Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯರ ರಕ್ಷಣೆಯಲ್ಲಿಯೇ ಸಮ್ಮಿಶ್ರ...

ಸಿದ್ದರಾಮಯ್ಯರ ರಕ್ಷಣೆಯಲ್ಲಿಯೇ ಸಮ್ಮಿಶ್ರ ಸರಕಾರ ಐದು ವರ್ಷ ಪೂರೈಸಲಿದೆ: ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Sept 2018 7:18 PM IST
share
ಸಿದ್ದರಾಮಯ್ಯರ ರಕ್ಷಣೆಯಲ್ಲಿಯೇ ಸಮ್ಮಿಶ್ರ ಸರಕಾರ ಐದು ವರ್ಷ ಪೂರೈಸಲಿದೆ: ಸಿಎಂ ಕುಮಾರಸ್ವಾಮಿ

ಕಲಬುರಗಿ, ಸೆ.17: ತಮ್ಮ ಬಳಿ 104 ಶಾಸಕರಿದ್ದಾರೆ ಎಂದು ಹೇಳುವ ಗೋಮುಖ ವ್ಯಾಘ್ರ ಇದ್ದಾರಲ್ಲ ಅವರೇ ನಮ್ಮ ಸಮ್ಮಿಶ್ರ ಸರಕಾರದ ಪಾಲಿಗೆ ವಿಲನ್(ಖಳನಾಯಕ) ಎಂದು ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ನಗರದಲ್ಲಿ ಮಾತನಾಡಿದ ಅವರು, ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕಿಂಗ್‌ಪಿನ್‌ಗಳಿಗೆ ಸಂಬಂಧಿಸಿದಂತೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಆದರೂ, ಕಳ್ಳನ ಮನಸ್ಸು ಹುಳ್ಳು ಹುಳ್ಳುಗೆ ಎನ್ನುವಂತೆ ಬಿಜೆಪಿಯವರ ಮನಸ್ಥಿತಿಯಾಗಿದೆ ಎಂದರು.

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ, ನೀಡುತ್ತಿದ್ದಾರೆ ಎಂದು ಸುಮ್ಮನೇ ಇಲ್ಲ ಸಲ್ಲದ ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಸಮ್ಮಿಶ್ರ ಸರಕಾರಕ್ಕೆ ಕಾಂಗ್ರೆಸ್ ಶಾಸಕರು ಯಾರೂ ಖಳನಾಯಕರಾಗಿಲ್ಲ. ನಮ್ಮ ಸರಕಾರಕ್ಕೆ ಖಳನಾಯಕರು ಯಾರೂ ಎನ್ನುವುದನ್ನು ನೀವೇ ವಿಚಾರ ಮಾಡಿ ನೋಡಿ ಎಂದು ಅವರು ಮರು ಪ್ರಶ್ನೆ ಹಾಕಿದರು.

ರಾಜ್ಯ ಸಮ್ಮಿಶ್ರ ಸರಕಾರವು ಸುಭದ್ರವಾಗಿದ್ದು, ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಕ್ಷಣೆಯೇ ದೊಡ್ಡಮಟ್ಟದಲ್ಲಿ ಇದೆ. ಬಹಳಷ್ಟು ಜನರಿಗೆ ಈ ವಿಷಯ ಗೊತ್ತಿಲ್ಲ. ಸಿದ್ದರಾಮಯ್ಯ ರಕ್ಷಣೆಯಲ್ಲಿಯೇ ಈ ಸರಕಾರ ಐದು ವರ್ಷದ ಅಧಿಕಾರವಧಿ ಪೂರೈಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಅನಾವಶ್ಯಕವಾಗಿ ಅವರ ಹೆಸರನ್ನು ಕೆಲವೊಂದು ವಿಷಯಗಳಲ್ಲಿ ಎಳೆದು ತರಲಾಗುತ್ತಿದೆ. ಸಿದ್ದರಾಮಯ್ಯ ಈ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ರಾಜ್ಯ ಸರಕಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಸಮ್ಮಿಶ್ರ ಸರಕಾರಕ್ಕೆ ಸಿದ್ದರಾಮಯ್ಯ ಅವರಿಂದ ಕಂಟಕ ಎಂದು ಬಿಂಬಿಸಲಾಗುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಅವರು ಹೇಳಿದರು. ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ವ್ಯರ್ಥ ಕಸರತ್ತು ನಡೆಸುತ್ತಿದ್ದಾರೆ. ಆದುದರಿಂದಲೇ, ಹೋದಲ್ಲಿ ಬಂದಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿ ಮಾಡುವ ಹೇಳಿಕೆಗಳನ್ನು ನೀಡಿಕೊಂಡು ಬಿಜೆಪಿ ನಾಯಕರು ತಿರುಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X