Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆಯಲ್ಲಿ 'ಕ್ಷೇಮದಲ್ಲಿ...

ದೇರಳಕಟ್ಟೆಯಲ್ಲಿ 'ಕ್ಷೇಮದಲ್ಲಿ ಅಂಬಿಸಿಕಾನ್-2018' 5ನೇ ರಾಜ್ಯಮಟ್ಟದ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Sept 2018 11:52 PM IST
share
ದೇರಳಕಟ್ಟೆಯಲ್ಲಿ ಕ್ಷೇಮದಲ್ಲಿ ಅಂಬಿಸಿಕಾನ್-2018 5ನೇ ರಾಜ್ಯಮಟ್ಟದ ಸಮ್ಮೇಳನ ಉದ್ಘಾಟನೆ

ಕೊಣಾಜೆ, ಸೆ. 19: ಭಾರತದ ಜನಸಂಖ್ಯೆಗೆ ಅನುಗುಣವಾಗಿ 20 ಶೇ. ಜನರು ಮಧುಮೇಹಕ್ಕೆ ಒಳಗಾಗಿದ್ದಾರೆ. ಆ ಮೂಲಕ ಭಾರತ ಮಧುಮೇಹದ ರಾಜಧಾನಿಯಾಗುತ್ತಿದ್ದು ಮಧುಮೇಹದ ಕುರಿತು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು ಎಂದು ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ವೈದ್ಯಕೀಯ ಜೀವ ರಸಾಯನ ಶಾಸ್ತ್ರ ವಿಭಾಗದ ಕರ್ನಾಟಕ ರಾಜ್ಯ ಘಟಕ ಹಾಗೂ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 5ನೇ ರಾಜ್ಯಮಟ್ಟದ ಆಂಬಿಸಿಕಾನ್-2018ನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇಮದಲ್ಲಿರುವ ಜೀವ ರಸಾಯನಶಾಸ್ತ್ರ ಕೇಂದ್ರ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡಿದ್ದುಅಂತಹ ವ್ಯವಸ್ಥೆ ದೇಶದ ಕೆಲವೇ ಸಂಸ್ಥೆಗಳಲ್ಲಿದೆ. ಫಿಸಿಶಿಯನ್‍ಗಳು ಅದರ ಸದ್ಬಳಕೆ ಮಾಡಬೇಕಿದೆ. ಹಾಗೆಯೇ ಇತರ ಪ್ಯಾರಾಮೆಡಿಕಲ್ ವಿಭಾಗದವರು ಬಳಸಿಕೊಳ್ಳಬೇಕು. ಇತರ ಸಂಸ್ಥೆಗಳಿಗೂ ಆದರಿಂದ ಸೇವೆ ಕೊಡಲು ಸಾಧ್ಯವಿದೆ. ಆ ಮೂಲಕ ಮಧುಮೇಹದಂತಹ ರೋಗಕ್ಕೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ ಎಂದು ನುಡಿದರು.

ಸಮ್ಮೇಳನ ಪ್ರಯುಕ್ತ ಹೊರತರಲಾದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ ಮಾತನಾಡಿ ಹಿಂದಿನ ದಶಕದಲ್ಲಿ ಫಿಸಿಯೋಲಾಜಿ ಅಧ್ಯಯನ ಮಾಡುತ್ತಿರುವಾಗ ಜೀವ ರಸಾಯನ ಶಾಸ್ತ್ರ ಕೇವಲ ಒಂದು ಸಣ್ಣ ವಿಷಯವಾಗಿತ್ತು, ಅಷ್ಟೊಂದು ಪ್ರಾಶಸ್ತ್ಯ ಪಡೆದಿರಲಿಲ್ಲ. ಆದರೆ ಈಗಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದ ಪ್ರತಿರಂಗದಲ್ಲೂ ಜೀವರಸಾಯನ ಶಾಸ್ತ್ರ ಮಹತ್ವ ಪಡೆದಿದೆ. ಹಾಗೆಯೇ ಅತಿ 179 ನೋಬೆಲ್ ಪ್ರಶಸ್ತಿಯೂ ರಸಾಯನ ಶಾಸ್ತ್ರ ವಿಭಾಗಕ್ಕೆ ಸಂದಿದ್ದು ಜೀವ ರಸಾಯನ ಶಾಸ್ತ್ರಕ್ಕೂ ಮಹತ್ವ ಬಂದಿದೆ ಎಂದು ಹೇಳಿದರು.

ಈ ಶತಮಾನದ ಆರಂಭದಲ್ಲಿ ಸುಮಾರು 70 ಮಿಲಿಯನ್ ರೋಗಿಗಳು ಎರಡು ವಿಧದ ಮಧುಮೇಹಕ್ಕೆ ತುತ್ತಾಗಿದ್ದಾರೆ. ನಿರ್ಲಕ್ಷ್ಯ ತಾಳಿದರೆ 2030ಕ್ಕೆ ಅದು ದುಪ್ಪಟ್ಟಗುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದ್ದರೂ ಬಡತನ ಕಾಡಿದಂತೆ ಮಧುಮೇಹವೂ ಕಾಡ ತೊಡಗಿದೆ. ಒಬೆಸಿಟಿಗಾಗಿಯೇ ಅಮೇರಿಕಾದಲ್ಲಿವಾರ್ಷಿಕ ಸುಮಾರು 20 ಬಿಲಿಯನ್ ಡಾಲರ್ ವ್ಯಯಿಸಲಾಗುತ್ತಿದೆ ಎಂದು ನುಡಿದರು.

ವೈದ್ಯಕೀಯ ಜೀವ ರಸಾಯನ ಶಾಸ್ತ್ರ ಸಂಘದ ಕರ್ನಾಟಕ ರಾಜ್ಯ ಘಟಕಾಧ್ಯಕ್ಷ ಡಾ. ಮಂಜುನಾಥ್ ಎಂ. ತೆಂಬಾಡ್ ಮಾತನಾಡಿ ಪ್ರಸ್ತುತ ಸಂಘದಲ್ಲಿ 353 ಸದಸ್ಯರಿದ್ದು, ಆಂಬಿಸಿಕಾನ್ ಅಡಿಯಲ್ಲಿ ಐದು ರಾಜ್ಯಮಟ್ಟದ ಸಮ್ಮೇಳನ, ಪ್ರಥಮ ವರ್ಷದ ಎಂಬಿಬಿಎಸ್‍ನ ವಿದ್ಯಾರ್ಥಿಗಳಿಗಾಗಿ ಮೂರು ರಾಜ್ಯ ಮಟ್ಟದ ಕ್ವಿಝ್ ಕಾಂಪಿಟೇಶನ್ ಹಾಗೂ ಹಲವು ಮುಂದುವರಿಕೆ ಶಿಕ್ಷಣ ಕಾರ್ಯಗಾರ ನಡೆಸಲಾಗಿದೆ ಎಂದು ನುಡಿದರು.

ಶಿವಮೊಗ್ಗ ಮೆಡಿಕಲ್ ಇನ್‍ಸ್ಟಿಟ್ಯೂಟ್‍ನ ಜೀವ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗುರುಪಾದಪ್ಪ, ಕೆಎಂಸಿ ಒಬ್ಸರ್ವರ್ ಡಾ. ನಾಗರಾಜಪ್ಪ, ಕ್ಷೇಮ ವೈಸ್ ಡೀನ್ ಡಾ. ಜಯಪ್ರಕಾಶ್ ಶೆಟ್ಟಿ ಹಾಗೂ ಡಾ. ಅಮೃತ್ ಮಿರಾಜ್ಕರ್ ಉಪಸ್ಥಿತರಿದ್ದರು.

ಆಂಬಿಸಿಕಾನ್-2018 ಚೇರ್‍ಮೆನ್ ಪ್ರೊ. ಡಾ. ಪಿ.ಎಸ್. ಪ್ರಕಾಶ್ ಸ್ವಾಗತಿಸಿದರು. ಕ್ಷೇಮ ಜೀವರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ಆಂಬಿಸಿಕಾನ್-2018 ಸಮ್ಮೇಳನ ಸಂಘಟಕಿ ಪ್ರೊ. ಡಾ. ಸುಕನ್ಯಾ ಶೆಟ್ಟಿ ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ. ಶ್ರೀನಿಧಿ ರೈ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X