Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಬರೇ ಭಾಷೆಯಲ್ಲ; ಅದೊಂದು ದೇಶ:...

ತುಳು ಬರೇ ಭಾಷೆಯಲ್ಲ; ಅದೊಂದು ದೇಶ: ಬಿ.ಅಪ್ಪಣ್ಣ ಹೆಗ್ಡೆ

ತುಳುನಾಡೋಚ್ಚಯ-2018ಕ್ಕೆ ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ17 Sept 2018 8:02 PM IST
share
ತುಳು ಬರೇ ಭಾಷೆಯಲ್ಲ; ಅದೊಂದು ದೇಶ: ಬಿ.ಅಪ್ಪಣ್ಣ ಹೆಗ್ಡೆ

ಬಸರೂರು, ಸೆ.17: ತುಳುನಾಡಿನ ಸಂಸ್ಕೃತಿ ಅದು ಸಮಗ್ರ ಜಗತ್ತಿಗೇ ಮಾದರಿ. ಇಲ್ಲಿನ ದೈವಾರಾಧನೆಯಲ್ಲಿ, ಆಚಾರ-ವಿಚಾರಗಳಲ್ಲಿ ಒಳ್ಳೆಯದನ್ನು ಸ್ವೀಕ ರಿಸಿ ಕೂಡಿ ಬದುಕುವ ಸಂದೇಶವಿದೆ. ತುಳು ಎಂದರೆ ಅದು ಕೇವಲ ಭಾಷೆಯಲ್ಲ. ಅದೊಂದು ದೇಶ. ಇದರಲ್ಲಿ ಸಂಸ್ಕೃತಿ ಅಡಗಿದೆ. ಆ ಸಂಸ್ಕೃತಿಯನ್ನು ಗಟ್ಟಿಗೊಳಿಸುವುದು ‘ತುಳುನಾಡೋಚ್ಚಯ-2018’ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಬಸ್ರೂರು ಅಭಿಪ್ರಾಯಪಟ್ಟಿದ್ದಾರೆ.

ಬಸ್ರೂರಿನ ನಿವೇದಿತಾ ಫ್ರೌಢಶಾಲೆಯಲ್ಲಿ ನಡೆದ ರವಿವಾರ ತುಳುನಾಡೋಚ್ಚಯ ಸ್ವಾಗತ ಸಮಿತಿ ರಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ತುಳು ಎಂದರೆ ದ್ರಾವಿಡ ಸಂಸ್ಕೃತಿ. ಕನ್ನಡ, ಕುಂದಗನ್ನಡವು ದ್ರಾವಿಡ ಸಂಸ್ಕೃತಿಯ ಮೂಲವಾಗಿದೆ. ಕುಂದಾಪುರದಲ್ಲಿ ಹಲವಾರು ಕುಟುಂಬಗಳು ತುಳು ಮತ್ತು ಕುಂದಗನ್ನಡ ಭಾಷೆಗಳ ಸಮ್ಮಿಲನವಾಗಿದೆ. ಈ ಭಾಷಾ ಬಾಂಧವ್ಯವನ್ನು ಇನ್ನಷ್ಟು ಬೆಳೆಸುವ ಬೆಸುಗೆಯಾಗಿ ತುಳುನಾಡೋಚ್ಚಯ ಮೂಡಿಬರಲಿ ಎಂದು ನಿವೃತ್ತ ಪ್ರಾಧ್ಯಾಪಕ, ಜಾನಪದ ವಿದ್ವಾಂಸ ಡಾ. ಕನರಾಡಿ ವಾದಿರಾಜ್ ಭಟ್ ಆಶಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ತುಳುವೆರೆ ಆಯನೊ ಕೂಟ ಕುಡ್ಲದ ಗೌರವಾಧ್ಯಕ್ಷ ಡಾ. ಆರೂರು ಪ್ರಸಾದ್ ರಾವ್, ಬಸ್ರೂರಿನಲ್ಲಿರುವ ತುಳುವೇಶ್ವರ ದೇವಸ್ಥಾನದ ಅಭಿವೃದ್ಧಿ ಕೆಲಸವು ಈ ಕಾರ್ಯಕ್ರಮದ ಜೊತೆ ನಡೆಯ ಬೇಕಿರುವುದರಿಂದ ಇದು ಒಂದು ಧಾರ್ಮಿಕ ಕಾರ್ಯಕ್ರಮವೂ ಆಗಿದೆ. ಆದುದರಿಂದ ಎಲ್ಲರೂ ಈ ನಿಟ್ಟಿನಲ್ಲಿಯೂ ಕಾರ್ಯಪ್ರವೃತ್ತರಾಗಿ ಸಕರಿಸಬೇಕು ಎಂದು ವಿನಂತಿಸಿದರು.

ವಿಶ್ವ ತುಳುವೆರೆ ಆಯನೊ ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಒಡಿಪು ತುಳು ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬಸ್ರೂರಿನಲ್ಲಿ ತುಳುನಾಡಿನಲ್ಲಿ ಜಾತಿ, ಮತ, ಭಾಷಾ ಸೌಹಾರ್ದತೆ ಎಂಬ ನೆಲೆಗಟ್ಟಿನಲ್ಲಿ ‘ತುಳುನಾಡೋಚ್ಚಯ-2018’ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಭಾವೈಕ್ಯತೆಯನ್ನುಂಟು ಮಾಡುವುದು ಮತ್ತು ತುಳು ಭಾಷಾ ಸಂಸ್ಕೃತಿಯನ್ನು ಇನ್ನಷ್ಟು ಬಲಪಡಿಸುವುದು ತುಳುನಾಡೋಚ್ಚಯದ ಮೂಲ ಉದ್ದೇಶವಾಗಿದೆ. ಅಲ್ಲದೆ ಬಸ್ರೂರಿನ ಪ್ರಾಚೀನ ತುಳುಸಂಸ್ಕೃತಿಯನ್ನು ಅನಾವರಣಗೊಳಿಸಿ ಜಗತ್ತಿಗೆ ಪರಿಚಯಿಸುವುದು. ಇದರೊಂದಿಗೆ ಪುರಾತನ ದೇವಾಲಯವಾದ ತುಳುವೇಶ್ವರನ ಅಭಿವೃದ್ಧಿ ಹಾಗೂ ಹೆಚ್ಚಿನ ಜನಾಕರ್ಷಣೆ ಗೊಳಿಸುವುದು ನಮ್ಮ ಗುರಿಯಾಗಿದೆ ಎಂದರು.

ಮುಂದಿನ ಡಿಸೆಂಬರ್ ತಿಂಗಳಲ್ಲಿ ನಡೆಯುವ ತುಳುನಾಡೋಚ್ಚಯದಲ್ಲಿ ತುಳುನಾಡ ಭಾಷಾ ಸಂಸ್ಕೃತಿ ಹಾಗೂ ಜಾತಿ,ಮತ,ಭಾಷಾ ಸೌಹಾರ್ದತೆಯನ್ನು ಸಾರುವ ವಿವಿಧ ಗೋಷ್ಠಿ, ಪ್ರಾತ್ಯಕ್ಷಿಕೆ ಮತ್ತು ವಸ್ತು ಪ್ರದರ್ಶನಗಳು, ಜಾನಪದ ಪ್ರದರ್ಶನಗಳು, ಆಹಾರೋತ್ಸವ, ಕುಲ ಕಸುಬು ಪ್ರದರ್ಶನಗಳು ನಡೆಯಲಿವೆ.

ಸಮ್ಮೇಳನದಲ್ಲಿ ಕನ್ನಡ, ತುಳು, ಕುಂದಗನ್ನಡ, ಕೊಂಕಣಿ, ಮರಾಠಿ, ಹವ್ಯಕ, ಶಿವಳ್ಳಿ, ಮಲೆಯಾಳ, ಮಾವಿಲ, ಉರ್ದು, ಕರ್ಹಾಡ, ಅರೆಗನ್ನಡ, ಕೊಡವ, ಕೊರಗ, ಬ್ಯಾರಿ ಭಾಷೆಗಳ ಸಾಹಿತ್ಯ, ಸಾಂಸ್ಕೃತಿಕ, ಜನಪದ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಲ್ಲದೆ ತುಳು ಭಾಷಾ ಸಂಸ್ಕೃತಿಗೆ ಅಲ್ಲದೇ ಇಲ್ಲಿನ ಸೌಹಾರ್ದತೆಗೆ ಕೊಡುಗೆ ನೀಡಿದ ಗಣ್ಯರನ್ನು ಗೌರವಿಸಲಾಗುವುದು ಎಂದು ವಿಶ್ವ ತುಳುವೆರೆ ಆಯನೊ ಕೂಟದ ಸಂಚಾಲಕ ಡಾ. ರಾಜೇಶ ಆಳ್ವ ಪ್ರಾಸ್ತಾವಿಕ ವಾಗಿ ಮಾತನಾಡುತ್ತಾ ನುಡಿದರು.

ತುಳುವೆರೆ ಆಯನೊ ಕೂಟ ಕುಡ್ಲದ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ‘ತುಳುನಾಡಿನ ದೈವಾರಾಧನೆಯ ವೈಶಿಷ್ಟತೆ’ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ತುಳುವೆರೆ ಆಯನೊ ಕೂಟ ಕಾಸರಗೋಡಿನ ಗೌರವಾಧ್ಯಕ್ಷ ಪ್ರೊ. ಎ.ಶ್ರೀನಾಥ್, ಶಾರದ ಕಾಲೇಜು ಬಸ್ರೂರಿನ ನಿವೃತ್ತ ಎಚ್‌ಒಡಿ ಪ್ರೊ. ಜಗದೀಶ್, ನಿವೃತ್ತ ಬಿಇಒ ಗೋಪಾಲ್ ಶೆಟ್ಟಿ, ಕುಂದಪ್ರಭಾ ಪತ್ರಿಕೆಯ ಯು.ಎಸ್. ಶೆಣೈ, ತಾಪಂ ಸದಸ್ಯ ರಾಮಕಿಶನ್ ಹೆಗ್ಡೆ, ಶಾರದ ಕಾಲೇಜು ಪ್ರಾಂಶುಪಾಲ ಪ್ರೊ.ಕೆ. ರಾಧಾಕೃಷ್ಣ ಶೆಟ್ಟಿ ಮೊದಲಾದವರು ಅಭಿಪ್ರಾಯ ಮಂಡಿಸಿದರು.

ನಿವೇದಿತಾ ಪ್ರೌಢಶಾಲೆಯ ಅಧ್ಯಾಪಕ ದಿನಕರ ಶೆಟ್ಟಿ ಸ್ವಾಗತಿಸಿ, ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದಶಿರ್ ನಿಟ್ಟೆ ಶಶಿಧರ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X