Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ....

ಓ ಮೆಣಸೇ....

ಪಿ.ಎ. ರೈಪಿ.ಎ. ರೈ17 Sept 2018 12:02 AM IST
share
ಓ ಮೆಣಸೇ....

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲಾಗಿದೆ - ಶೋಭಾ ಕರಂದ್ಲಾಜೆ, ಸಂಸದೆ

► ಯಡಿಯೂರಪ್ಪರನ್ನು ಬಿಜೆಪಿ ಮೂಲೆಗುಂಪಾಗಿಸಿದ ಬಗ್ಗೆ ಯಾಕೆ ಖೇದವಿಲ್ಲ?
---------------------
ರಾಮಮಂದಿರ ವಿಷಯದಲ್ಲಿ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ - ಪ್ರವೀಣ್ ತೊಗಾಡಿಯಾ, ವಿಎಚ್‌ಪಿ ಅಧ್ಯಕ್ಷ

► ನಿಮ್ಮ ಈ ಮುಖ ಎಷ್ಟನೆಯದು?
---------------------
ಭಾರತದ ಪ್ರಧಾನಿ ಮೋದಿಯವರನ್ನು ನಾನು ಬಹಳ ಇಷ್ಟಪಡುತ್ತೇನೆ - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ

► ಸುಪ್ರೀಂಕೋರ್ಟ್ ಇತ್ತೀಚೆಗೆ ನಿಮಗಾಗಿಯೇ ಕಾನೂನನ್ನು ಸಡಿಲಿಸಿದೆ.

---------------------
ಸಮಿಶ್ರ ಸರಕಾರ ಬೀಳಲಿದೆ ಎನ್ನುವುದು ತೋಳಬಂತು ತೋಳ ಕಥೆ ಇದ್ದಂತೆ - ಕುಮಾರಸ್ವಾಮಿ, ಮುಖ್ಯಮಂತ್ರಿ

► ಹಾಗಾದರೆ ಈಗ ನಿಜಕ್ಕೂ ತೋಳ ಬಂದಿರಬೇಕು.

---------------------
ಭಾರತ-ಪಾಕಿಸ್ತಾನದ ಮಧ್ಯೆಯೂ ಮಾತುಕತೆ ನಡೆಯುತ್ತದೆ ಎಂದಾದರೆ ಬಿಜೆಪಿ-ಕಾಂಗ್ರೆಸ್ ನಾಯಕರು ಮಾತುಕತೆ ನಡೆಸುವುದರಲ್ಲೇನು ತಪ್ಪು -ಸಿ.ಟಿ.ರವಿ, ಶಾಸಕ

► ಬಿಜೆಪಿ ಪಾಕಿಸ್ತಾನವೆಂದು ಒಪ್ಪಿಕೊಂಡಂತಾಯಿತು.

---------------------
ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಸೇರಿದಾಗ ಮಾತ್ರ ಸಮನ್ವಯ ಸಮಿತಿ ಪೂರ್ಣವಾಗಲಿದೆ - ಎಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

► ಅಂದರೆ ಸರಕಾರದೊಳಗೆ ಇನ್ನೂ ಸಮನ್ವಯವಿಲ್ಲ ಎಂದಾಯಿತು.

---------------------
ಮೇಲ್ವರ್ಗದ ಜನ ಬಿಜೆಪಿಯ ಬೆನ್ನೆಲುಬು ಅವರಿಗೆ ಶೇ.15ರಷ್ಟು ಮೀಸಲಾತಿ ಸಿಗಬೇಕು - ರಾಮ್‌ವಿಲಾಸ್ ಪಾಸ್ವಾನ್, ಕೇಂದ್ರ ಸಚಿವ

► ದಲಿತರ ಬೆನ್ನೆಲುಬನ್ನು ಮುರಿದು ಮೇಲ್ವರ್ಗದವರಿಗೆ ಕೊಟ್ಟು ಬಿಡಿ.

---------------------
ತಮ್ಮದಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡು ಬಿಲ್ಲವ ಯುವಕರು ಜೈಲು ಸೇರುತ್ತಿರುವುದು ಬೇಸರ ಉಂಟು ಮಾಡಿದೆ - ಕೋಟಾ ಶ್ರೀನಿವಾಸ ಪೂಜಾರಿ, ವಿ.ಪ.ವಿ.ಪ.ನಾಯಕ

► ಆರೆಸ್ಸೆಸ್‌ನ ಸಮಸ್ಯೆಗಳನ್ನು ಬಿಲ್ಲವರ ಸಮಸ್ಯೆ ಎಂದು ಅವರಿಗೆ ತಪ್ಪು ಮಾಹಿತಿ ನೀಡಲಾಗಿದೆ.

---------------------
ಸನ್ನಡತೆಯ ಆಧಾರದಲ್ಲಿ ಬಿಡುಗಡೆಯಾಗುತ್ತಿರುವ ಕೈದಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಉತ್ತಮ ವ್ಯಕ್ತಿಗಳಾಗಿ ಜೀವನ ನಡೆಸಬೇಕು - ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ.

► ಮೊದಲು ಅದಕ್ಕೆ ರಾಜಕಾರಣಿಗಳು ಅವಕಾಶ ನೀಡಬೇಕು.

---------------------
ಭಾಷಾ ಬೆಳವಣಿಗೆ ಹಿನ್ನೆಲೆಯಲ್ಲಿ ಕಸಾಪ ನೇಪಾಳದೊಂದಿಗೆ ನೆಂಟಸ್ತಿಕೆಗೆ ಮುಂದಾಗಿದೆ - ಡಾ.ಮನು ಬಳಿಗಾರ್, ಕಸಾಪ ಅಧ್ಯಕ್ಷ.
► ಮೊದಲು ಕನ್ನಡಿಗರ ಜೊತೆಗಿರುವ ನೆಂಟಸ್ತಿಕೆ ಗಟ್ಟಿಯಾಗಲಿ.

---------------------

ಥಳಿಸಿ ಹತ್ಯೆ ಮಾಡುವವರನ್ನು ರಾಷ್ಟ್ರವಾದಿಗಳೆಂದು ಕರೆಯಲಾಗದು - ವೆಂಕಯ್ಯನಾಯ್ಡು, ಉಪ ರಾಷ್ಟ್ರಪತಿ.

► ಮುಖ್ಯಮಂತ್ರಿ, ಪ್ರಧಾನಮಂತ್ರಿ ಅಭ್ಯರ್ಥಿಗಳೆಂದು ಕರೆದರಾದೀತೇ?
---------------------
ಬಣ್ಣದ ವೇಷ ಮುಗಿಯಿತು ಎಂಬ ಆತಂಕ ಅನಗತ್ಯ - ಕುಂಬಳೆ ಸುಂದರ ರಾವ್, ಮಾಜಿ ಶಾಸಕ.

► ಆತಂಕ ಆ ವೇಷಕ್ಕೆ ಬಲಿಯಾದ ಸುರತ್ಕಲ್‌ನ ಅಮಾಯಕ ಜನರದು.

---------------------

ಲೋಕಸಭೆಗೆ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ - ಜನಾರ್ದನ ಪೂಜಾರಿ, ಕಾಂಗ್ರೆಸ್ ಮುಖಂಡ.

► ಆದಷ್ಟು ಬೇಗ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್‌ನೊಳಗೆ ಹಲವರು ಕಾಯುತ್ತಿದ್ದಾರೆ.

---------------------
ಕಬ್ಬಿನಿಂದ ಡಯಾಬಿಟಿಸ್ ಬರುತ್ತೆ - ಯೋಗಿ ಆದಿತ್ಯನಾಥ್, ಉ.ಪ. ಮುಖ್ಯಮಂತ್ರಿ.

► ಕಬ್ಬಿನಿಂದ ಕಬ್ಬಿಣ ತಯಾರಿಸಲಾಗುತ್ತದೆ ಎಂದು ಹೇಳಲಿಲ್ಲವಲ್ಲ, ಪುಣ್ಯ.

---------------------
ಬಿಜೆಪಿ ಎಣ್ಣೆ ಬಂದಾಗ ಕಣ್ಣುಮುಚ್ಚಿ ಕೂರುವುದಿಲ್ಲ - ಸಿ.ಟಿ.ರವಿ, ಶಾಸಕ

► ಅಂದರೆ ಕಣ್ಣು ತೆರೆದೇ ಎಣ್ಣೆ ಹಾಕುವವರು ಎಂದಾಯಿತು.

---------------------

ಬಿಜೆಪಿಯ ಶಾಸಕರು ಹುಲಿಗಳಿದ್ದಂತೆ - ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ.

► ಮೃಗಾಲಯಕ್ಕೆ ಸೇರಿಸುವ ಅಗತ್ಯವಿದೆ.

---------------------

ನನ್ನ ಹಣೆಬರಹವನ್ನು ಯಾರೋ ಬರೆಯಲು ಸಾಧ್ಯವಿಲ್ಲ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡ.

► ಅದು ಕಾಂಗ್ರೆಸ್‌ನ ಹಣೆಬರಹ.

---------------------
ಮೋದಿ ಸರಕಾರದ ಪ್ರತಿಯೊಂದು ಹೆಜ್ಜೆಯೂ ದೇಶವನ್ನು ಅಭಿವೃದ್ಧಿಯ ಕಡೆಗೆ ಸಾಗುವಂತೆ ಮಾಡುತ್ತಿದೆ - ಅಮಿತ್ ಶಾ, ಬಿಜೆಪಿ ಅಧ್ಯಕ್ಷ.

► ಅದಕ್ಕೆ ಇತ್ತೀಚೆಗೆ ಹೆಜ್ಜೆಯನ್ನೇ ಇಡದೆ, ವಿಮಾನದಲ್ಲಿ ಓಡಾಡುವುದು.

---------------------

ರಾಜ್ಯ ರಾಜಕಾರಣದಲ್ಲಿ ಬೆಂಕಿಯಿಲ್ಲದೆಯೂ ಹೊಗೆಯಾಡುತ್ತದೆ - ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ.

► ಬೆಂಕಿ ಮತ್ತು ಹೊಗೆಯಿಲ್ಲದೆ ರಾಜಕೀಯ ನಡೆಸುವುದಾದರೂ ಹೇಗೆ?

---------------------

ದೈವ ಬಲ ಇರುವವರೆಗೆ ರಾಜ್ಯದ ಸಮಿಶ್ರ ಸರಕಾರ ಬೀಳುವುದಿಲ್ಲ - ದೇವೇಗೌಡ, ಮಾಜಿ ಪ್ರಧಾನಿ.

► ದೈವ ಬಲಗಳಿಗಿಂತ ದೆವ್ವ ಬಲಗಳೇ ಹೆಚ್ಚು ಕೆಲಸ ಮಾಡುತ್ತಿವೆ.

---------------------
‘ವಿಶ್ವವೇ ಒಂದು ಕುಟುಂಬ’ ಭಾರತದ ವಿಶಿಷ್ಟ ಅಸ್ಮಿತೆ - ನರೇಂದ್ರ ಮೋದಿ, ಪ್ರಧಾನಿ

 ► ಆ ಕುಟುಂಬವನ್ನು ಒಡೆಯುವುದು ತಮ್ಮ ಅಸ್ಮಿತೆಯಿರಬಹುದೇ?
---------------------
 ಕೇಂದ್ರ ಸರಕಾರದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ -ವೀರಪ್ಪ ಮೊಯ್ಲಿ, ಸಂಸದ

 ► ದೇಶದೊಳಗೆ ಇದೆ ಅಂತೀರಾ?
 

share
ಪಿ.ಎ. ರೈ
ಪಿ.ಎ. ರೈ
Next Story
X