Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚತ್ತೀಸ್‌ಗಡದಲ್ಲಿ ಕಾಂಗ್ರೆಸ್‌ಗೆ...

ಚತ್ತೀಸ್‌ಗಡದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟ ಮಾಯಾವತಿ: ಜನತಾ ಕಾಂಗ್ರೆಸ್‌ ಜೊತೆ ಮೈತ್ರಿ

ವಾರ್ತಾಭಾರತಿವಾರ್ತಾಭಾರತಿ20 Sept 2018 9:16 PM IST
share
ಚತ್ತೀಸ್‌ಗಡದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟ ಮಾಯಾವತಿ: ಜನತಾ ಕಾಂಗ್ರೆಸ್‌ ಜೊತೆ ಮೈತ್ರಿ

ರಾಯ್‌ಪುರ, ಸೆ.20: ಚತ್ತೀಸ್‌ಗಡದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಿರುವ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ಅಜಿತ್ ಜೋಗಿಯವರ ಜನತಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಎಸ್‌ಪಿ 35 ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಜನತಾ ಕಾಂಗ್ರೆಸ್ 55 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ನಾವು ಗೆದ್ದರೆ ಜೋಗಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಯಾವತಿ ತಿಳಿಸಿದ್ದಾರೆ. ಮೈತ್ರಿ ಕುರಿತು ಮಾತನಾಡಿರುವ ಅಜಿತ್ ಜೋಗಿ, ಬಿಜೆಪಿ ಕಳೆದ 15 ವರ್ಷಗಳಿಂದ ಚತ್ತೀಸ್‌ಗಡದಲ್ಲಿ ಆಡಳಿತ ನಡೆಸಿದೆ. ಆದರೆ ಅಧಿಕಾರ, ಹಣ ಮತ್ತು ಕಾನೂನನ್ನು ದುರುಪಯೋಗಪಡಿಸಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಈಗ ನಾವು ಮೈತ್ರಿ ಮಾಡಿಕೊಂಡಿದ್ದೇವೆ. ನಾವು ಮತ್ತು ಮಾಯಾವತಿಯವರು ಸೇರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಚತ್ತೀಸ್‌ಗಡ, ರಾಜಸ್ಥಾನ, ಮಧ್ಯಪ್ರದೇಶ, ಮಿಝೋರಾಂ ಮತ್ತು ತೆಲಂಗಾಣದಲ್ಲಿ ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ಗೆ ಆಘಾತ

ಮಧ್ಯಪ್ರದೇಶದಲ್ಲಿ ಕಳೆದ ಐದು ತಿಂಗಳಿನಿಂದ ಕಾಂಗ್ರೆಸ್ ಬಿಎಸ್‌ಪಿ ಜೊತೆ ಮೈತ್ರಿ ಮಾತುಕತೆ ನಡೆಸುತ್ತಿದೆ. ಆದರೆ ಇಲ್ಲಿ ಈ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ತನ್ನ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಾಯಾವತಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ನೀಡಿದ್ದಾರೆ. ಈ ಪೈಕಿ ಕೆಲವು ಸ್ಥಾನಗಳು ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಜ್ಯೋತಿರಾಧಿತ್ಯ ಸಿಂಧ್ಯಾ ಪ್ರಾಬಲ್ಯ ಹೊಂದಿರುವ ಮೊರೆನ ಮತ್ತು ಶಿವಪುರಿಯಲ್ಲಿದೆ. ಮಾಯಾವತಿ ಈ ರೀತಿ ಮಾಡಿದ್ದಾರೆ ಎಂದು ತಿಳಿದಿಲ್ಲ. ಈ ಬೆಳವಣಿಗೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಈಗಲೂ ನಾವು ಬಿಎಸ್‌ಪಿ ಜೊತೆ ಮಾತುಕತೆ ಮುಂದುವರಿಸಿದ್ದೇವೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X