Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರೆ: ಅಂಗಡಿ ಕೋಣೆಗಳ ಬಾಡಿಗೆ...

ಪಡುಬಿದ್ರೆ: ಅಂಗಡಿ ಕೋಣೆಗಳ ಬಾಡಿಗೆ ವಸೂಲಿಗೆ ಕ್ರಮಕೈಗೊಳ್ಳಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Sept 2018 8:41 PM IST
share
ಪಡುಬಿದ್ರೆ: ಅಂಗಡಿ ಕೋಣೆಗಳ ಬಾಡಿಗೆ ವಸೂಲಿಗೆ ಕ್ರಮಕೈಗೊಳ್ಳಲು ಆಗ್ರಹ

ಪಡುಬಿದ್ರೆ, ಸೆ. 17:  ಪಡುಬಿದ್ರೆ ಗ್ರಾಮ ಪಂಚಾಯತ್ ನಲ್ಲಿ ಬಾಡಿಗೆದಾರರು ಅಂಗಡಿ ಕೋಣೆಗಳ ಬಾಡಿಗೆ ಬಾಕಿ ಇರಿಸಿದ್ದು, ವಸೂಲಿಗೆ ಹೋಗಲು ಗ್ರಾಪಂ ಪ್ರತಿನಿಧಿಗಳೇ ಅಡ್ಡಿಯಾಗುತಿದ್ದಾರೆ. ಬಾಕಿ ಬಾಡಿಗೆ ವಸೂಲಿಗೆ ಕ್ರಮ ಕೈಗೊಳ್ಳಿ ಎಂದು ತಾಲ್ಲೂಕು ಪಂ. ಮಾಜಿ ಸದಸ್ಯ ಭಾಸ್ಕರ ಪಡುಬಿದ್ರೆ ಒತ್ತಾಯಿಸಿದರು.

ಸೋಮವಾರ ಪಡುಬಿದ್ರೆ ಗ್ರಾಮ ಪಂ. ಸಭಾಭವನದಲ್ಲಿ ನಡೆದ ಜಮಾ ಬಂದಿ ಸಭೆಯಲ್ಲಿ ಅವರು ಮಾತನಾಡಿದ ಅವರು, ನಿವೇಶನ ಹಾಗೂ ವಸತಿ ರಹಿತರ ಪಟ್ಟಿಯನ್ನು ಪರಿಷ್ಕರಿಸಿ ಬಿಟ್ಟು ಹೋಗಿರುವವರ ಪಟ್ಟಿಯನ್ನು ಸಿದ್ದಪಡಿಸಬೇಕು ಎಂದು ಹೇಳಿದರು. 

ಗ್ರಾಮ ಪಂ. ವ್ಯಾಪ್ತಿಯಲ್ಲಿ ನಿವೇಶನಕ್ಕಾಗಿ 800 ಅರ್ಜಿಗಳು ಬಂದಿದ್ದು, ಜಮೀನಿನ ಅಲಭ್ಯತೆಯಿಂದ ನಿವೇಶನ ನೀಡಲು ತೊಡಕಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಹೇಳಿದರು. 

ಮಾಸಿಕ 2,000 - 2,500ರೂ.ಗಳಿಷ್ಟಿದ್ದ ಬಾಡಿಗೆಯನ್ನು 20,100ಕ್ಕೂ ಮೇಲ್ಪಟ್ಟು ಏಲಂ ಮೂಲಕ ಮಾರ್ಕೆಟ್ ಪ್ರದೇಶದ ಬಾಡಿಗೆದಾರರು ವಹಿಸಿಕೊಂಡಿದ್ದಾರೆ. ಅವರಲ್ಲಿ ಕೆಲವರು ಈಗ ಕಳೆದ ಆರು ತಿಂಗಳಿಂದ ಬಾಡಿಗೆಯನ್ನೇ ಪಾವತಿಸದೇ ವ್ಯವಹಾರ ಮುಂದುವರಿಸಿದ್ದಾರೆ. ಇವರಿಗೆ ಪಂಚಾಯಿತಿಯಿಂದ ಮೂರು ನೋಟಿಸ್‍ಗಳನ್ನು ಜಾರಿಗೊಳಿಸಲಾಗಿದೆ. ಬಾಡಿಗೆಯ ಆರು ತಿಂಗಳ ಮುಂಗಡವನ್ನು ಠೇವಣಿಯಾಗಿರಿಸಿರುವ ಅವರ ಆರು ತಿಂಗಳ ಅವಧಿ ಈ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ. 

ಗ್ರಾಮ ಪಂಚಾಯಿತಿಗೆ 2016-17ರ ಸಾಲಿನಲ್ಲಿ ಅಂಗಡಿಗಳ ಬಾಡಿಗೆ 5,67,830 ರೂ. ಬಾಕಿ ಹಾಗೂ 2017-18 ರ ಸಾಲಿನಲ್ಲಿ 18,14,460 ಸೇರಿ 23,82,290 ರೂ. ವಸೂಲಿಯಾಗಬೇಕಿತ್ತು. ಅದರಲ್ಲಿ 18,29,140 ಸಂಗ್ರಹವಾಗಿದ್ದು, ಇನ್ನೂ 3,48,550 ರೂಪಾಯಿ ಬಾಕಿಯಿದೆ ಎಂದು ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ತಿಳಿಸಿದರು.

ಅಂಗಡಿ ಬಾಡಿಗೆ ಬಾಕಿ ಇರಿಸಿದ ಕೆಲ ವ್ಯಕ್ತಿಗಳು ನಾಪತ್ತೆಯಾಗಿದ್ದು, ಅವರು ನೀಡಿರುವ ವಿಳಾಸವೂ ಇಲ್ಲವಾಗಿದೆ. ಉದ್ಯಮ ಪರವಾನಿಗೆಯಲ್ಲಿಯೂ ಹಿಂದಿನ ಬಾಕಿ  91,571 ರೂ. ಸೇರಿ 3,32,271 ರೂ. ಸಂಗ್ರಹವಾಗಬೇಕಿತ್ತು. ಅದರಲ್ಲಿ 2,60,709 ಪಾವತಿಯಾಗಿ71, 562 ಬಾಕಿ ಬರಬೇಕಿದೆ ಎಂದು ವಿವರಿಸಿದರು.

ಬಾಡಿಗೆ ಬಾಕಿಯಿರಿಸಿರುವ ಅಂಗಡಿಗಳಿಗೆ ನೋಟಿಸ್ ನೀಡಿ, ಪಾವತಿ ಮಾಡದಿದ್ದಲ್ಲಿ ಪುನರ್ ಏಲಂ ಮಾಡಿ ಎಂದು ಪಿಡಿಒ ಅವರಿಗೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ನಿರ್ದೇಶನ ನೀಡಿದರು.

ಪಂ. ಉಪಾಧ್ಯಕ್ಷ ವೈ. ಸುಕುಮಾರ್ ಅಧ್ಯಕ್ಷತೆರ ವಹಿಸಿದ್ದರು. ತೆಂಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಸಂತಿ ಬಾಯಿ ಹಾಗೂ ತಾಲ್ಲೂಕು ಪಂಚಾಯಿತಿ ಗುಮಾಸ್ತ ವಿನಾಯಕ್ ಜಮಾಬಂದಿ ಸಹಾಯಕರಾಗಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X