Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಷ್ಣುವರ್ಧನ್ ಚಿತ್ರರಂಗದ ನೈಜ ನಟ:...

ವಿಷ್ಣುವರ್ಧನ್ ಚಿತ್ರರಂಗದ ನೈಜ ನಟ: ಬಹುಭಾಷಾ ನಟಿ ವಿನಯಾ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ18 Sept 2018 9:08 PM IST
share
ವಿಷ್ಣುವರ್ಧನ್ ಚಿತ್ರರಂಗದ ನೈಜ ನಟ: ಬಹುಭಾಷಾ ನಟಿ ವಿನಯಾ ಪ್ರಕಾಶ್

ಬೆಂಗಳೂರು, ಸೆ.18: ನಮಗೆ ಕಾದಂಬರಿಗಳಲ್ಲಿ ನಾಯಕ ನಟನಾಗಿ ಕಾಣುತ್ತಿದ್ದ ವಿಷ್ಣುವರ್ಧನ್, ನಾನು ಮೊದಲ ಚಿತ್ರ ಮಾಡುವ ಸಂದರ್ಭದಲ್ಲಿ ಕಲಾವಿದರಿಗೆ ಸಂಕೋಚ ಇರಬಾರದು ಎಂದು ಸ್ಪೂರ್ತಿ, ಧೈರ್ಯ ತುಂಬುತ್ತಿದ್ದ ನಿಜವಾದ ನಟರಾಗಿದ್ದರು ಎಂದು ಬಹುಭಾಷಾ ನಟಿ ವಿನಯಾ ಪ್ರಕಾಶ್ ಹೇಳಿದರು.

ಮಂಗಳವಾರ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವದಲ್ಲಿ ಡಾ.ವಿಷ್ಣುವರ್ಧನ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ನಾವು ಕಾಲೇಜು ದಿನಗಳಲ್ಲಿ ಕಲಿಯಬೇಕಾದ ಸಂದರ್ಭದಲ್ಲಿ ಪುಸ್ತಕ ಓದುವ ಹುಚ್ಚು ಇತ್ತು. ಅದರಲ್ಲಿ ಬರುವ ನಾಯಕನ ಪಾತ್ರಗಳಲ್ಲಿ ವಿಷ್ಣು ಅವರನ್ನು ಕಲ್ಪಿಸಿಕೊಂಡರೆ, ನಾಯಕಿಯ ಪಾತ್ರದಲ್ಲಿ ನಮ್ಮನ್ನು ನಾವು ಕಲ್ಪನೆ ಮಾಡಿಕೊಳ್ಳುತ್ತಿದ್ದೆವು. ಅಷ್ಟರ ಮಟ್ಟಿಗೆ ಅವರ ಕಲೆ, ಶೈಲಿ ಹಾಗೂ ನಟನೆಯನ್ನು ಇಷ್ಟ ಪಡುತ್ತಿದ್ದೆವು. ಅನಂತರ ಅವರ ಜೊತೆ ನಟಿಸಲು ಅವಕಾಶ ದೊರೆಕಿತು ಎಂದರು.

ಮೊದಲ ಚಿತ್ರದಲ್ಲಿ ಸಂತೆಗೆ ಹೋಗೋಣ ಬಾ ಗೀತೆಯ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯುತ್ತಿತ್ತು. ನಮಗೆ ಸಾರ್ವಜನಿಕವಾಗಿ ನೃತ್ಯ ಮಾಡಿದ ಅಭ್ಯಾಸವಿರಲಿಲ್ಲ. ಆದುದರಿಂದ ಸಂಕೋಚ ಪಡುತ್ತಿದ್ದೆವು. ಆದರೆ, ವಿಷ್ಣುವರ್ಧನ್ ನನ್ನ ಕೈ ಹಿಡಿದುಕೊಂಡು ಹೋಗಿ ಕಲಾವಿದರಿಗೆ ಸಂಕೋಚ, ನಾಚಿಕೆ ಇರಬಾರದು ಎಂದು ಧೈರ್ಯ ತುಂಬಿ ನೃತ್ಯ ಮಾಡಿಸಿದ್ದರು ಎಂದು ವಿನಯಾ ಪ್ರಕಾಶ್ ವಿಷ್ಣು ಅವರೊಂದಿನ ನೆನಪುಗಳನ್ನು ತೆರೆದಿಟ್ಟರು.

ನಟ ರವಿಶಂಕರ್ ಗೌಡ ಮಾತನಾಡಿ, ಉತ್ತರ ಕರ್ನಾಟಕದ ಜನರ ಬಗ್ಗೆ ವಿಷ್ಣುವರ್ಧನ್ ಅಪಾರವಾದ ಪ್ರೀತಿಯನ್ನು ಹೊಂದಿದ್ದರು. ಅವರ ಭಾಷೆ ಬಳಕೆ, ಅಕ್ಷರ ಉಚ್ಛಾರಣೆ ಅತ್ಯಂತ ಸೊಗಸಾಗಿ ಇರುತ್ತಿದ್ದವು. ಬಲಗೈನಲ್ಲಿ ಕೊಟ್ಟ ವಿಚಾರ ಎಡಗೈಗೆ ತಿಳಿಯಬಾರದು ಎಂಬ ವ್ಯಕ್ತಿತ್ವ ಅವರದ್ದಾಗಿತ್ತು. ಹೀಗಾಗಿ, ಅವರ ಕೆಲಸಗಳು ಅವರ ಆಪ್ತರಿಗೆ ಅಷ್ಟೇ ತಿಳಿಯುತ್ತಿದ್ದವು ಎಂದು ಹೇಳಿದರು.

ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಮಾತನಾಡಿ, ಇಂದಿನ ಚಿತ್ರಗಳಲ್ಲಿ ವಿಷ್ಣುವರ್ಧನ್‌ರ ಕಲೆಯಿಲ್ಲದೆ ಚಿತ್ರಗಳನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹ ಅಪಾರವಾದ ಸಂಪತ್ತನ್ನು ಕನ್ನಡ ನಾಡಿಗೆ ಬಿಟ್ಟು ಹೋಗಿದ್ದಾರೆ. ಅವರಿಗೆ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಆದರೆ, ಪ್ರಶಸ್ತಿಯನ್ನು ಕೊಡಲು ಅವರ ಬಯೋಡೇಟಾ ಕೇಳುತ್ತಿರುವುದು ಅವಮಾನಕರ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಷ್ಣು ಅವರನ್ನು ಅಂತ್ಯಸಂಸ್ಕಾರ ಮಾಡುವ ಮೂಲಕ ಎಲ್ಲವನ್ನೂ ಅಂತ್ಯ ಮಾಡಿದ್ದೇವೆ ಎಂದುಕೊಳ್ಳುವುದು ಸಲ್ಲದು. ಅವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಬೇಕು. ಯಾರ ವಿರೋಧವೂ ಕಟ್ಟಿಕೊಳ್ಳಬೇಕಾದ ಅಗತ್ಯವಿಲ್ಲ. ವಿವಾದವನ್ನು ಮಾಡಿಕೊಂಡರೆ ಅದು ಮತ್ತಷ್ಟು ಜಟಿಲವಾಗುತ್ತದೆ. ಸಮಾಧಾನದಿಂದ ವಿಷ್ಣು ಅವರ ಸ್ಮಾರಕವನ್ನು ನಿರ್ಮಾಣ ಮಾಡುವ ಕಡೆಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ವರ್ಷದಿಂದ ವಿಷ್ಣು ವರ್ಧನ್ ಅವರ ರಾಷ್ಟ್ರೀಯ ಉತ್ಸವ ಮಾಡುವುದಿಲ್ಲ. ಅವರ ಜನ್ಮದಿನವನ್ನು ರಾಷ್ಟ್ರೀಯ ಆದರ್ಶ ದಿನ ಘೋಷಣೆ ಮಾಡಲಾಗುತ್ತದೆ. ಅಲ್ಲದೆ, ಅಂತರ್‌ರಾಷ್ಟ್ರೀಯ ಉತ್ಸವವನ್ನು ನಡೆಸಲಾಗುತ್ತದೆ. ಮುಂದಿನ ಅಂತರ್‌ರಾಷ್ಟ್ರೀಯ ಉತ್ಸವವನ್ನು ಆಸ್ಟ್ರೇಲಿಯಾದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಘೋಷಿಸಿದರು.

ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಚಿತ್ರನಟರಾದ ದುನಿಯಾ ವಿಜಯ್, ಪ್ರೇಮ್, ಬಾಲಾಜಿ ರವಿಚಂದ್ರನ್, ಶ್ರೀನಗರ ಕಿಟ್ಟಿ, ಸತೀಶ್, ವಿಜಯ್ ಸೂರ್ಯ, ಸಿಹಿ ಕಹಿ ಚಂದ್ರು, ರವಿಶಂಕರಗೌಡರು, ಚರಣ್ ರಾಜ್, ರವಿಕೃಷ್ಣ, ನಿರ್ದೇಶಕ ರಘುರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X