Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದೇ ಛಾವಣಿಯಡಿ ಮುಹರ್ರಂ ಸವಾರಿ, ಗಣೇಶ...

ಒಂದೇ ಛಾವಣಿಯಡಿ ಮುಹರ್ರಂ ಸವಾರಿ, ಗಣೇಶ ಮೂರ್ತಿ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ18 Sept 2018 7:57 PM IST
share
ಒಂದೇ ಛಾವಣಿಯಡಿ ಮುಹರ್ರಂ ಸವಾರಿ, ಗಣೇಶ ಮೂರ್ತಿ ಸ್ಥಾಪನೆ

ಯವತಮಾಲ್,ಸೆ.18: ಈ ಹಿಂದೆ ಕೋಮು ಗಲಭೆಗೆ ಸಾಕ್ಷಿಯಾಗಿದ್ದ ಯವತಮಾಲ್ ಜಿಲ್ಲೆಯ ವಿದುಲ್ ಗ್ರಾಮವು ಒಂದೇ ಛಾವಣಿಯಡಿ ಮುಹರ್ರಂ ಸವಾರಿ ಮತ್ತು ಗಣೇಶ ವಿಗ್ರಹ ಸ್ಥಾಪಿಸುವ ಮೂಲಕ ಭ್ರಾತೃತ್ವಕ್ಕೆ ಉದಾಹರಣೆಯಾಗಿದೆ. ಒಂದೇ ಸ್ಥಳದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯಗಳು ನಿರಾತಂಕವಾಗಿ ಪ್ರಾರ್ಥನೆಗಳನ್ನು ಸಲ್ಲಿಸುತ್ತಿವೆ.

ಈ ಹಿಂದೆ ಗಣೇಶೋತ್ಸವ ಹಾಗೂ ರಮಝಾನ್ ಮತ್ತು ಮುಹರ್ರಂ ಸಂದರ್ಭಗಳಲ್ಲಿ ಈ ಪ್ರದೇಶವು ಹಲವಾರು ಕೋಮು ಉದ್ವಿಗ್ನತೆಯ ಘಟನೆಗಳಿಗೆ ಸಾಕ್ಷಿಯಾಗಿದ್ದ ಹಿನ್ನೆಲೆಯಲ್ಲಿ ಉಭಯ ಸಮುದಾಯಗಳನ್ನು ಬೆಸೆಯುವ ಯವತಮಾಲ್ ಎಸ್‌ಪಿ ಮೇಘನಾಥನ್ ರಾಜಕುಮಾರ ಅವರ ಈ ಉಪಕ್ರಮವು ಮಹತ್ವವನ್ನು ಪಡೆದುಕೊಂಡಿದೆ.

 ಈ ವರ್ಷ ಗಣೇಶೋತ್ಸವ ಮತ್ತು ಮುಹರ್ರಂ ಏಕಕಾಲದಲ್ಲಿ ಬಂದಿರುವುದರಿಂದ ಎಸ್‌ಪಿಯವರ ಸೂಚನೆಯಂತೆ ಸೆ.8ರಂದು ಶಾಂತಿಸಭೆಯನ್ನು ಕರೆದಿದ್ದ ಉಮರಖೇಡ್ ಪೊಲೀಸ್ ಠಾಣಾಧಿಕಾರಿ ಹನುಮಂತ ಗಾಯಕ್ವಾಡ್ ಅವರು ಎರಡೂ ಉತ್ಸವಗಳನ್ನು ಜೊತೆಯಾಗಿ ಆಚರಿಸುವ ಬಗ್ಗೆ ಚಿಂತನೆ ನಡೆಸಬೇಕೆಂಬ ಪ್ರಸ್ತಾವನೆಯನ್ನು ಹಿಂದು ಮತ್ತು ಮುಸ್ಲಿಂ ಸಮುದಾಯಗಳ ನಾಯಕರ ಮುಂದಿರಿಸಿದ್ದರು.

ಈ ಸಲಹೆಯನ್ನು ಸರ್ವಾನುಮತದಿಂದ ಒಪ್ಪಿಕೊಂಡ ಗ್ರಾಮಸ್ಥರು ವಿದುಲ್‌ನ ನಳ್‌ಸಾಹೇಬ ದೇವಸ್ಥಾನದ ಆವಾರದಲ್ಲಿ ಮಂಟಪವನ್ನು ನಿರ್ಮಿಸಿದ್ದು,ಇಲ್ಲಿ ಎರಡೂ ಧಾರ್ಮಿಕ ಉತ್ಸವಗಳನ್ನು ಆಚರಿಸಲಾಗುತ್ತಿದೆ.

 ಕಳೆದ 134 ವರ್ಷಗಳಿಂದಲೂ ದೇವಸ್ಥಾನದ ಆವರಣದಲ್ಲಿ ಗಣೇಶೋತ್ಸವ ನಡೆಯುತ್ತಿದೆ. ಕೆಲವು ವರ್ಷಗಳಲ್ಲಿ ಗಣೇಶೋತ್ಸವ ಮತ್ತು ಮುಹರ್ರಂ ಒಂದೇ ಸಮಯದಲ್ಲಿ ಬರುತ್ತವೆ. ಇಂತಹ ಸಂದರ್ಭಗಳಲ್ಲಿ ಜೊತೆಯಾಗಿ ಈ ಉತ್ಸವಗಳನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲು ನಾವೀಗ ನಿರ್ಧರಿಸಿದ್ದೇವೆ ಎಂದು ದೇವಸ್ತಾನ ಮಂಡಳಿಯ ಅಧ್ಯಕ್ಷ ಜಯರಾಮ ಧಾಗೆ ತಿಳಿಸಿದರು.

ಪೊಲೀಸರು ಉಭಯ ಸಮುದಾಯಗಳ ಮಧ್ಯೆ ಯಾವುದೇ ಸಂಘರ್ಷಕ್ಕೆಡೆಯಾಗದಂತೆ ಗಣೇಶ ವಿಸರ್ಜನೆ ಮತ್ತು ಮುಹರ್ರಂ ಸವಾರಿ ಮೆರವಣಿಗೆಗಳಿಗೆ ಪ್ರತ್ಯೇಕ ವೇಳಾಪಟ್ಟಿಯನ್ನೂ ನಿಗದಿಗೊಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X