Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮಹಲ್ ಗ್ರಾಮವನ್ನು ದತ್ತು...

ಚಿಕ್ಕಮಗಳೂರು: ಮಹಲ್ ಗ್ರಾಮವನ್ನು ದತ್ತು ಸ್ವೀಕರಿಸಿದ ಎನ್‍ಸಿಸಿ

ವಾರ್ತಾಭಾರತಿವಾರ್ತಾಭಾರತಿ21 Sept 2018 11:33 PM IST
share
ಚಿಕ್ಕಮಗಳೂರು: ಮಹಲ್ ಗ್ರಾಮವನ್ನು ದತ್ತು ಸ್ವೀಕರಿಸಿದ ಎನ್‍ಸಿಸಿ

ಚಿಕ್ಕಮಗಳೂರು ಸೆ.21: ಇನಾಂದತ್ತಾತ್ರೇಯ ಪೀಠ ಗ್ರಾಮಪಂಚಾಯತ್ ವ್ಯಾಪ್ತಿಯ ಮಹಲ್ ಎಂಬ ಕುಗ್ರಾಮವನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಎನ್‍ಸಿಸಿ-15 ಕರ್ನಾಟಕ ಬೆಟಾಲಿಯನ್ ದತ್ತು ಸ್ವೀಕರಿಸಿದೆ.  

ಮಹಲ್‍ನಲ್ಲಿ ಶುಕ್ರವಾರ ಆಯೋಜಿಸಿದ್ದ ದತ್ತು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಿ.ಟಿ.ರವಿ, ಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸುವಂತೆ ಸೂಚಿಸಿದರು. ಜಿಲ್ಲಾಪಂಚಾಯತ್ ಕಲ್ಯಾಣ ಕಾರ್ಯಕ್ರಮದ ವ್ಯಾಪ್ತಿಗೆ ಬರುವ ಕೆಲಸ ಕಾರ್ಯಗಳ ಜೊತೆಗೆ ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿವ್ಯಾಪ್ತಿಯ ನಿರ್ಧಿಷ್ಟ ಕಾರ್ಯಕ್ರಮಗಳನ್ನು ಪಟ್ಟಿಮಾಡುವಂತೆ ಸಭೆಯಲ್ಲಿ ಪಿಡಿಒಗೆ ಸೂಚಿಸಿದರು

'ದತ್ತು ಸ್ವೀಕಾರ'ಕ್ಕೆ ಬೇರೆ ವಿಪರೀತ ಅರ್ಥ ಕಲ್ಪಿಸಬೇಕಾಗಿಲ್ಲ. ಊರು ಬಿಡಿಸುವುದಿಲ್ಲ, ಜಾಗ ವಶಪಡಿಸಿಕೊಳ್ಳುವುದಿಲ್ಲ. ಅದರ ಬದಲಿಗೆ ಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಸರಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳುವಳಿಕೆ ನೀಡಿ ಸಹಕರಿಸಲಿದ್ದಾರೆ. ವೈಯಕ್ತಿಕ ಅಭಿವೃದ್ಧಿಯ ಕಡೆಗೂ ತರಬೇತಿ ನೀಡಿ ಒಳ್ಳೆಯ ನಾಗರಿಕರಾಗಿ ಬದುಕುವುದನ್ನು ಕಲಿಸುತ್ತಾರೆ. ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಪಟ್ಟವರೊಂದಿಗೆ ವ್ಯವಹರಿಸಿ ಗ್ರಾಮದ ಒಳಿತಿಗೆ ಬಂದಿರುವವರ ಬಗ್ಗೆ ಭಯ-ಆತಂಕಬೇಡ ಎಂದು ಶಾಸಕ ರವಿ ನುಡಿದರು. 

ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಮಾತನಾಡಿ, ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸಲು ಎನ್‍ಸಿಸಿ ನೆರವಾಗುತ್ತದೆ. ಅರಣ್ಯದಿಂದ ಆವೃತ್ತವಾದ ಎತ್ತರ ಪ್ರದೇಶದ ನಗರದಿಂದ ದೂರವಿರುವ ಮಹಲ್ ಗ್ರಾಮವನ್ನು ದತ್ತುಸ್ವೀಕಾರಕ್ಕೆ ಆಯ್ಕೆ ಮಾಡಿರುವುದರಲ್ಲೇ ನಿಜವಾದ ಕಾಳಜಿ ಅರ್ಥವಾಗುತ್ತದೆ. ಇತರ ಸಂಸ್ಥೆಗಳಿಗಿಂತ ಎನ್‍ಸಿಸಿ ಭಿನ್ನವಾದ ಶಿಸ್ತುಬದ್ಧ ಸಂಸ್ಥೆ. ಸಸಿ ನೆಡುವುದಷ್ಟೇ ಅಲ್ಲ ಹೆಮ್ಮರವಾಗಿ ಬೆಳೆಯುವವರೆಗೂ ಜೊತೆಗಿದ್ದು ಸಹಕಾರಿಸುವುರೆಂದು ಆಶಿಸಿದರು.

ಎನ್‍ಸಿಸಿ 15ಕರ್ನಾಟಕ ಬೆಟಾಲಿಯನ್ ಹಾಸನ ಕಮಾಂಡಿಂಗ್ ಅಧಿಕಾರಿ ಡಿ.ಕೆ.ಸಿಂಗ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನಮಂತ್ರಿಗಳ ಆಸಕ್ತಿಯ ಪರಿಣಾಮವಾಗಿ ಎನ್‍ಸಿಸಿಯಿಂದ ಪ್ರತಿ ಕಮಾಂಡಿಂಗ್ ವ್ಯಾಪ್ತಿಯಲ್ಲಿ ಒಂದುಗ್ರಾಮವನ್ನು ದತ್ತು ತೆಗೆದುಕೊಂಡು ಅದರ ಸರ್ವಾಂಗೀಣ ಅಭಿವೃದ್ಧಿಗೆ ನೆರವು ನೀಡುವ ಯೋಜನೆ ರೂಪುಗೊಂಡಿದೆ. ಯಾವುದೇ ಹಣಕಾಸಿನ ನೆರವಿಲ್ಲದಿದ್ದರೂ ಗ್ರಾಮದ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹರಿಸಲು ಶ್ರಮಿಸಲಾಗುವುದು. 

ಹಾಸನ ಕಮಾಂಡರ್ ವ್ಯಾಪ್ತಿಯಲ್ಲಿ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ 17ಎನ್‍ಸಿಸಿ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 1800 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಐಡಿಎಸ್‍ಜಿ ಕಾಲೇಜಿನ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರೊಂದಿಗೆ ಗ್ರಾಮದ ಆದ್ಯತೆಗಳ ಸಮೀಕ್ಷೆ ನಡೆಸಲಾಗಿದೆ. ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರಮೂಲಕ ತಿಳಿಸಲಾಗಿದೆ ಎಂದು ವಿವರಿಸಿದರು.

ಶಿಕ್ಷಣ ತಜ್ಞ ಬಿ.ಎಚ್.ನರೇಂದ್ರಪೈ, ರೋಟರಿ ಅಧ್ಯಕ್ಷ ಅಭಿಜಿತ್‍ ಪೈ, ಜಿ.ಪಂ.ಸದಸ್ಯೆ ಜಸಿಂತಾ ಅನಿಲ್, ಐ.ಡಿ.ಪೀಠ ಗ್ರಾ.ಪಂ.ಉಪಾಧ್ಯಕ್ಷೆ ದೇವಕಿ, ಸದಸ್ಯ ಮಂಜುನಾಥ, ಪಿಡಿಓ ರಾಜಕುಮಾರ ಮತ್ತಿತರರು ಪಾಲ್ಗೊಂಡಿದ್ದರು. ಹಾಸನದ ಕ್ಯಾಪ್ಟನ್ ಕುಸುಮಾ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X