Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಕಷ್ಟದಲ್ಲಿರುವ ಕಲಾವಿದರನ್ನು...

ಸಂಕಷ್ಟದಲ್ಲಿರುವ ಕಲಾವಿದರನ್ನು ಪೋಷಿಸುವವರು ಬೇಕು: ಕಸಾಪ ಅಧ್ಯಕ್ಷ ಮನು ಬಳಿಗಾರ್

ವಾರ್ತಾಭಾರತಿವಾರ್ತಾಭಾರತಿ18 Sept 2018 8:59 PM IST
share
ಸಂಕಷ್ಟದಲ್ಲಿರುವ ಕಲಾವಿದರನ್ನು ಪೋಷಿಸುವವರು ಬೇಕು: ಕಸಾಪ ಅಧ್ಯಕ್ಷ ಮನು ಬಳಿಗಾರ್

ಬೆಂಗಳೂರು, ಸೆ.18: ಸಂಕಷ್ಟದಲ್ಲಿರುವ ಕಲಾವಿದರನ್ನು ಪೋಷಿಸಿದರೆ ಕಲೆ, ಸಾಹಿತ್ಯ, ಸಂಗೀತ ಬೆಳೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಹೇಳಿದರು.

ಮಂಗಳವಾರ ಚಾಮರಾಜಪೇಟೆಯ ಕಸಾಪದಲ್ಲಿ ಏರ್ಪಡಿಸಿದ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಕಲಾವಿದರ ಬದುಕು ನಾವು ಊಹಿಸುದಷ್ಟು ಸುಖಕರವಾಗಿರಲ್ಲ, ಅದರಲ್ಲೂ, ನಾಟಕರಂಗದ ಕಲಾವಿದರು ಆರ್ಥಿಕವಾಗಿ ಅಸಬಲರಾಗಿರುತ್ತಾರೆ. ಇಂತಹ ಕಲಾವಿದರನ್ನು ಗುರುತಿಸಿ ಸಾಹಿತ್ಯ ಪ್ರೇಮಿಗಳು, ಸಂಸ್ಥೆಗಳು ಪೋಷಿಸಬೇಕು ಎಂದು ವಿನಂತಿಸಿದರು.

ಕನ್ನಡ ಸಾಹಿತ್ಯದ ಸೇವೆಯಲ್ಲಿ ಎಲೆಮರೆ ಕಾಯಿಗಳಾಗಿ ಅನೇಕ ಕಲಾವಿದರು ಸೇವೆ ಸಲ್ಲಿಸುತ್ತಿದ್ದಾರೆ. ಅಂತವರನ್ನು ಸರಕಾರ ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ನೀಡಬೇಕು. ತಮಿಳುನಾಡೋ, ಮಹಾರಾಷ್ಟ್ರದಲ್ಲೋ ಹುಟ್ಟಿದರೆ, ಸಾಧಕರನ್ನುಪ್ರೋತ್ಸಾಹಿಸಿ, ಒತ್ತಡ ಹೇರುವ ಮೂಲಕ ಸರಕಾರ ನೀಡುವ ಪ್ರಶಸ್ತಿಗಳಿಗೆ ಸಾಹಿತ್ಯಾಸಕ್ತರು ಶಿಫಾರಸ್ಸು ಮಾಡುತ್ತಿದರು ಎಂದು ತಿಳಿಸಿದರು.

ರಾಜ್ಯ ಪ್ರಶಸ್ತಿಯನ್ನು ವರ್ಷಕ್ಕೆ 50 ಸಾಧಕರಿಗೆ ನೀಡುತ್ತಾರೆ. ಅವರಷ್ಟೇ ಸಾಧಕರಲ್ಲ, ಸಿನೆಮಾ ರಂಗದಲ್ಲಿ ಅಂತರ್‌ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ವೈಜನಾಥ ಬಿರಾದಾರರಂತಹ ಅನೇಕರು ಪ್ರಶಸ್ತಿಗಳಿಗೆ ಅರ್ಹರಾಗಿದ್ದಾರೆ. ತಮಿಳುನಾಡಿನ ರಸ್ತೆ, ವೃತ್ತ, ಕೆರೆಕಟ್ಟೆ, ಉದ್ಯಾನವನಗಳ ಎಲ್ಲ ಮೂಲೆಗಳಲ್ಲೂ ಸಾಹಿತಿಗಳ, ನಾಡು-ನುಡಿಗಾಗಿ ದುಡಿದವರ ಹೆಸರನ್ನಿಟ್ಟಿದ್ದಾರೆ. ಇವೆಲ್ಲವನ್ನು ಗಮನಿಸಿದಾಗ ದೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಅಭಿವೃದ್ಧಿಗೆ ಸಾಂಘಿಕವಾಗಿ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದರು.

ದತ್ತಿ ದಾನಿ ಕೆ.ಮೋಹನ್‌ದೇವ್ ಆಳ್ವ ಮಾತನಾಡಿ, ಲೀಲಾವತಿ, ಬಿರಾದಾರ ಪ್ರಶಸ್ತಿಗಳನ್ನು ಅರಸಿ ಹೋದವರಲ್ಲ, ಇಂತವರನ್ನು ವಿಶ್ವವಿದ್ಯಾಲಯಗಳು ಗುರುತಿಸಿ ಗೌರವ ಡಾಕ್ಟರೇಟ್ ನೀಡಬೇಕು. ಇವರನ್ನು ಸರಕಾರ ಗುರುತಿಸಿಲ್ಲದಿದ್ದರೂ ಜನಮನದಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಸಂಗೀತಗಾರ್ತಿ ಎಚ್.ಆರ್.ಲೀಲಾವತಿ ಹಾಗೂ ಹಾಸ್ಯ ಕಲಾವಿದ ವೈಜನಾಥ ಬಿರಾದಾರರಿಗೆ ದತ್ತಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X