Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನಕ್ಕೆ ಸುಲಭ ಗೆಲುವು

ಪಾಕಿಸ್ತಾನಕ್ಕೆ ಸುಲಭ ಗೆಲುವು

ಏಶ್ಯಕಪ್: ಹಾಂಕಾಂಗ್‌ಗೆ ಹೀನಾಯ ಸೋಲು

ವಾರ್ತಾಭಾರತಿವಾರ್ತಾಭಾರತಿ16 Sept 2018 11:50 PM IST
share
ಪಾಕಿಸ್ತಾನಕ್ಕೆ ಸುಲಭ ಗೆಲುವು

ದುಬೈ, ಸೆ.16: ಏಶ್ಯಕಪ್‌ನ ‘ಎ’ ಗುಂಪಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ ಹಾಂಕಾಂಗ್ ವಿರುದ್ಧ 8 ವಿಕೆಟ್‌ಗಳ ಅಂತರದಿಂದ ಸುಲಭ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೂಟದಲ್ಲಿ ತನ್ನ ಅಭಿಯಾನ ಆರಂಭಿಸಿದೆ.

 ಇಲ್ಲಿನ ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 117 ರನ್ ಗುರಿ ಪಡೆದ ಪಾಕಿಸ್ತಾನ 23.4 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 120 ರನ್ ಗಳಿಸಿತು. ಆರಂಭಿಕ ಆಟಗಾರ ಇಮಾಮ್-ವುಲ್-ಹಕ್ ಔಟಾಗದೆ 50 ರನ್ ಗಳಿಸಿದರು. ಬಾಬರ್ ಆಝಂ(33) ಹಾಗೂ ಫಖರ್ ಝಮಾನ್(24) ಗೆಲುವಿಗೆ ಕಾಣಿಕೆ ನೀಡಿದ್ದಾರೆ.

ಇನಿಂಗ್ಸ್ ಆರಂಭಿಸಿದ ಝಮಾನ್ ಹಾಗೂ ಹಕ್ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 41 ರನ್ ಸೇರಿಸಿದರು. ಈ ಜೋಡಿಯನ್ನು ಎಹ್ಸಾನ್ ಖಾನ್ ಬೇರ್ಪಡಿಸಿದರು. ಹಕ್‌ರೊಂದಿಗೆ ಕೈಜೋಡಿಸಿದ ಆಝಂ 2ನೇ ವಿಕೆಟ್‌ಗೆ 52 ರನ್ ಸೇರಿಸಿ ಪಾಕ್‌ಗೆ ಸುಲಭ ಗೆಲುವು ಖಚಿತಪಡಿಸಿದರು. 36 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ನೆರವಿನಿಂದ 33 ರನ್ ಗಳಿಸಿದ ಆಝಂಗೆ ಎಹ್ಸಾನ್ ಖಾನ್ ಪೆವಿಲಿಯನ್ ಹಾದಿ ತೋರಿಸಿದರು. 3ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 27 ರನ್ ಸೇರಿಸಿದ ಹಕ್ ಹಾಗೂ ಶುಐಬ್ ಮಲಿಕ್(9)ತಂಡಕ್ಕೆ ಇನ್ನೂ 158 ಎಸೆತಗಳು ಬಾಕಿ ಇರುವಂತೆಯೇ ಗೆಲುವು ತಂದರು.

23.3ನೇ ಓವರ್‌ನಲ್ಲಿ ಏಝಾಝ್ ಖಾನ್ ಎಸೆತದಲ್ಲಿ ಬೌಂಡರಿ ಬಾರಿಸಿದ ಹಕ್ 69 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದರು. ಇದರಲ್ಲಿ 3 ಬೌಂಡರಿ, 1 ಸಿಕ್ಸರ್ ಇದೆ.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ಹಾಂಕಾಂಗ್ ತಂಡ ಉಸ್ಮಾನ್ ಖಾನ್(19ಕ್ಕೆ 3), ಹಸನ್ ಅಲಿ(19ಕ್ಕೆ 2) ಹಾಗೂ ಶಾದಾಬ್ ಖಾನ್(31ಕ್ಕೆ2) ದಾಳಿಗೆ ಕಂಗಾಲಾಗಿ 37.1 ಓವರ್‌ಗಳಲ್ಲಿ 116 ರನ್ ಗಳಿಸಿ ಆಲೌಟಾಯಿತು.

 ಹಾಂಕಾಂಗ್ ಪರ ಅಝಾಝ್ ಖಾನ್(27), ದೇವಂಗ್ ಶಾ(26)ಹಾಗೂ ನಾಯಕ ಅಂಶುಮಾನ್ ರಾಥ್(19) ಎರಡಂಕೆಯ ಸ್ಕೋರ್ ಗಳಿಸಿದರು. ಹಾಂಕಾಂಗ್ 44 ರನ್‌ಗೆ 5 ವಿಕೆಟ್ ಕಳೆದುಕೊಂಡಿತು. ಆಗ ಜೊತೆಯಾದ ಖಾನ್ ಹಾಗೂ ಶಾ 6ನೇ ವಿಕೆಟ್‌ಗೆ 53 ರನ್ ಜೊತೆಯಾಟ ನಡೆಸಿದರು. ಆದರೆ, ಈ ಇಬ್ಬರು ಬೇರ್ಪಟ್ಟ ಬಳಿಕ ಹಾಂಕಾಂಗ್ ಕುಸಿತದ ಹಾದಿ ಹಿಡಿಯಿತು. ಉಸ್ಮಾನ್ ಖಾನ್ ಹಾಂಕಾಂಗ್‌ನ ಕೆಳ ಕ್ರಮಾಂಕದ ದಾಂಡಿಗರಿಗೆ ಪೆವಿಲಿಯನ್ ಹಾದಿ ತೋರಿಸಿದರು. 2004ರ ಆವೃತ್ತಿಯ ಏಶ್ಯಕಪ್‌ನಲ್ಲಿ ಭಾಗವಹಿಸಿದ್ದ ಹಾಂಕಾಂಗ್ ಇದೀಗ ಎರಡನೇ ಬಾರಿ ಟೂರ್ನಿಯಲ್ಲಿ ಕಾಣಿಸಿ ಕೊಂಡಿದೆ. 2012ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಏಶ್ಯಕಪ್‌ನಲ್ಲಿ ಕೊನೆಯ ಬಾರಿ ಪ್ರಶಸ್ತಿ ಎತ್ತಿ ಹಿಡಿದಿರುವ ಎರಡು ಬಾರಿಯ ಚಾಂಪಿಯನ್ ಪಾಕ್‌ಗೆ ಈ ಬಾರಿ ಮತ್ತೊಂದು ಪ್ರಶಸ್ತಿ ಎತ್ತುವ ಅವಕಾಶವಿದೆ. ಏಕೆಂದರೆ ಪಾಕಿಸ್ತಾನ 2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಉಗ್ರಗಾಮಿಗಳ ದಾಳಿ ನಡೆದ ಬಳಿಕ ತನ್ನ ತವರಿನ ಪಂದ್ಯಗಳನ್ನು ದುಬೈ, ಅಬುಧಾಬಿ ಹಾಗೂ ಶಾರ್ಜಾಗಳಲ್ಲಿ ಆಡುತ್ತಿದೆ. ಹಾಂಕಾಂಗ್ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ ಹಾಗೂ ಭಾರತದೊಂದಿಗೆ ಸ್ಥಾನ ಪಡೆದಿದೆ. ಅರ್ಹತಾ ಟೂರ್ನಿಯ ಫೈನಲ್‌ನಲ್ಲಿ ಯುಎಇ ತಂಡವನ್ನು ಮಣಿಸಿದ್ದ ಹಾಂಕಾಂಗ್ ಏಶ್ಯಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X