Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಸ್-400 ಕ್ಷಿಪಣಿ ಖರೀದಿಸಿದರೆ ಭಾರತದ...

ಎಸ್-400 ಕ್ಷಿಪಣಿ ಖರೀದಿಸಿದರೆ ಭಾರತದ ವಿರುದ್ಧವೂ ದಿಗ್ಬಂಧನ?

ಚೀನಾದ ವಿರುದ್ಧ ಮೊದಲ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ21 Sept 2018 11:21 PM IST
share
ಎಸ್-400 ಕ್ಷಿಪಣಿ ಖರೀದಿಸಿದರೆ ಭಾರತದ ವಿರುದ್ಧವೂ ದಿಗ್ಬಂಧನ?

ವಾಶಿಂಗ್ಟನ್, ಸೆ. 21: ರಶ್ಯದಿಂದ ಎಸ್-400 ರಕ್ಷಣಾ ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಖರೀದಿಸಿರುವುದಕ್ಕಾಗಿ ಚೀನಾ ಸೇನೆಯ ವಿರುದ್ಧ ಅಮೆರಿಕ ಆರ್ಥಿಕ ದಿಗ್ಬಂಧನಗಳನ್ನು ವಿಧಿಸಿದೆ. ಇದೇ ಎಸ್-400 ಕ್ಷಿಪಣಿಗಳನ್ನು ಖರೀದಿಸಲು ಭಾರತವೂ ಕಾಯುತ್ತಿದೆ.

ಹಾಗಾಗಿ, ಈ ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ಮುಂದಾಗಿರುವ ದೇಶಗಳು ತಮ್ಮ ನಿರ್ಧಾರದ ಬಗ್ಗೆ ‘ಇನ್ನೊಮ್ಮೆ ಯೋಚಿಸಬೇಕು’ ಎಂದು ಯಾವುದೇ ದೇಶವನ್ನು ಹೆಸರಿಸದೆ ಅಮೆರಿಕದ ಟ್ರಂಪ್ ಆಡಳಿತ ಹೇಳಿದೆ.

 ಅಮೆರಿಕದ ರಶ್ಯ ಸಂಬಂಧಿ ಕಾನೂನಿನಲ್ಲಿ ಈ ದಂಡನಾತ್ಮಕ ಅಂಶವಿದೆ. ಈ ಕಾನೂನಿನ ಪ್ರಕಾರ, ರಶ್ಯದ ಶಸ್ತ್ರ ತಯಾರಿಕಾ ಕಂಪೆನಿಗಳು, ಗುಪ್ತಚರ ಸಂಸ್ಥೆಗಳು ಮತ್ತು ಸೇನಾ ಘಟಕಗಳೊಂದಿಗೆ ಗಣನೀಯ ಪ್ರಮಾಣದ ವ್ಯವಹಾರಗಳನ್ನು ನಡೆಸಲು ಮುಂದಾಗುವ ಯಾರೇ ಆದರೂ ಅಮೆರಿಕದಿಂದ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

ಯುಕ್ರೇನ್ ಮೇಲೆ ದಾಳಿ ನಡೆಸಿರುವುದಕ್ಕಾಗಿ ಹಾಗೂ 2016ರ ಅಮೆರಿಕ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಿರುವುದಕ್ಕಾಗಿ ರಶ್ಯವನ್ನು ಶಿಕ್ಷಿಸಲು ಅಮೆರಿಕವು 2017ರಲ್ಲಿ ಕೋಂಬ್ಯಾಟಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ತ್ರೂ ಸ್ಯಾಂಕ್ಷನ್ಸ್ ಆ್ಯಕ್ಟ್ (ಸಿಎಎಟಿಎಸ್‌ಎ) ಎಂಬ ಕಾನೂನನ್ನು ಜಾರಿಗೆ ತಂದಿರುವುದನ್ನು ಸ್ಮರಿಸಬಹುದಾಗಿದೆ.

ಅಮೆರಿಕವು ಈ ಕಾನೂನಡಿಯಲ್ಲಿ ಪ್ರಥಮ ದಂಡನಾ ಕ್ರಮವನ್ನು ಚೀನಾದ ವಿರುದ್ಧ ತೆಗೆದುಕೊಂಡಿದೆ.

ಅಮೆರಿಕದ ದಂಡನೆಗೆ ಒಳಗಾಗಿರುವ ಚೀನಾದ ಸಂಸ್ಥೆ ಈಕ್ವಿಪ್‌ಮೆಂಟ್ ಡೆವಲಪ್‌ಮೆಂಟ್ ಡಿಪಾರ್ಟ್‌ಮೆಂಟ್ (ಇಡಿಡಿ) ಚೀನಾ ಸೇನೆಯ ಭಾಗವಾಗಿದೆ. ರಶ್ಯದಿಂದ ಎಸ್‌ಯು-35 ಯದ್ಧವಿಮಾನಗಳು ಮತ್ತು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಡಿಸೆಂಬರ್ ಮತ್ತು ಜನವರಿಯಲ್ಲಿ ಖರೀದಿಸಿರುವುದಕ್ಕಾಗಿ ಈ ದಂಡನಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಮೆರಿಕ ಹೇಳಿದೆ.

ಎಸ್-400 ಕ್ಷಿಪಣಿ ಖರೀದಿ ಗಂಭೀರ ವಿಷಯ: ಅಮೆರಿಕ

ಇತರ ಎಸ್-400 ಕ್ಷಿಪಣಿ ವ್ಯವಸ್ಥೆಯ ಸಂಭಾವ್ಯ ಖರೀದಿದಾರರ ವಿರುದ್ಧ ದಂಡನಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಇನ್ನೂ ಖಚಿತ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ಹೇಳಿದ್ದಾರೆ.

ಆದಾಗ್ಯೂ, ಈ ವಿಷಯದಲ್ಲಿ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

‘‘ಎಸ್-400ರಂಥ ಕ್ಷಿಪಣಿ ವ್ಯವಸ್ಥೆಗಳು ಪ್ರಮುಖ ಅಸ್ತ್ರಗಳಾಗಿವೆ ಹಾಗೂ ಇವುಗಳಿಗೆ ಸಿಎಎಟಿಎಸ್‌ಎ ಕಾನೂನು ಅನ್ವಯಿಸಬಹುದಾಗಿದೆ ಎಂಬುದನ್ನು ನಾವು ಸಂಬಂಧಪಟ್ಟವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದೇವೆ’’ ಎಂದು ಯಾವುದೇ ದೇಶವನ್ನು ಹೆಸರಿಸದೆ ಅವರು ಹೇಳಿದ್ದಾರೆ.

ವಿನಾಯಿತಿ ಕೋರಿದ ಭಾರತ

 ರಶ್ಯದಿಂದ 6 ಬಿಲಿಯ ಡಾಲರ್ (ಸುಮಾರು 43,500 ಕೋಟಿ ರೂಪಾಯಿ) ವೆಚ್ಚದಲ್ಲಿ ಐದು ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ಇದಕ್ಕಾಗಿ ಸಿಎಎಟಿಎಸ್‌ಎ ಕಾನೂನಿನಿಂದ ವಿನಾಯಿತಿ ನೀಡುವಂತೆ ಅದು ಅಮೆರಿಕವನ್ನು ಕೋರಿದೆ.

ಈ ಕಾನೂನಿನಡಿ ವಿಶೇಷ ವಿನಾಯಿತಿ ನೀಡುವ ಅಧಿಕಾರ ಅಮೆರಿಕದ ಅಧ್ಯಕ್ಷರಿಗಿದೆ.

ಈ ತಿಂಗಳ ಆದಿ ಭಾಗದಲ್ಲಿ ಹೊಸದಿಲ್ಲಿಯಲ್ಲಿ ಅಮೆರಿಕದ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ ಮತ್ತು ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಜೊತೆ ಭಾರತದ ವಿದೇಶ ಸಚಿವೆ ಸುಶ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಿದ 2+2 ಮಾತುಕತೆಯ ವೇಳೆ, ವಿನಾಯಿತಿ ನೀಡುವ ಪ್ರಸ್ತಾಪವನ್ನು ಭಾರತ ಮುಂದಿಟ್ಟಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X