Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.15ರಿಂದ ಆಳ್ವಾಸ್ ಕೃಷಿಸಿರಿ ಆರಂಭ

ನ.15ರಿಂದ ಆಳ್ವಾಸ್ ಕೃಷಿಸಿರಿ ಆರಂಭ

ವಾರ್ತಾಭಾರತಿವಾರ್ತಾಭಾರತಿ17 Sept 2018 10:31 PM IST
share

ಮೂಡುಬಿದಿರೆ, ಸೆ. 17: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಾರ್ಷಿಕ ಉತ್ಸವವಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ  ರಾಷ್ಟ್ರೀಯ ಸಮ್ಮೇಳನ “ಆಳ್ವಾಸ್ ನುಡಿಸಿರಿ”ಯನ್ನು  ನ.16, 17 ಮತ್ತು 18ರಂದು ಮೂರು ದಿನಗಳ ಕಾಲ  ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಸಾಹಿತ್ಯ, ಸಂಸ್ಕೃತಿಗಳೊಡನೆ ಜನಜೀವನಕ್ಕೆ ಮೂಲಾಧಾರವಾಗಿರುವ ಕೃಷಿಯನ್ನೂ ಮುನ್ನೆಲೆಗೆ ತರಬೇಕೆಂಬ ಇರಾದೆಯಿಂದ ನ.15ರ ಸಂಜೆಯಿಂದ "ಆಳ್ವಾಸ್ ಕೃಷಿಸಿರಿ" ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ಅವರು ಸೋಮವಾರ ತನ್ನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಫಿಶರೀಶ್ ಇಲಾಖೆ, ಕೃಷಿ ಇಲಾಖೆ, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಕೃಷಿಕ ಸಮಾಜ, ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡುಬಿದಿರೆ ಮತ್ತು ರೈತಸಂಘಗಳ ಸಹಯೋಗಗಳೊಂದಿಗೆ ಹಮ್ಮಿಕೊಂಡ ಈ ಕೃಷಿ ಸಮ್ಮೇಳನದಲ್ಲಿ ಕೃಷಿ ಸಂಬಂಧಿ ಚಟುವಟಿಕೆಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಹಾಗೂ ಮಾರಾಟಗಳನ್ನು ಹಮ್ಮಿಕೊಳ್ಳಲಾಗಿದ್ದು ನ. 15ರಂದು ಸಂಜೆ 5 ಗಂಟೆಗೆ ಉದ್ಘಾಟನೆಗೊಂಡು  16ರಿಂದ 18ರ ವರೆಗೆ 3 ದಿನಗಳು ನಡೆಯಲಿದೆ ಎಂದರು.

ಆಳ್ವಾಸ್ ಕೃಷಿಸಿರಿ ಆವರಣಕ್ಕೆ 'ಕೆ.ಎಸ್.ಪುಟ್ಟಣ್ಣಯ್ಯ' ಹೆಸರು

ಹಿರಿಯ ರೈತಮುಖಂಡ, ಕೃಷಿಪ್ರೇಮಿ, ರೈತ ಹೋರಾಟಗಾರ ದಿ.ಕೆ.ಎಸ್.ಪುಟ್ಟಣ್ಣಯ್ಯನವರ ಗೌರವಾರ್ಥ ಆಳ್ವಾಸ್ ಕೃಷಿಸಿರಿ-ಕೃಷಿ ಮೇಳ ನಡೆಯುವ ಆವರಣಕ್ಕೆ 'ಕೆ.ಎಸ್.ಪುಟ್ಟಣ್ಣಯ್ಯ ಆವರಣ' ಎಂದು ನಾಮಕರಣ ಮಾಡಲಾಗಿದೆ.

ಆಳ್ವಾಸ್ ಕೃಷಿಸಿರಿ-2018ರ ವಿಶೇಷತೆಗಳು 

ಈ ಸಮ್ಮೇಳನಕ್ಕಾಗಿ ಎರಡು ಎಕ್ರೆ ಪ್ರದೇಶದಲ್ಲಿ ಊರಿನ ಸಾಂಪ್ರದಾಯಿಕ ಮಾದರಿಯಲ್ಲಿ ತರಕಾರಿಗಳನ್ನು ಬೆಳೆಯಲಾಗಿದೆ. 44 ವಿಧದ ಬಿದಿರಿನ ಗಿಡಗಳು ಹಾಗೂ 40 ವಿಧದ ಬಿದಿರುಗಳ ಪ್ರದರ್ಶನ, ನ್ಯೂಜಿಲೇಂಡ್ ಮೂಲದ ವಿಶಿಷ್ಟ ಬಣ್ಣಗಳ ಹಾಗೂ ಆಹಾರಕ್ಕಾಗಿ ಬಳಸುವ ಸಸ್ಯಗಳ ಪ್ರದರ್ಶನ, ಪುಷ್ಪ ಪ್ರದರ್ಶನ ಮತ್ತು ತರಕಾರಿ ಹಾಗೂ ಹಣ್ಣುಗಳಲ್ಲಿ ಕಲಾಕೃತಿಗಳ ರಚನೆಯ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಜೊತೆಗೆ ಕೃಷಿ ಸಾಹಿತ್ಯ-ಸಲಕರಣೆಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೂ ಅವಕಾಶ ನೀಡಲಾಗಿದೆ. ವಿಶೇಷ ಆಕರ್ಷಣೆಯಲ್ಲಿ ಮತ್ಸ್ಯಮೇಳ, ಸಮುದ್ರ ಚಿಪ್ಪು ಪ್ರದರ್ಶನ, ಶ್ವಾನ ಪ್ರದರ್ಶನ. ಪಕ್ಷಿಗಳ ಪ್ರದರ್ಶನ, ಬೆಕ್ಕು ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

ಅಸಂಖ್ಯ ಕೃಷಿ ಸಂಬಂಧಿ-ಸಲಕರಣೆ-ಪರಿಕರ ಮತ್ತು ಕೃಷಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು ಒಂದೆಡೆ ಸೇರಲಿವೆ. ಆಸಕ್ತರ ವೀಕ್ಷಣೆ ಮತ್ತು ಖರೀದಿಗೆ ಇದೊಂದು ಸುವರ್ಣಾವಕಾಶವಾಗಿದೆ. ಜೊತೆಗೆ ಆಸಕ್ತರ ಮನತಣಿಸಲು ದಿನವಿಡೀ ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಇಲ್ಲಿನ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಳಿಗೆದಾರರು ಮತ್ತು ವೀಕ್ಷಕರೆಲ್ಲರಿಗೂ ಉಚಿತ ಊಟೋಪಚಾರದ ವ್ಯವಸ್ಥೆ ಇದೆ. ಆಸಕ್ತರಿಗೆ ವಸತಿಯ ವ್ಯವಸ್ಥೆಯನ್ನೂ ಮಾಡಲಾಗುವುದು.

ದಿನಂಪ್ರತಿ ಒಂದು ಲಕ್ಷಕ್ಕೂ ಮಿಕ್ಕಿ ಸಾಹಿತಿಗಳು, ಸಾಹಿತ್ಯ ಪ್ರೇಮಿಗಳು, ಕಲಾವಿದರು, ಕೃಷಿಕರು, ಕೃಷಿಪ್ರೇಮಿಗಳು, ಸಾರ್ವಜನಿಕರು, ಮಕ್ಕಳಿಂದ ತೊಡಗಿ ವಯೋವೃದ್ಧರವರೆಗೆ ವಿವಿಧ ವಯೋಮಾನದ, ವಿವಿಧ ಅಭಿರುಚಿಗಳ ಜನರನ್ನು ಈ ಸಮ್ಮೇಳನವು ಆಕರ್ಷಿಸುವುದರಲ್ಲಿ ಸಂಶಯವಿಲ್ಲ. ಅದಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.

ಸಂಪರ್ಕಕ್ಕಾಗಿ : ಶ್ರೀರಾಜವರ್ಮ ಬೈಲಂಗಡಿ - 9845276622 Email : rajavarmabylangady@gmail.com, rajavarmabylangady@gmail.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X