Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ ಮಹಿಳೆಗೆ ಜೀತ ಪದ್ಧತಿಯಡಿ...

ದಲಿತ ಮಹಿಳೆಗೆ ಜೀತ ಪದ್ಧತಿಯಡಿ ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ದಸಂಸ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Sept 2018 7:44 PM IST
share
ದಲಿತ ಮಹಿಳೆಗೆ ಜೀತ ಪದ್ಧತಿಯಡಿ ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ದಸಂಸ ಆಗ್ರಹ

ಬೆಂಗಳೂರು, ಸೆ.22: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಕ್ಕಳಲೆ ಗ್ರಾಮದಲ್ಲಿ ವಾಸವಾಗಿರುವ ದಲಿತ ಮಹಿಳೆಯ ಮೇಲೆ ಜೀತಪದ್ಧತಿ ನೆಪದಲ್ಲಿ ದೌರ್ಜನ್ಯವೆಸಗಿ, ಅಪಹರಿಸಿದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ದಸಂಸ ಆಗ್ರಹಿಸಿದೆ.

ಶನಿವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಮೈಸೂರು ಬ್ಯಾಂಕ್ ವೃತ್ತದಲ್ಲಿ ದಲಿತ ಮಹಿಳೆಯ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ಧ ಪೊರಕೆ ಪ್ರದರ್ಶಿಸುವುದರ ಮೂಲಕ ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಕೂಡಲೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ವೇಳೆ ದಸಂಸ ಮುಖಂಡ ಡಾ.ರಘು ಮಾತನಾಡಿ, ಸೆ.20 ರಂದು ಮದ್ದೂರು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಕುದರಗುಂಡಿ ಗ್ರಾಮದ ನಾಗೇಶ್ ಮತ್ತು ಅವರ ಸಹಚರರು ದಲಿತ ಮಳೆಯ ಮೇಲೆ ದೌರ್ಜನ್ಯ ನಡೆಸಿ ಜೀತಕ್ಕಾಗಿ ಅಪಹರಣ ಮಾಡಿದ್ದಾರೆ. ರಾಜ್ಯ ಜೀತ ಮುಕ್ತವಾಗಿದೆ ಎಂದು ಸರಕಾರ, ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಜೀತದ ಹೆಸರಿನಲ್ಲಿ ದಲಿತರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.

ಆರೋಪಿಗಳು ದಲಿತ ಮಹಿಳೆಯನ್ನು ಪ್ರಾಣಿಯ ರೀತಿಯಲ್ಲಿ ಕಾರಿನಲ್ಲಿ ಅಪಹರಿಸಿದ್ದಾರೆ. ಈ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರಗೊಂಡಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಎಚ್ಚೆತ್ತುಕೊಂಡಿಲ್ಲ. ಅಂದರೆ, ದಲಿತ ಸಮುದಾಯಕ್ಕೆ ಏನೇ ಸಮಸ್ಯೆ, ಸಂಕಷ್ಟವಾದರೂ ಯಾರೂ ಕೇಳುವುದಿಲ್ಲ, ಏನೂ ಆಗುವುದಿಲ್ಲ ಎಂಬುದು ಮುಂದುವರೆದಿದೆ ಎಂದು ಅವರು ವಿಷಾದಿಸಿದರು.

ಮಂಡ್ಯದ ಈ ಘಟನೆಗೆ ಜಿಲ್ಲಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಸಡ್ಡೆಯ ಮನೋಭಾವವೇ ಕಾರಣ. ಇದು ಸರಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಆರೋಪಿಸಿದರು.

ಆರೋಪಿಗಳನ್ನು ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ ಹಾಗೂ ಜೀತ ನಿರ್ಮೂಲನ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಹಾಗೂ ಇವರನ್ನು ಗಡಿಪಾರು ಮಾಡಿ ಕಾನೂನು ಕ್ರಮಕೈಗೊಳ್ಳಬೇಕು. ಅಲ್ಲದೆ, ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆಯನ್ನು ಜೀತ ಮುಕ್ತರನ್ನಾಗಿಸಿ ಸರಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X