Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇರುಪೇಟೆಯಲ್ಲಿ ರಕ್ತಪಾತದ ಬಳಿಕ ಮರು...

ಶೇರುಪೇಟೆಯಲ್ಲಿ ರಕ್ತಪಾತದ ಬಳಿಕ ಮರು ಚೇತರಿಕೆ: 1,500 ಅಂಶಗಳಷ್ಟು ಹೊಯ್ಡಾಡಿದ ಸೆನ್ಸೆಕ್ಸ್

ವಾರ್ತಾಭಾರತಿವಾರ್ತಾಭಾರತಿ21 Sept 2018 7:29 PM IST
share
ಶೇರುಪೇಟೆಯಲ್ಲಿ ರಕ್ತಪಾತದ ಬಳಿಕ ಮರು ಚೇತರಿಕೆ: 1,500 ಅಂಶಗಳಷ್ಟು ಹೊಯ್ಡಾಡಿದ ಸೆನ್ಸೆಕ್ಸ್

ಹೊಸದಿಲ್ಲಿ,ಸೆ.21: ಭಾರತೀಯ ಶೇರು ಮಾರುಕಟ್ಟೆ ಶುಕ್ರವಾರ ನಾಟಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಿತ್ತು. ಮಧ್ಯಂತರ ವಹಿವಾಟಿನಲ್ಲಿ ಬಾಂಬೆ ಶೇರು ವಿನಿಮಯ ಕೇಂದ್ರ(ಬಿಎಸ್‌ಇ)ದ ಸೂಚ್ಯಂಕ ಸೆನ್ಸೆಕ್ಸ್ ದಿಢೀರನೆ 1,100 ಅಂಶಗಳ ಕುಸಿತ ದಾಖಲಿಸಿದ್ದು, 1495.60 ಅಂಶಗಳಷ್ಟು ಹೊಯ್ಡಾಡಿ ಹೂಡಿಕೆದಾರರಿಗೆ ನಡುಕ ಹುಟ್ಟಿಸಿತ್ತು.

ಮಧ್ಯಂತರದ ವಹಿವಾಟಿನಲ್ಲಿ ದಿನದ ಕನಿಷ್ಠ ಮಟ್ಟವಾದ 35,993.64ಕ್ಕೆ ಕುಸಿದಿದ್ದ ಸೆನ್ಸೆಕ್ಸ್ ಶೀಘ್ರವೇ ಚೇತರಿಸಿಕೊಂಡು ಹೆಚ್ಚಿನ ನಷ್ಟವನ್ನು ಭರ್ತಿ ಮಾಡಿಕೊಂಡಿತು. ಅಂತಿಮವಾಗಿ 279.62 ಅಂಶಗಳ ನಷ್ಟದೊಂದಿಗೆ 36,841.60ಕ್ಕೆ ದಿನದಾಟವನ್ನು ಮುಗಿಸಿತು.

ಅತ್ತ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ದ ಸೂಚ್ಯಂಕ ನಿಫ್ಟಿ ಕೂಡ ಮಧ್ಯಂತರ ವಹಿವಾಟಿನಲ್ಲಿ 11,000ಕ್ಕೂ ಕೆಳಕ್ಕೆ ಪತನಗೊಂಡಿದ್ದು, ಅಂತಿಮವಾಗಿ 91.25 ಅಂಶಗಳ ನಷ್ಟದೊಡನೆ 11,143.10ಕ್ಕೆ ಮುಕ್ತಾಯ ಗೊಂಡಿತು.

ಮಾರುಕಟ್ಟೆ ಬೆಳಿಗ್ಗೆ ಸುಮಾರು ಶೇ.1ರಷ್ಟು ಏರಿಕೆಯೊಂದಿಗೆ ಧನಾತ್ಮಕವಾಗಿಯೇ ಆರಂಭಗೊಂಡಿದ್ದು,ಒಂದು ಹಂತದಲ್ಲಿ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಶಗಳ ಏರಿಕೆಯನ್ನು ದಾಖಲಿಸಿತ್ತು.

ಮೂಲಸೌಕರ್ಯ ಹಣಕಾಸು ಸಂಸ್ಥೆಯಾಗಿರುವ ಐಎಲ್‌ಆ್ಯಂಡ್‌ಎಫ್‌ಎಸ್ ನಲ್ಲಿಯ ಬಿಕ್ಕಟ್ಟು ಮಾರುಕಟ್ಟೆಯ ಕುಸಿತಕ್ಕೆ ಕಾರಣವಾಗಿತ್ತು ಎಂದು ಮಾರುಕಟ್ಟೆ ವಿಶ್ಲೇಷಕರು ಬೆಟ್ಟು ಮಾಡಿದ್ದಾರೆ.

ಐಎಲ್‌ಆ್ಯಂಡ್‌ಎಫ್‌ಎಸ್ ತೀವ್ರ ಹಣಕಾಸು ಬಿಕ್ಕಟಿಗೆ ಸಿಲುಕಿದ್ದು, 100ಕೋ.ರೂ.ಗಳ ಸಾಲ ಮರುಪಾವತಿಸುವಲ್ಲಿ ವಿಫಲಗೊಂಡಿದೆ. ಆರ್‌ಬಿಐ ಕಂಪನಿಯ ಮೇಲೆ ಕಣ್ಣಿಟ್ಟಿದೆ. ಡಿಎಚ್‌ಎಫ್‌ಸಿ,ಕ್ಯಾನ್ ಫಿನ್ ಹೋಮ್ಸ್‌ನಂತಹ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಶೇರುಗಳೂ ಶುಕ್ರವಾರ ಶೇ.55ರವರೆಗೆ ಕುಸಿದಿವೆ.

ಔಷಧಿ ಮತ್ತು ಸರಕಾರಿ ಬ್ಯಾಂಕುಗಳ ಕ್ಷೇತ್ರಗಳ ಶೇರುಗಳೂ ಕುಸಿತವನ್ನು ಕಂಡಿವೆ.

ಎಸ್ ಬ್ಯಾಂಕ್‌ನ ಸಿಇಒ ಮತ್ತು ಎಂಡಿ ರಾಣಾ ಕಪೂರ್ ಅವರ ಅಧಿಕಾರಾವಧಿಯನ್ನು ಆರ್‌ಬಿಐ ಮೊಟಕುಗೊಳಿಸಿದ ಹಿನ್ನೆಲೆಯಲ್ಲಿ ಅದರ ಶೇರುಗಳು ಶೇ.27.71ರಷ್ಟು ನಷ್ಟವನ್ನು ಅನುಭವಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X