Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಮಹಿಳಾ ಪೊಲೀಸ್ ಅಧಿಕಾರಿಗೆ ಸಚಿವ...

ದಲಿತ ಮಹಿಳಾ ಪೊಲೀಸ್ ಅಧಿಕಾರಿಗೆ ಸಚಿವ ಸಾ.ರಾ.ಮಹೇಶ್ ಅವಮಾನ: ದಸಂಸ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Sept 2018 10:49 PM IST
share
ದಲಿತ ಮಹಿಳಾ ಪೊಲೀಸ್ ಅಧಿಕಾರಿಗೆ ಸಚಿವ ಸಾ.ರಾ.ಮಹೇಶ್ ಅವಮಾನ: ದಸಂಸ ಆರೋಪ

ಮೈಸೂರು,ಸೆ.21: ದಲಿತ ಮಹಿಳಾ ಪೊಲೀಸ್ ಅಧಿಕಾರಿ ಬಿ.ಟಿ.ಕವಿತಾ ಅವರ ವರ್ಗಾವಣೆ ಆದೇಶವನ್ನು ಕೆಲವೇ ಗಂಟೆಗಳಲ್ಲಿ ರದ್ದುಮಾಡಿಸುವ ಮೂಲಕ ಓರ್ವ ದಲಿತ ಮಹಿಳೆಗೆ ಸಚಿವ ಸಾ.ರಾ.ಮಹೇಶ್ ಅಪಮಾನ ಮಾಡಿದ್ದಾರೆ ಎಂದು ದಸಂಸ ಮತ್ತು ರೈತ ಸಂಘದ ಮುಖಂಡರು ಆರೋಪ ಮಾಡಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮೈಸೂರು ನಗರಕ್ಕೆ ನೂತನ ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಬಿ.ಟಿ.ಕವಿತಾ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಸಚಿವ ಸಾ.ರಾ.ಮಹೇಶ್ ಅವರು ಕೆಲವೇ ಗಂಟೆಗಳಲ್ಲಿ ಅವರ ಆದೇಶವನ್ನು ರದ್ದುಗೊಳಿಸಿವುದರ ಮೂಲಕ ದಲಿತ ಮಹಿಳೆಗೆ ಅಪಮಾನ ಮಾಡಿದ್ದಾರೆ. ಅಧಿಕಾರ ಸ್ವೀಕರಿಸಿದ ಕವಿತಾ ಅವರಿಗೆ ಯಾವುದೇ ಜವಾಬ್ದಾರಿ ನೀಡದೆ ಪೊಲೀಸ್ ಅಯುಕ್ತರು ಸುಮಾರು 5 ಗಂಟೆಗಳ ಕಾಲ ಹಿರಿಯ ಅಧಿಕಾರಿಗಳ ಆದೇಶ ಬರುವವರೆಗೂ ಕಚೇರಿಯಲ್ಲೇ ಕುಳ್ಳಿರಿಸಿದ್ದಾರೆ. ನಂತರ ಮನೆಗೆ ಹೋದ ಕವಿತಾ ಅವರಿಗೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ದೂರವಾಣಿ ಮೂಲಕ ನೀವು ಕರ್ತವ್ಯಕ್ಕೆ ಬರಬೇಡಿ ನಿಮ್ಮ ವರ್ಗಾವಣೆ ರದ್ದಾಗಿದೆ ಎಂದು ಹೇಳಿದ್ದಾರೆ.

ಹಾಗಾದರೆ ನಿಯಮಾನುಸಾರ ವರ್ಗಾವಣೆ ಮಾಡಿದ್ದ ಆದೇಶವನ್ನು ರದ್ದುಪಡಿಸುವ ಅಗತ್ಯವೇನಿತ್ತು? ಅಧಿಕಾರ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ನಗರ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ ರಾವ್ ಅವರಿಗೆ ಸಚಿವ ಸಾ.ರಾ.ಮಹೇಶ್ ದೂರವಾಣಿ ಮೂಲಕ ಆಕೆಗೆ ಅಧಿಕಾರ ನೀಡಬೇಡಿ, ಸ್ವಲ್ಪ ತಡೆಯಿರಿ, ಅವರ ಬದಲಾವಣೆ ಮಾಡಬೇಕಿದೆ ಎಂದು ಹೇಳುವ ಅಗತ್ಯವೇನಿತ್ತು? ಹಾಗದರೆ ಕವಿತಾ ಅವರ ಮೇಲೆ ಸಾ.ರಾ.ಮಹೇಶ್ ಹಠಸಾಧಿಸಿರುವುದಾದರು ಯಾಕೆ? ದಲಿತ ಹೆಣ್ಣುಮಕ್ಕಳು ಉನ್ನತ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಬಾರದೆ ಎಂದು ಪ್ರಶ್ನಿಸಿದರು.

ರಾಜ್ಯ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದಲಿತರನ್ನು ಕಡೆಗಣಿಸುತ್ತಲೇ ಬಂದಿದೆ. ಬಡ್ತಿ ಮೀಸಲಾತಿ ಜಾರಿಮಾಡುವಂತೆ ರಾಷ್ಟ್ರಪತಿಗಳು ಅಂಕಿತಹಾಕಿದ್ದರೂ, ಮುಖ್ಯಮಂತ್ರಿಗಳು ಮಾತ್ರ ಜಾರಿಗೊಳಿಸಿದೆ ದಲಿತರನ್ನು ನಿರ್ಲಕ್ಷಿಸಿದ್ದಾರೆ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ದಲಿತ ಇಂಜಿನಿಯರ್ ಗಳ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಸಚಿವ ಸಾ.ರಾ.ಮಹೇಶ್ ದಲಿತ ಹೆಣ್ಣುಮಗಳಾದ ಬಿ.ಟಿ.ಕವಿತಾ ಅವರ ವರ್ಗಾವಾಣೆ ಆದೇಶವನ್ನು ರದ್ದುಪಡಿಸುವುದರ ಮೂಲಕ ದಲಿತರ ಮೇಲಿ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ ಎಂದು ದೂರಿದರು.

ಕೂಡಲೇ ಬಿ.ಟಿ.ಕವಿತಾ ಅವರನ್ನು ಮೈಸೂರು ನಗರದ ಉಪಪೊಲೀಸ್ ಆಯುಕ್ತರಾಗಿ ಮುಂದುವರೆಸಬೇಕು. ಇಲ್ಲದಿದ್ದರೆ ರೈತ ಸಂಘ, ದಲಿತ ಸಂಘರ್ಷ ಸಮಿತಿ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಮೈಸೂರು ತಾಲೂಕು ಅಧ್ಯಕ್ಷ ಪಿ.ಮರಂಕಯ್ಯ, ದಸಂಸ ಮುಖಂಡರಾದ ಎಡದೊರೆ ಮಹದೇವಯ್ಯ, ಚಕ್ರವರ್ತಿ, ಕೆ.ವಿ.ದೇವೇಂದ್ರ, ಮಹದೇವು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X