Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಕೆಗೆ...

ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ

ಜಿಲ್ಲಾಡಳಿತಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Sept 2018 11:19 PM IST
share
ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ

ಶಿವಮೊಗ್ಗ, ಸೆ.18: ಬಾಕಿ ಉಳಿಸಿಕೊಂಡಿರುವ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಡಾ. ಕೆ.ಎ. ದಯಾನಂದ್‍ಗೆ ಮನವಿ ಪತ್ರ ಅರ್ಪಿಸಿದರು. 

ರಾಜ್ಯದ ಆರೋಗ್ಯ ಇಲಾಖೆಯಡಿ ಗ್ರಾಮೀಣ ಹಾಗೂ ನಗರ-ಪಟ್ಟಣದ ಕೊಳಚೆ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಚಿಕಿತ್ಸೆ ಅಗತ್ಯವಿರುವ ಮಹಿಳೆಯರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹಾಗೆಯೇ ಕೇಂದ್ರ - ರಾಜ್ಯ ಸರ್ಕಾರಗಳ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹಾಗೂ ಜಾಗೃತಿ ಮೂಡಿಸುವ ಕೆಲಸ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕೆಲಸಕ್ಕೆ ತಕ್ಕಂತೆ ವೇತನ, ಸೌಲಭ್ಯಗಳು ದೊರಕುತ್ತಿಲ್ಲ. ಅಗತ್ಯ ವಸ್ತುಗಳು ಗಗನಕ್ಕೇರಿವೆ. ಜೀವನ ನಡೆಸುವುದೇ ದುಸ್ತರವಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತೆಯರಿಗೆ ಮಾಸಿಕವಾಗಿ ನೀಡಲಾಗುತ್ತಿರುವ 3500 ರೂ. ಯಾವುದಕ್ಕೂ ಸಾಲುತ್ತಿಲ್ಲ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. 

ಕಳೆದ ಏಳೆಂಟು ತಿಂಗಳಿನಿಂದಲೂ ಕಾರ್ಯಕರ್ತೆಯರಿಗೆ ವೇತನ ಬಿಡುಗಡೆ ಮಾಡಿಲ್ಲ. ಈ ಕುರಿತಂತೆ ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದೇ ದುಸ್ತರವಾಗಿ ಪರಿಣಮಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. 

ಬೇಡಿಕೆಗಳು: ಆಶಾ ಕಾರ್ಯಕರ್ತೆಯರು ನಿರ್ವಹಿಸುವ ಎಲ್ಲ ಕೆಲಸಕಾರ್ಯಗಳಿಗೂ ಪ್ರತ್ಯೇಕ ಪ್ರೋತ್ಸಾಹ ಧನ ನಿಗದಿಗೊಳಿಸಬೇಕು. ವೇತನ ಬಿಡುಗಡೆ ಮಾಡುವ ವೇಳೆ ಅದು ಯಾವ ತಿಂಗಳ ವೇತನ ಎಂಬುವುದನ್ನು ನಮೂದಿಸಬೇಕು. ಹುದ್ದೆ ಖಾಯಂಗೊಳಿಸಬೇಕು. ಖಾಯಂ ನೌಕರರಿಗೆ ನೀಡುವ ಎಲ್ಲ ರೀತಿಯ ವೇತನ, ಸೌಲಭ್ಯ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ, ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾ ಕಾರ್ಯದರ್ಶಿ ಪ್ರೇಮ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X