಿಳಿದಿದ್ದಾರೆ. ಶನಿವಾರ ಬೆಳಗ್ಗೆಯಿಂದಲೇ ಖಾಸಗಿ ಹೊಟೇಲ್‌ನಲ್ಲಿ ರಾಮಲಿಂಗಾರೆಡ್ಡಿ ಪಕ್ಷೇತರ ಸದಸ್ಯರೊಂದಿಗೆ ಸುದೀರ್ಘವಾದ ಮಾತುಕತೆ ನಡೆಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಪಕ್ಷೇತರ ಸದಸ್ಯರು ರಾಮಲಿಂಗಾರೆಡ್ಡಿ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು, ಅದಕ್ಕೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸತತ ಮೂರು ವರ್ಷದಿಂದ ಅಧಿಕಾರದಿಂದ ದೂರವಿರುವ ಬಿಜೆಪಿ ಈ ಬಾರಿ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದ್ದರೆ, ಇತ್ತ ಮೈತ್ರಿ ಸರಕಾರ ಅಧಿಕಾರ ಉಳಿಸಿಕೊಳ್ಳಲು ಪಕ್ಷೇತರರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದೆ. ಮೇಯರ್, ಉಪಮೇಯರ್ ಚುನಾವಣೆಗೆ ಪಕ್ಷೇತರರೇ ನಿರ್ಣಾಯಕವಾಗಿದ್ದು, ಎರಡು ರಾಷ್ಟ್ರೀಯ ಪಕ್ಷದ ನಾಯಕರು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ.

ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ರಾಮಲಿಂಗಾರೆಡ್ಡಿ, ಮೇಯರ್ ಚುನಾವಣೆ ಸಂದರ್ಭದಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಮತ್ತೊಮ್ಮೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತ ಬಿಬಿಎಂಪಿಯಲ್ಲಿ ಪ್ರತಿಷ್ಠಾಪನೆಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದವರು ಮೇಯರ್ ಆಗಲಿದ್ದು, ಜೆಡಿಎಸ್ ಪಕ್ಷದವರು ಉಪಮೇಯರ್ ಆಗಲಿದ್ದಾರೆ. ಪಕ್ಷೇತರರಿಗೆ ಹೆಚ್ಚಿನ ಅಧಿಕಾರ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್‌ನ 2ನೇ ಸಭೆ: ಶಾಸಕ ಆರ್. ಅಶೋಕ್ ಅವರು ಪಕ್ಷೇತರ ಸದಸ್ಯ ರಮೇಶ್, ಗಾಯತ್ರಿ ಸೇರಿದಂತೆ ಐವರ ಜೊತೆ ಗೌಪ್ಯ ಸಭೆ ನಡೆಸಿ ಮೈತ್ರಿ ಸರಕಾರದ ಜೊತೆಗಿರುವವರನ್ನು ತಮ್ಮ ಕಡೆ ಸೆಳೆಯಲು ಯತ್ನಿಸಿದ ಬೆನ್ನಲ್ಲೆ ಶಾಸಕ ರಾಮಲಿಂಗಾರೆಡ್ಡಿ ಖಾಸಗಿ ಹೊಟೇಲ್‌ನಲ್ಲಿ ಏಳುಮಲೈ, ಗಾಯತ್ರಿ, ರಮೇಶ್, ಆನಂದ್, ಚಂದ್ರಪ್ಪ ರೆಡ್ಡಿ, ಲಕ್ಷ್ಮೀ ನಾರಾಯಣ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.

ಪಕ್ಷೇತರರೊಂದಿಗೆ ಶಾಸಕ ಆರ್.ಅಶೋಕ್ ಸಭೆ ನಡೆಸಿಲ್ಲ. ಸೆ.28 ರಂದು ಚುನಾವಣೆ ನಡೆಯಲಿದ್ದು, ಮುಂದಿನ ವಾರ ಪಾಲಿಕೆಯ ಬಿಜೆಪಿ ಸದಸ್ಯರು ಸಭೆ ಸೇರಲಿದ್ದೇವೆ. ಪಕ್ಷೇತರರು ಬಿಜೆಪಿಗೆ ಹೋಗುತ್ತಾರೆ ಎಂಬ ಭಯಕ್ಕೆ ಕಾಂಗ್ರೆಸ್ ನಾಯಕರು ಅವರನ್ನು ಹೊಟೇಲ್‌ನಲ್ಲಿಟ್ಟಿದ್ದಾರೆ.

-ಪದ್ಮನಾಭ ರೆಡ್ಡಿ, ಬಿಬಿಎಂಪಿ ವಿಪಕ್ಷ ನಾಯಕ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಪಕ್ಷೇತರರು ಬೆಂಬಲ ನೀಡಿದ್ದಾರೆ. ಒಂದಿಬ್ಬರು ಪಕ್ಷೇತರ ಸದಸ್ಯರು ಬಿಜೆಪಿಗೆ ಬೆಂಬಲ ನೀಡಬಹುದು. ಆದರೂ, ನಾವೇ ಬಹುಮತದಿಂದ ಪಾಲಿಕೆಯಲ್ಲಿ ಅಧಿಕಾರ ಹಿಡಿಯುತ್ತೇವೆ. ಮೇಯರ್ ಹಾಗೂ ಉಪ ಮೇಯರ್ ಯಾರು ಎಂದು ಇನ್ನೂ ತೀರ್ಮಾನವಾಗಿಲ್ಲ.

-ನೇತ್ರಾ ನಾರಾಯಣ, ಪಾಲಿಕೆ ಜೆಡಿಎಸ್ ನಾಯಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X