Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮಠದ ‘ಲಕ್ಷ್ಮೀಶ’ ಸಾಕಾನೆ...

ಉಡುಪಿ ಮಠದ ‘ಲಕ್ಷ್ಮೀಶ’ ಸಾಕಾನೆ ಮತ್ತಿಗೋಡಿನಲ್ಲಿ ಸಾವು

ವಾರ್ತಾಭಾರತಿವಾರ್ತಾಭಾರತಿ21 Sept 2018 10:11 PM IST
share
ಉಡುಪಿ ಮಠದ ‘ಲಕ್ಷ್ಮೀಶ’ ಸಾಕಾನೆ ಮತ್ತಿಗೋಡಿನಲ್ಲಿ ಸಾವು

ಉಡುಪಿ, ಸೆ.21: ಸುಮಾರು 16 ವರ್ಷಗಳ ಹಿಂದೆ ಉಡುಪಿಯಲ್ಲಿ ಮದವೇರಿ ದಾಂಧಲೆ ನಡೆಸಿ ಇಡೀ ನಗರವನ್ನು ಬೆಚ್ಚಿಬೀಳಿಸಿದ್ದ ಶಿರೂರು ಮಠದ ‘ಲಕ್ಷ್ಮೀಶ’ ಸಾಕಾನೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ಸಾಕಾನೆ ಶಿಬಿರದ ಕಲ್ಲಳ್ಳ ವಲಯದಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

1993ರಲ್ಲಿ ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯ ಮನವಿಯಂತೆ ಅವರ ಪರ್ಯಾಯ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಶಿವಮೊಗ್ಗ ಸಕ್ರೆಬೈಲಿನಲ್ಲಿದ್ದ ಲಕ್ಷ್ಮೀಶನನ್ನು ಮಠಕ್ಕೆ ನೀಡಿದ್ದರು. 2002ರಲ್ಲಿ ಮಾವುತನ ಕಿರುಕುಳದಿಂದ ಸಿಟ್ಟಿಗೆದ್ದ ಲಕ್ಷ್ಮೀಶ ಇಡೀ ಉಡುಪಿ ನಗರದಲ್ಲಿ ಎರಡು ದಿನಗಳ ಕಾಲ ದಾಂಧಲೆ ಎಬ್ಬಿಸಿ, ಹಲವು ವಾಹನಗಳನ್ನು ಜಖಂಗೊಳಿಸಿತ್ತು. ಕೊನೆಗೆ ಅರವಳಿಕೆ ಮದ್ದನ್ನು ಶೂಟ್ ಮಾಡುವ ಮೂಲಕ ಲಕ್ಷ್ಮೀಶನ ಪ್ರಜ್ಞೆತಪ್ಪಿಸಿ ನಿಯಂತ್ರಣಕ್ಕೆ ತರಲಾಗಿತ್ತು.

ಬಳಿಕ ಹಿರಿಯಡ್ಕದಲ್ಲಿರುವ ಶಿರೂರು ಮೂಲ ಮಠಕ್ಕೆ ಕೊಂಡೊಯ್ದು ಸೂಕ್ತ ಚಿಕಿತ್ಸೆ ನೀಡಲಾಯಿತು. ಗುಣಮುಖನಾದ ಲಕ್ಷ್ಮೀಶನನ್ನು ಶಿರೂರು ಸ್ವಾಮೀಜಿಯ ಸೂಚನೆಯಂತೆ ಉಪ್ಪಿನಂಗಡಿಯ ಕರುಣಾಕರ ಪೂಜಾರಿ ಸಾಕಿದರು. ಮರ ಸಾಗಾಟ, ದೇವಸ್ಥಾನ, ಶುಭ ಕಾರ್ಯಕ್ರಮಗಳಿಗೆ ಲಕ್ಷ್ಮೀಶನನ್ನು ಕಳುಹಿಸಲಾಗುತ್ತಿತ್ತು. 2012ರ ಶಿರೂರು ಸ್ವಾಮೀಜಿಯ ಪರ್ಯಾಯ ಅವಧಿಯಲ್ಲಿ ಮತ್ತೆ ಲಕ್ಷ್ಮೀಶನನ್ನು ಉಡುಪಿ ಮಠಕ್ಕೆ ತಂದು ಒಂದು ವಾರ ಕಾಲ ಇರಿಸಿ, ಮತ್ತೆ ಉಪ್ಪಿನಂಗಡಿಗೆ ಕೊಂಡೊಯ್ಯಲಾಗಿತ್ತು.

2013ರಲ್ಲಿ ಪುತ್ತೂರಿನಲ್ಲಿ ಮೇವು ತಿನ್ನಿಸಲು ಲಾರಿಯಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಲಕ್ಷ್ಮೀಶ ಚಾಲಕನ ಮೇಲೆ ದಾಳಿ ನಡೆಸಿತ್ತು. ಬಳಿಕ ಅರಿವಳಿಕೆ ಮದ್ದಿನ ಮೂಲಕ ಪ್ರಜ್ಞೆ ತಪ್ಪಿಸಲಾಯಿತು. ಈ ಸಂದರ್ಭ ಕೇರಳದ ಮಾವುತನ ಹಿಂಸೆಗೆ ಸಿಟ್ಟಿಗೆದ್ದ ಲಕ್ಷ್ಮೀಶ ಆತನ ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡಿತು. ಲಕ್ಷ್ಮೀಶ ಶಿವರಾಜ್ ಕುಮಾರ್ ಅಭಿನಯದ ಮಾದೇಶ ಸಿನೆಮಾದಲ್ಲೂ ನಟನೆ ಮಾಡಿತ್ತು.

ಲಕ್ಷ್ಮೀಶನ ಪುಂಡಾಟ ತಾಳಲಾರದೆ ಐದು ವರ್ಷಗಳ ಹಿಂದೆ ಅಂದರೆ 2013ರಲ್ಲಿ ಮತ್ತಿಗೋಡು ಶಿಬಿರಕ್ಕೆ ಒಪ್ಪಿಸಿ ಅಲ್ಲಿಯೇ ಆಶ್ರಯ ನೀಡಲಾಯಿತು. 20 ದಿನಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ನಾಪತ್ತೆಯಾಗಿದ್ದ ಲಕ್ಷ್ಮೀಶ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮದವೇರಿದ್ದ ಲಕ್ಷ್ಮೀಶ ಕಾಡಾನೆಗಳ ಹಿಂಡಿನಲ್ಲಿ ಸೇರಿಕೊಂಡು ಗುದ್ದಾಡಿ ಗಾಯ ಮಾಡಿಕೊಂಡಿತ್ತೆನ್ನಲಾಗಿದೆ. ಇದರಿಂದ ಅಸ್ವಸ್ಥಗೊಂಡ ಲಕ್ಷ್ಮೀಶ ಎರಡು ದಿನಗಳ ಹಿಂದೆ ಮೃತಪಟ್ಟಿತ್ತೆಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2002ರಲ್ಲಿ ಉಡುಪಿಯಲ್ಲಿ ನಡೆದ ದಾಂಧಲೆಯ ಬಳಿಕ ಲಕ್ಷ್ಮೀಶ ಆನೆಯನ್ನು ನಾನೇ ಸಾಕಿದ್ದೇನೆ. 9-10ವರ್ಷಗಳ ನನ್ನ ಬಳಿ ಇದ್ದ ಆನೆಯನ್ನು 2013ರಲ್ಲಿ ಮತ್ತಿಗೋಡು ಶಿಬಿರಕ್ಕೆ ಒಪ್ಪಿಸಲಾಗಿತ್ತು. ಅಲ್ಲಿಯವರೆಗೆ ಆ ಆನೆ ಶಿರೂರು ಮಠದ ಹೆಸರಿನಲ್ಲೇ ಇತ್ತು. 33ವರ್ಷಗಳ ಕಾಲ ನಾನು ಒಟ್ಟು ಮೂರು ಆನೆಗಳನ್ನು ಸಾಕಿದ್ದೇನೆ. ಆದರೆ ಲಕ್ಷ್ಮೀಶನಂತಹ ಗುಣ ಇರುವ ಆನೆ ಮತ್ತೊಂದಿಲ್ಲ. ಮಾವುತರ ತಪ್ಪಿನಿಂದ ಲಕ್ಷ್ಮೀಶ ಕೆಲವು ಬಾರಿ ಪುಂಡಾಟಿಕೆ ನಡೆಸಿದೆ.
-ಕರುಣಾಕರ ಪೂಜಾರಿ, ಉಪ್ಪಿನಂಗಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X