ರಾಜೀನಾಮೆ ನೀಡುವುದಿಲ್ಲ: ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ
ಬೆಂಗಳೂರು, ಸೆ.20: ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು ಸತ್ಯ. ಆದರೆ, ಮಾತಿಗೆ ಗೌರವ ಕೊಟ್ಟು ನನ್ನ ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದೇನೆ ಎಂದು ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡು ವರ್ಷ ಸಮ್ಮನಿರುವಂತೆ ಹೇಳಿದ್ದಾರೆ. ಆದುದರಿಂದ, ರಾಜೀನಾಮೆ ನೀಡುವುದಿಲ್ಲ ಎಂದರು.
ಬಿಜೆಪಿ ನಾಯಕರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನನಗೆ ಯಾವ ಆಮಿಷವನ್ನು ಒಡ್ಡಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಗೆದ್ದಿದ್ದೇನೆ, ಜೆಡಿಎಸ್ ಪಕ್ಷದಲ್ಲೆ ಇರುತ್ತೇನೆ ಎಂದು ಕೃಷ್ಣಾರೆಡ್ಡಿ ಸ್ಪಷ್ಟಣೆ ನೀಡಿದರು.
Next Story