Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನ 59 ಶೇ. ಉಗ್ರ ದಾಳಿಗಳು...

ಜಗತ್ತಿನ 59 ಶೇ. ಉಗ್ರ ದಾಳಿಗಳು ನಡೆದದ್ದು ಏಶ್ಯದ 5 ದೇಶಗಳಲ್ಲಿ

ಈ ಪಟ್ಟಿಯಲ್ಲಿದೆ ಭಾರತ

ವಾರ್ತಾಭಾರತಿವಾರ್ತಾಭಾರತಿ20 Sept 2018 10:11 PM IST
share
ಜಗತ್ತಿನ 59 ಶೇ. ಉಗ್ರ ದಾಳಿಗಳು ನಡೆದದ್ದು ಏಶ್ಯದ 5 ದೇಶಗಳಲ್ಲಿ

ವಾಶಿಂಗ್ಟನ್, ಸೆ. 20: 2017ರಲ್ಲಿ ಪ್ರಪಂಚದಾದ್ಯಂತ ನಡೆದ ಎಲ್ಲ ಭಯೋತ್ಪಾದಕ ದಾಳಿಗಳ ಸುಮಾರು 59 ಶೇಕಡ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಏಶ್ಯದ ಐದು ದೇಶಗಳಲ್ಲಿ ಸಂಭವಿಸಿದೆ ಎಂದು ಅಮೆರಿಕದ ವರದಿಯೊಂದು ಗುರುವಾರ ತಿಳಿಸಿದೆ.

ನಿರಂತರ ಬಾಂಬ್ ದಾಳಿಗಳು ಸಂಭವಿಸುವ ಇತರ ಮೂರು ದೇಶಗಳೆಂದರೆ- ಅಫ್ಘಾನಿಸ್ತಾನ ಇರಾಕ್ ಮತ್ತು ಫಿಲಿಪ್ಪೀನ್ಸ್.

ಕಳೆದ ವರ್ಷ ಜಗತ್ತಿನಾದ್ಯಂತ ನಡೆದ ಭಯೋತ್ಪಾದಕ ದಾಳಿಗಳ ಸಂಖ್ಯೆಯಲ್ಲಿ 23 ಶೇಕಡ ಕಡಿತವಾಗಿದೆ. ಅದೇ ವೇಳೆ, ಭಯೋತ್ಪಾದಕ ದಾಳಿಗಳಿಂದ ನಡೆದ ಒಟ್ಟು ಸಾವಿನ ಪ್ರಮಾಣದಲ್ಲೂ 27 ಶೇಕಡ ಕಡಿತವಾಗಿದೆ ಎಂದು ವರದಿ ತಿಳಿಸಿದೆ.

 ಭಯೋತ್ಪಾದಕ ಹಿಂಸಾಚಾರದಲ್ಲಿ ಆಗಿರುವ ಕಡಿತಕ್ಕೆ ಪ್ರಧಾನ ಕಾರಣ ಇರಾಕ್‌ನಲ್ಲಿ ಬಾಂಬ್ ದಾಳಿಗಳು ಕಡಿಮೆಯಾಗಿರುವುದು ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಭಯೋತ್ಪಾದನೆ ನಿಗ್ರಹ ಸಮನ್ವಯಕಾರ ನಥನ್ ಸೇಲ್ಸ್ ಗುರುವಾರ ಪತ್ರಕರ್ತರೊಂದಿಗೆ ನಡೆಸಿದ ಕಾನ್ಫರೆನ್ಸ್ ಕರೆಯ ಮೂಲಕ ಹೇಳಿದರು.

ಅದೇ ವೇಳೆ, ಭಯೋತ್ಪಾದಕ ದಾಳಿಗಳಲ್ಲಿ ಸಂಭವಿಸಿದ ಸಾವುಗಳ 70 ಶೇಕಡ 5 ದೇಶಗಳಲ್ಲಿ ಸಂಭವಿಸಿದೆ. ಅವುಗಳೆಂದರೆ- ಅಫ್ಘಾನಿಸ್ತಾನ, ಇರಾಕ್, ನೈಜೀರಿಯ, ಸೊಮಾಲಿಯ ಮತ್ತು ಸಿರಿಯ.

ಉಗ್ರ ಗುಂಪುಗಳ ವಿರುದ್ಧ ಪಾಕ್ ಕ್ರಮವಿಲ್ಲ

ಪಾಕಿಸ್ತಾನದಲ್ಲಿ ನೆಲೆಯೂರಿ ವಿದೇಶಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವ ಭಯೋತ್ಪಾದಕ ಗುಂಪುಗಳ ವಿರುದ್ಧ ಪಾಕಿಸ್ತಾನ ಈಗಲೂ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವರದಿ ಹೇಳಿದೆ.

ಹಕ್ಕಾನಿ ನೆಟ್‌ವರ್ಕ್, ಅಫ್ಘಾನ್ ತಾಲಿಬಾನ್ ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಮುಂತಾದ ಭಯೋತ್ಪಾದಕ ಸಂಘಟನೆಗಳು ಈಗಲೂ ಪಾಕಿಸ್ತಾನದಲ್ಲಿ ಭದ್ರ ನೆಲೆಗಳನ್ನು ಹೊಂದಿವೆ ಎಂದು ವರದಿ ಆರೋಪಿಸಿದೆ.

ಲಷ್ಕರೆ ತಯ್ಯಬ ಮತ್ತು ಅದರೊಂದಿಗೆ ನಂಟು ಹೊಂದಿರುವ ಭಯೋತ್ಪಾದಕ ಗುಂಪುಗಳ ಹಣಕಾಸು ಮೂಲವನ್ನು ಪರಿಶೀಲಿಸಲು ಹಾಗೂ ದೇಶದ ಹಣಕಾಸು ಸೇವೆಗಳನ್ನು ಪಡೆಯುವುದನ್ನು ನಿಲ್ಲಿಸಲು ಪಾಕಿಸ್ತಾನಕ್ಕೆ ಇನ್ನೂ ಸಾಧ್ಯವಾಗಿಲ್ಲ ಎಂದು ಟ್ರಂಪ್ ಆಡಳಿತದ ಎರಡನೇ ‘ಉಗ್ರ’ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X