Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಳೆ ಸಂಜೆ ಆಗಸದಲ್ಲಿ ಅತ್ಯಂತ ಪ್ರಕಾಶಮಾನ...

ನಾಳೆ ಸಂಜೆ ಆಗಸದಲ್ಲಿ ಅತ್ಯಂತ ಪ್ರಕಾಶಮಾನ ‘ಶುಕ್ರಗ್ರಹ’

ವಾರ್ತಾಭಾರತಿವಾರ್ತಾಭಾರತಿ20 Sept 2018 8:37 PM IST
share
ನಾಳೆ ಸಂಜೆ ಆಗಸದಲ್ಲಿ ಅತ್ಯಂತ ಪ್ರಕಾಶಮಾನ ‘ಶುಕ್ರಗ್ರಹ’

ಉಡುಪಿ, ಸೆ.20: 18 ತಿಂಗಳಿಗೊಮ್ಮೆ ಪಶ್ಚಿಮ ಆಕಾಶದಲ್ಲಿ ಸಂಜೆ ಅತ್ಯಂತ ಪ್ರಕಾಶಮಾನವಾಗಿ ಹೊಳೆಯುವ ಶುಕ್ರಗ್ರಹ, ನಾಳೆ ಸಂಜೆ (ಸೆ.21) ತನ್ನೆಲ್ಲಾ ಪ್ರಭೆಯೊಂದಿಗೆ ಆಗಸದಲ್ಲಿ ಬೆಳಗಲಿದ್ದಾನೆ. ಸೂರ್ಯನ ಸುತ್ತ ತಿರುಗುತ್ತಿರುವ ಶುಕ್ರ, ಪ್ರತಿ 18 ತಿಂಗಳಿಗೊಮ್ಮೆ ಭೂಮಿಗೆ ಅತೀ ಸಮೀಪ ಬರುತ್ತದೆ. ನಾಳೆ ಸಂಜೆ ಈ ಕ್ಷಣ ಬರಲಿದೆ ಎಂದು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ನಗರದ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಸಂಚಾಲಕರಾದ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

ಕಳೆದ ಜ.9ರಿಂದ ಹೊಳೆವ ಶುಕ್ರಗ್ರಹ ಸಂಜೆಯ ಆಕಾಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಇದು ನಾಳೆ ಹೆಚ್ಚಿನ ಪ್ರಕಾಶದೊಂದಿಗೆ ಹೊಳೆಯಲಿದೆ. ಅಕ್ಟೋಬರ್ ಮೊದಲ ವಾರದವರೆಗೆ ಸಂಜೆಯಾಕಾಶದಲ್ಲಿ ಕಂಡು ನಂತರ ಶುಕ್ರ ಗ್ರಹ ಕಣ್ಮರೆಯಾಗುತ್ತದೆ. ಮತ್ತೆ ನವೆಂಬರ್ ಮಧ್ಯ ಭಾಗದಲ್ಲಿ ಬೆಳಗಿನ ಜಾವ ಪೂರ್ವ ಆಕಾಶದಲ್ಲಿ ಶುಕ್ರ ಗೋಚರಿಸಲಿದ್ದಾನೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೂರ್ಯನಿಂದ ಶುಕ್ರಗ್ರಹ ಸುಮಾರು 11 ಕೋಟಿ ಕಿ.ಮೀ. ದೂರದಲ್ಲಿ ಸುತ್ತುತ್ತಿದೆ. ಅದೇ ರೀತಿ ಭೂಮಿ ಸೂರ್ಯನಿಂದ ಸುಮಾರು 15 ಕೋಟಿ ಕಿ. ಮೀ. ದೂರದಲ್ಲಿ ಸುತ್ತುತ್ತಿದೆ. ಆದರೆ ಈ ಭೂಮಿ ಮತ್ತು ಶುಕ್ರಗ್ರಹಗಳ ದೂರ ಯಾವಾಗಲೂ ಒಂದೇ ಸಮನಾಗಿರುವುದಿಲ್ಲ. 18 ತಿಂಗಳಿಗೊಮ್ಮೆ ಇವುಗಳ ನಡುವಿನ ಅಂತರ ಸುಮಾರು 4.5 ಕೋಟಿ ಕಿ.ಮೀ.ಗೆ ಇಳಿದು ಎರಡೂ ಗೃಹಗಳು ಅತ್ಯಂತ ಸನಿಹಕ್ಕೆ ಬರುತ್ತವೆ. ಆಗ ಶುಕ್ರ ದೊಡ್ಡದಾಗಿ ಕಾಣಿಸುತ್ತದೆ. ಹಾಗೆಯೇ 18 ತಿಂಗಳಿಗೊಮ್ಮೆ ಶುಕ್ರ, ಭೂಮಿಯಿಂದ ಅತೀ ದೂರದಲ್ಲಿ ಅಂದರೆ ಸುಮಾರು 26 ಕೋಟಿ ಕಿ.ಮೀ. ದೂರದಲ್ಲಿದ್ದು, ಆಗ ಅತಿ ಚಿಕ್ಕದಾಗಿ ಭೂಮಿಯ ಮೇಲೆ ಕಾಣಿಸಿಕೊಳ್ಳುತ್ತದೆ.
ಶುಕ್ರಗ್ರಹ ಹೊಳೆಯುವುದು ಅದರ ಸ್ವಂತ ಪ್ರಭೆಯಿಂದ ಅಲ್ಲ. ಸೂರ್ಯ ನಿಂದ ಬಿದ್ದ ಬೆಳಕು ಪ್ರತಿಫಲಿಸಿ ಹೊಳೆದಂತೆ ಕಾಣುವುದು. ಇನ್ನು ಭೂಮಿಗೆ ಸಮೀಪ ಬರುವಾಗ ಹೊಳೆಯುವ ಸಂಪೂರ್ಣ ಭಾಗ ಭೂಮಿಗೆ, ಕಾಣಿಸುವುದಿಲ್ಲವಾದ್ದರಿಂದ ಅಂಶಿಕವಾಗಿ ಶುಕ್ಲಪಕ್ಷದ ಚಂದ್ರನಂತೆ ದೂರದರ್ಶಕದಲ್ಲಿ ಕಾಣಿಸುತ್ತದೆ.

ಸೆ.21ರಂದು ಶುಕ್ರನ ಕೇವಲ ಶೇ.25ರಷ್ಟು ಹೊಳೆಯುವ (illuminated) ಭಾಗ ನಮಗೆ ಕಾಣಿಸಿದರೂ, ಭೂಮಿಗೆ ಅತೀ ಸಮೀಪ ಬರುತ್ತಿರುವುದರಿಂದ ದೊಡ್ಡದಾಗಿ ಕಾಣಿಸಿ, 18 ತಿಂಗಳಿನಲ್ಲೇ ಅತೀಹೆಚ್ಚಿನ ಪ್ರಕಾಶದಿಂದ ಕಂಗೊಳಿಸುತ್ತದೆ. ಈಗ ಶುಕ್ರನೊಂದಿಗೆ ಗುರುಗ್ರಹ, ಶನಿಗ್ರಹ ಹಾಗೂ ಮಂಗಳ ಸಹ ಚೆನ್ನಾಗಿ ಕಾಣುತ್ತಿವೆ. 2 ವರ್ಷಕ್ಕೊಮ್ಮೆ ಕೆಲತಿಂಗಳು ಭೂಮಿಗೆ ಸಮೀಪವಿರುವ ಮಂಗಳ ಈಗ ಭೂಮಿಗೆ ಸಮೀಪಿಸಿ ಹಿಂದಿರುಗುತ್ತಿದೆ. ಹೀಗಾಗಿ ಕೆಂಬಣ್ಣದಿಂದ ಸುಂದರವಾಗಿ ಹೊಳೆಯುತ್ತಿದೆ. 16 ವರ್ಷಗಳಲ್ಲಿ ಕೆಲವರ್ಷ ತನ್ನ ಬಳೆಗಳನ್ನು ಭೂಮಿಗೆ ತೋರಿಸುವ ಶನಿಗೃಹ ಈಗ, ಅತಿ ಸುಂದರವಾಗಿ ಕಾಣಿಸುತ್ತಿದೆ. 2024ರಲ್ಲಿ ಶನಿಯ ಬಳೆಗಳು ನಮಗೆ ಕಾಣಿಸುವುದೇ ಇಲ್ಲ ಎಂದು ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X