Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಜಯ ಮಲ್ಯಗೆ ಸಂಬಂಧಿಸಿದ ನೋಟಿಸ್‌ನ್ನು...

ವಿಜಯ ಮಲ್ಯಗೆ ಸಂಬಂಧಿಸಿದ ನೋಟಿಸ್‌ನ್ನು ಬದಲಿಸುವ ನಿರ್ಧಾರವನ್ನು ‘ಸೂಕ್ತ ಮಟ್ಟ’ದಲ್ಲಿ ಕೈಗೊಳ್ಳಲಾಗಿತ್ತು: ಸಿಬಿಐ

ವಾರ್ತಾಭಾರತಿವಾರ್ತಾಭಾರತಿ15 Sept 2018 10:44 PM IST
share
ವಿಜಯ ಮಲ್ಯಗೆ ಸಂಬಂಧಿಸಿದ ನೋಟಿಸ್‌ನ್ನು ಬದಲಿಸುವ ನಿರ್ಧಾರವನ್ನು ‘ಸೂಕ್ತ ಮಟ್ಟ’ದಲ್ಲಿ ಕೈಗೊಳ್ಳಲಾಗಿತ್ತು: ಸಿಬಿಐ

ಹೊಸದಿಲ್ಲಿ,ಸೆ.15: ದೇಶಭ್ರಷ್ಟ ಮದ್ಯದ ದೊರೆ ವಿಜಯ ಮಲ್ಯ ಪರಾರಿಯಾಗಲು ಅವಕಾಶ ನೀಡಿದ್ದರೆಂಬ ಆರೋಪಗಳ ವಿರುದ್ಧ ತನ್ನ ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರನ್ನು ಸಿಬಿಐ ಸಮರ್ಥಿಸಿಕೊಂಡಿದೆ. ಮಲ್ಯ ವಿರುದ್ಧದ ಲುಕ್ ಔಟ್ ನೋಟಿಸ್‌ನ್ನು ಓರ್ವ ವ್ಯಕ್ತಿ ಬದಲಿಸಿದ್ದಲ್ಲ,ಆ ನಿರ್ಧಾರವನ್ನು ಸೂಕ್ತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿತ್ತು ಎಂದು ಸಿಬಿಐ ವಕ್ತಾರ ಅಭಿಷೇಕ ದಯಾಳ್ ಅವರು ಶನಿವಾರ ಇಲ್ಲಿ ತಿಳಿಸಿದರು.

ಶರ್ಮಾ ವಿರುದ್ಧದ ಆರೋಪಗಳು ಆಧಾರರಹಿತ ಎಂದು ಬಣ್ಣಿಸಿದ ಅವರು,ಮಲ್ಯ ಅವರನ್ನು ಬಂಧಿಸಲು ಅಥವಾ ವಶಕ್ಕೆ ತೆಗೆದುಕೊಳ್ಳಲು ಸಾಕಷ್ಟು ಕಾರಣಗಳಿರಲಿಲ್ಲವಾದ್ದರಿಂದ ಅವರ ವಿರುದ್ಧದ ನೋಟಿಸ್‌ನಲ್ಲಿ ಬದಲಾವಣೆಗಳನ್ನು ಮಾಡಲಾಗಿತ್ತು ಎಂದು ನಾವು ಹಲವಾರು ಬಾರಿ ಉಲ್ಲೇಖಿಸಿದ್ದೇವೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶರ್ಮಾ ವಿರುದ್ಧ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ಸಿಬಿಐನ ಈ ಸಮಜಾಯಿಷಿ ಹೊರಗೆ ಬಿದ್ದಿದೆ.

ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಲ್ಯ ದೇಶ ತೊರೆಯಲು ನೆರವಾಗುವ ಮೂಲಕ ಅವರೊಂದಿಗೆ ಕೈ ಜೋಡಿಸಿದ್ದರು ಎಂದು ಇತ್ತೀಚಿಗೆ ಆರೋಪಿಸಿದ್ದ ರಾಹುಲ್,ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಮಲ್ಯ ದೇಶವನ್ನು ತೊರೆಯುವ ಮುನ್ನ ಸಂಸತ್‌ನಲ್ಲಿ ಜೇಟ್ಲಿ ಜೊತೆಗೆ 15 ನಿಮಿಷಗಳ ಕಾಲ ಮಾತನಾಡಿದ್ದರು ಎಂದು ಕಾಂಗ್ರೆಸ್ ನಾಯಕ ಪಿ.ಎಲ್.ಪುನಿಯಾ ಅವರೂ ಪ್ರತಿಪಾದಿಸಿದ್ದರು.

ಬ್ರಿಟನ್ನಿನ ನ್ಯಾಯಾಲಯದ ಹೊರಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಮಲ್ಯ,ತನಗೆ ಜಿನಿವಾದಲ್ಲಿ ನಿಗದಿತ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಭಾರತವನ್ನು ತೊರೆಯುವ ಮುನ್ನ ತಾನು ಜೇಟ್ಲಿಯವರನ್ನು ಭೇಟಿಯಾಗಿದ್ದೆ ಮತ್ತು ಬ್ಯಾಂಕುಗಳ ಸಾಲ ಇತ್ಯರ್ಥಗೊಳಿಸಲು ಸಿದ್ಧ ಎಂದು ಪುನರುಚ್ಚರಿಸಿದ್ದೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X